Homeಅಂತರಾಷ್ಟ್ರೀಯಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

ಕೊನೆಗೂ ತನ್ನ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಂಡ ‌ಅಮೆರಿಕಾದ ನಿರ್ಗಮಿತ ಅಧ್ಯಕ್ಷ

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ಗೆಲುವನ್ನು ಡೊನಾಲ್ಡ್ ಟ್ರಂಪ್ ಕೊನೆಗೂ ಒಪ್ಪಿಕೊಂಡಿದ್ದಾರೆ. ಸುಗಮ, ಕ್ರಮಬದ್ದ ಹಾಗೂ ತಡೆರಹಿತವಾಗಿ ಅಧಿಕಾರವನ್ನು ಹಸ್ತಾಂತರಿಸುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಸಂಸತ್‌ ಕಟ್ಟಡದ ಮೇಲೆ ನಡೆದ ದಾಳಿಯನ್ನು ಅವರು ಖಂಡಿಸಿದ್ದಾರೆ.

ಬುಧವಾರ ಅಮೆರಿಕ ಸಂಸತ್‌‌ನಲ್ಲಿ ಜೋ ಬೈಡೆನ್ ಗೆಲುವನ್ನು ಪ್ರಮಾಣೀಕರಿಸುವ ಕಾರ್ಯಕ್ರಮದ ಸಮಯದಲ್ಲಿ ಕಟ್ಟಡಕ್ಕೆ ಮುತ್ತಿಗೆ ಹಾಕಿರುವ ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸಿದ್ದರು. ಈ ವೇಳೆ ನಾಲ್ವರು ಮೃತಪಟ್ಟಿದ್ದರು. ಅಮೆರಿಕ ಸಂಸತ್‌ ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಿದ್ದು, ನೂತನ ಆಡಳಿತ ಜನವರಿ 20 ರಂದು ಪ್ರಾರಂಭವಾಲಿದೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

“ಚುನಾವಣಾ ಫಲಿತಾಂಶಕ್ಕೆ ನನ್ನ ಸಮ್ಮತಿಯಿಲ್ಲವಾದರೂ, ಜನವರಿ 20 ರಂದು ಅಧಿಕಾರ ಹಸ್ತಾಂತರ ಸುಗಮವಾಗಿ ನಡೆಯಲಿದೆ. ನನ್ನ ಅಧಿಕಾರಾವಧಿ ಅಮೆರಿಕದ ಅಧ್ಯಕ್ಷೀಯ ಇತಿಹಾಸದಲ್ಲೇ ಮೊದಲ ಅತ್ಯುತ್ತಮ ಅವಧಿಯಾಗಿದೆ. ಅದು ಈಗ ಕೊನೆಯಾಗುತ್ತಿದೆಯಾದರೂ, ಅವೆುರಿಕವನ್ನು ಮತ್ತೆ ಶ್ರೇಷ್ಠ ದೇಶವನ್ನಾಗಿಸುವ ನಮ್ಮ ಹೋರಾಟದ ಆರಂಭವಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮ್ಮ ಬೆಂಬಲಿಗರ ಹಿಂಸಾಚಾರವನ್ನು ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. “ಇದೊಂದು ಹೇಯ ಕೃತ್ಯ. ಎಲ್ಲ ಅಮೆರಿಕನ್ನರಂತೆ ನಾನು ಕೂಡಾ ಹಿಂಸಾಚಾರ, ಕಾನೂನು ಬಾಹಿರ ಚಟುವಟಿಕೆ ಮತ್ತು ಹಾನಿಕರ ಘಟನೆಯಿಂದ ಅಸಮಾಧಾನಗೊಂಡಿದ್ದೇನೆ. ಅಮೆರಿಕ ಸಂಸತ್‌ ಕಟ್ಟಡವನ್ನು ಸುರಕ್ಷಿತವಾಗಿರಿಸಲು ಮತ್ತು ಒಳನುಗ್ಗಿದ ಪ್ರತಿಭಟನಕಾರರನ್ನು ಹೊರಹಾಕಲು ತಕ್ಷಣ ನ್ಯಾಷನಲ್ ಗಾರ್ಡ್ ನಿಯೋಜಿಸಿ ಫೆಡರಲ್ ಕಾನೂನು ಜಾರಿಗೊಳಿಸಿದ್ದೇನೆ. ಅಮೆರಿಕ ಯಾವತ್ತೂ ಕಾನೂನು ಸುವ್ಯವಸ್ಥೆಯ ರಾಷ್ಟ್ರವಾಗಿರಬೇಕು” ಎಂದು ಹೇಳಿದ್ದಾರೆ.

ಗಲಭೆಕೋರರನ್ನು ದೇಶೀಯ ಭಯೋತ್ಪಾದಕರೆಂದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್

ಸಂಸತ್‌ ಕಟ್ಟಡದ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸಿರುವ ನಿಯೋಜಿತ ಅಧ್ಯಕ್ಷ ಜೋ ಬೈಡೆನ್, ಗಲಭೆಕೋರರನ್ನು ದೇಶೀಯ ಭಯೋತ್ಪಾದಕರು ಎಂದು ಕರೆದಿದ್ದಾರೆ. ಅಲ್ಲದೆ ಘಟನೆಗೆ ಡೊನಾಲ್ಡ್ ಟ್ರಂಪ್ ಕಾರಣ ಎಂದು ಆರೋಪಿಸಿದ ಅವರು, ಇದು ದೇಶದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಎಂದಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...