Homeಅಂತರಾಷ್ಟ್ರೀಯಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

ಕೊನೆಗೂ ತನ್ನ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಂಡ ‌ಅಮೆರಿಕಾದ ನಿರ್ಗಮಿತ ಅಧ್ಯಕ್ಷ

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ಗೆಲುವನ್ನು ಡೊನಾಲ್ಡ್ ಟ್ರಂಪ್ ಕೊನೆಗೂ ಒಪ್ಪಿಕೊಂಡಿದ್ದಾರೆ. ಸುಗಮ, ಕ್ರಮಬದ್ದ ಹಾಗೂ ತಡೆರಹಿತವಾಗಿ ಅಧಿಕಾರವನ್ನು ಹಸ್ತಾಂತರಿಸುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಸಂಸತ್‌ ಕಟ್ಟಡದ ಮೇಲೆ ನಡೆದ ದಾಳಿಯನ್ನು ಅವರು ಖಂಡಿಸಿದ್ದಾರೆ.

ಬುಧವಾರ ಅಮೆರಿಕ ಸಂಸತ್‌‌ನಲ್ಲಿ ಜೋ ಬೈಡೆನ್ ಗೆಲುವನ್ನು ಪ್ರಮಾಣೀಕರಿಸುವ ಕಾರ್ಯಕ್ರಮದ ಸಮಯದಲ್ಲಿ ಕಟ್ಟಡಕ್ಕೆ ಮುತ್ತಿಗೆ ಹಾಕಿರುವ ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸಿದ್ದರು. ಈ ವೇಳೆ ನಾಲ್ವರು ಮೃತಪಟ್ಟಿದ್ದರು. ಅಮೆರಿಕ ಸಂಸತ್‌ ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಿದ್ದು, ನೂತನ ಆಡಳಿತ ಜನವರಿ 20 ರಂದು ಪ್ರಾರಂಭವಾಲಿದೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

“ಚುನಾವಣಾ ಫಲಿತಾಂಶಕ್ಕೆ ನನ್ನ ಸಮ್ಮತಿಯಿಲ್ಲವಾದರೂ, ಜನವರಿ 20 ರಂದು ಅಧಿಕಾರ ಹಸ್ತಾಂತರ ಸುಗಮವಾಗಿ ನಡೆಯಲಿದೆ. ನನ್ನ ಅಧಿಕಾರಾವಧಿ ಅಮೆರಿಕದ ಅಧ್ಯಕ್ಷೀಯ ಇತಿಹಾಸದಲ್ಲೇ ಮೊದಲ ಅತ್ಯುತ್ತಮ ಅವಧಿಯಾಗಿದೆ. ಅದು ಈಗ ಕೊನೆಯಾಗುತ್ತಿದೆಯಾದರೂ, ಅವೆುರಿಕವನ್ನು ಮತ್ತೆ ಶ್ರೇಷ್ಠ ದೇಶವನ್ನಾಗಿಸುವ ನಮ್ಮ ಹೋರಾಟದ ಆರಂಭವಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮ್ಮ ಬೆಂಬಲಿಗರ ಹಿಂಸಾಚಾರವನ್ನು ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. “ಇದೊಂದು ಹೇಯ ಕೃತ್ಯ. ಎಲ್ಲ ಅಮೆರಿಕನ್ನರಂತೆ ನಾನು ಕೂಡಾ ಹಿಂಸಾಚಾರ, ಕಾನೂನು ಬಾಹಿರ ಚಟುವಟಿಕೆ ಮತ್ತು ಹಾನಿಕರ ಘಟನೆಯಿಂದ ಅಸಮಾಧಾನಗೊಂಡಿದ್ದೇನೆ. ಅಮೆರಿಕ ಸಂಸತ್‌ ಕಟ್ಟಡವನ್ನು ಸುರಕ್ಷಿತವಾಗಿರಿಸಲು ಮತ್ತು ಒಳನುಗ್ಗಿದ ಪ್ರತಿಭಟನಕಾರರನ್ನು ಹೊರಹಾಕಲು ತಕ್ಷಣ ನ್ಯಾಷನಲ್ ಗಾರ್ಡ್ ನಿಯೋಜಿಸಿ ಫೆಡರಲ್ ಕಾನೂನು ಜಾರಿಗೊಳಿಸಿದ್ದೇನೆ. ಅಮೆರಿಕ ಯಾವತ್ತೂ ಕಾನೂನು ಸುವ್ಯವಸ್ಥೆಯ ರಾಷ್ಟ್ರವಾಗಿರಬೇಕು” ಎಂದು ಹೇಳಿದ್ದಾರೆ.

ಗಲಭೆಕೋರರನ್ನು ದೇಶೀಯ ಭಯೋತ್ಪಾದಕರೆಂದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್

ಸಂಸತ್‌ ಕಟ್ಟಡದ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸಿರುವ ನಿಯೋಜಿತ ಅಧ್ಯಕ್ಷ ಜೋ ಬೈಡೆನ್, ಗಲಭೆಕೋರರನ್ನು ದೇಶೀಯ ಭಯೋತ್ಪಾದಕರು ಎಂದು ಕರೆದಿದ್ದಾರೆ. ಅಲ್ಲದೆ ಘಟನೆಗೆ ಡೊನಾಲ್ಡ್ ಟ್ರಂಪ್ ಕಾರಣ ಎಂದು ಆರೋಪಿಸಿದ ಅವರು, ಇದು ದೇಶದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಎಂದಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...