ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಗೆ ರಾಹುಲ್ ಗಾಂಧಿ ಬಗ್ಗೆ ಭಯ ಕಾಡುತ್ತಿದೆ. ಹಾಗಾಗಿ ಗಾಂಧಿ ಕುಟುಂಬವನ್ನು ಅವಮಾನಿಸುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ಶಿವಸೇನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರವಾಗಿ ಬ್ಯಾಟಿಂಗ್ ಮಾಡಿದೆ.
ಇದನ್ನೂ ಓದಿ: ಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್ನಾಮ್ ಸಿಂಗ್!
ಪಕ್ಷದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದು, ರಾಹುಲ್ ಗಾಂಧಿ ಮತ್ತೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ತಯಾರಿಯಲ್ಲಿದ್ದಾರೆ. ಇದು ಉತ್ತಮ ಬೆಳವಣಿಗೆ. ಬಿಜೆಪಿಗೆ ನರೇಂದ್ರ ಮೋದಿ ಹೇಗೋ ಕಾಂಗ್ರೆಸ್ಗೆ ರಾಹುಲ್ ಗಾಂಧಿ ಬಿಟ್ಟರೆ ಬೇರೆ ಮಾರ್ಗವಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳಲೇಬೇಕು. ಸ್ವಲ್ಪ ಸಮಯದ ವರೆಗೆ ರಾಹುಲ್ ಗಾಂಧಿ ಹೋದ ನಂತರ, ಪಕ್ಷದ ಹಿಡಿತವು ದುರ್ಬಲಗೊಂಡಿದೆ. ಈಗ ರಾಹುಲ್ ಗಾಂಧಿ ಮತ್ತೆ ಅಧಿಕಾರಕ್ಕೆ ಮರಳುತ್ತಿದ್ದಾರೆ ಎಂದು ಹೇಳಿದೆ.
ರಾಹುಲ್ ಗಾಂಧಿಯನ್ನು ದುರ್ಬಲ ನಾಯಕ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ರಾಹುಲ್ ಗಾಂಧಿ ಬಗ್ಗೆ ಭಯ ಕಾಡುತ್ತಿದೆ. ಇಲ್ಲವೆಂದರೆ ಗಾಂಧಿ ಕುಟುಂಬವನ್ನು ದೂರುವ ಅನಗತ್ಯ ಅಭಿಯಾನವನ್ನು ಪ್ರಾರಂಭಿಸುತ್ತಿರಲಿಲ್ಲ ಎಂದು ಸಂಪಾದಕಿಯ ಅಭಿಪ್ರಾಯ ಪಟ್ಟಿದೆ.
ಇದನ್ನೂ ಓದಿ: ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ