Homeಅಂತರಾಷ್ಟ್ರೀಯಡೊನಾಲ್ಡ್‌‌ ಟ್ರಂಪ್‌ ಫೇಸ್‌‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗೆ ಅನಿರ್ದಿಷ್ಟಾವಧಿ ತಡೆ

ಡೊನಾಲ್ಡ್‌‌ ಟ್ರಂಪ್‌ ಫೇಸ್‌‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗೆ ಅನಿರ್ದಿಷ್ಟಾವಧಿ ತಡೆ

- Advertisement -
- Advertisement -

ಅಮೆರಿಕ ಸಂಸತ್‌ ಗಲಭೆಗೆ ಪ್ರಚೋದಿಸಿ ವಿವಾದಕ್ಕೀಡಾಗಿರುವ ನಿರ್ಗಮನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್‌‌ಬುಕ್ ಖಾತೆಯನ್ನು ಅನಿರ್ದಿಷ್ಟಾವಧಿಗೆ ತಡೆಹಿಡಿಯಲಾಗಿದೆ ಎಂದು ಫೇಸ್‌ಬುಕ್ ಸಿಇಒ ಮಾರ್ಕ್‌ ಝಕರ್‌‌ಬರ್ಗ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣಾ ಎಣಿಕೆಯಲ್ಲಿ ಸೋತ ಡೊನಾಲ್ಡ್ ಟ್ರಂಪ್, ತನ್ನ ಸೋಲನ್ನು ಒಪ್ಪಿಕೊಳ್ಳದೆ ತಾನೇ ವಿಜಯಿಯಾಗಿದ್ದೇನೆ ಎಂದು ಪ್ರತಿಪಾದಿಸಿದ್ದರು. ಚುನಾವಣಾ ಫಲಿತಾಂಶದ ವಿರುದ್ದ ಸುಪ್ರೀಂಕೋರ್ಟ್‌ಗೆ ಕದವನ್ನು ತಟ್ಟಿದ್ದರು. ಆದರೆ ಅವರು ಸಲ್ಲಿಸಿರುವ ಬಾಗಶಃ ಎಲ್ಲಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬುಧವಾರ ತನ್ನ ಬೆಂಬಲಿಗರಿಗೆ ಸಂಸತ್‌ ಭವನಕ್ಕೆ ರ್‍ಯಾಲಿ ಹೊರಡಿ ಎಂದು ಕರೆ ನೀಡಿದ್ದ ಟ್ರಂಪ್, ನೆರೆದಿದ್ದ ಜನರನ್ನು ಉದ್ರಿಕ್ತರನ್ನಾಗಿ ಮಾಡಿದ್ದರು.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಅದರ ನಂತರ ಅವರ ಉದ್ರಿಕ್ತ ಬೆಂಬಲಿಗರು ಸಂಸತ್‌ ಬಳಿ ತೆರಳಿ ಅಲ್ಲಿ ನೆರೆದಿದ್ದರು. ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮ ನಡೆಯುವ ವೇಳೆ ಬಲವಂತವಾಗಿ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದರು. ಇದರಿಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ.

ಈ ಹಿನ್ನಲೆಯಲ್ಲಿ ಫೇಸ್‌‌ಬುಕ್‌, ಟ್ರಂಪ್ ಸಾಮುದಾಯಿಕ ನಿಯಮಗಳನ್ನು ಉಲ್ಲಂಘಿಸಿದ್ದಾರೆಂದು, ಅವರ ಖಾತೆಯನ್ನು 24 ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ನಿಯಮ ಪಾಲಿಸದ ಟ್ರಂಪ್ ಖಾತೆಯನ್ನು ಅನಿರ್ದಿಷ್ಟಾವಧಿಯವರೆಗೆ ಬಂದ್ ಮಾಡಲಾಗಿದೆ ಎಂದು ಝಕರ್‌‌ಬರ್ಗ್ ತಿಳಿಸಿದ್ದಾರೆ.

ಈ ಸಮಯದಲ್ಲಿ ಅಧ್ಯಕ್ಷರು ಫೇಸ್‌ಬುಕ್ ಬಳಸುದಕ್ಕೆ ಅನುವು ಮಾಡಿಕೊಡುವುದು ಅಪಾಯಕಾರಿ ಎಂದು ನಾವು ನಂಬಿದ್ದೇವೆ. ಅದಕ್ಕಾಗಿ ಅವರ ಫೇಸ್‍ಬುಕ್ ಹಾಗೂ ಇನ್‍ಸ್ಟಾಗ್ರಾಮ್ ಖಾತೆಗಳ ಮೇಲಿನ ಅಮಾನತನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಿದ್ದೇವೆ. ಈ ಅಮಾನತು ಅಧಿಕಾರದ ಹಸ್ತಾಂತರ ಶಾಂತಿಯುತವಾಗಿ ನಡೆಯುವ ತನಕ, ಅಂದರೆ ಮುಂದಿನ ಕನಿಷ್ಠ ಎರಡು ವಾರಗಳ ತನಕ ಇರಲಿದೆ ಎಂದು ಝಕರ್‌‌ಬರ್ಗ್ ಹೇಳಿದ್ದಾರೆ.

ಅಲ್ಲಿ ಜನವರಿ 20 ಕ್ಕೆ ನೂತನ ಅಧ್ಯಕ್ಷರು ಅಧಿಕಾರ ವಹಿಸಲಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...