Homeನಿಜವೋ ಸುಳ್ಳೋಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

ಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

- Advertisement -
- Advertisement -

| ಮಲ್ಲಿ |

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಸಾರ್ವಜನಿಕ ವೇದಿಕೆಗಳ ಮೂಲಕ ಪದೇ ಪದೇ ಸುಳ್ಳುಗಳನ್ನು ಹೇಳುತ್ತ ಬಂದಿದ್ದು, ಈಗವರು ಆಯ್ದ ಚಾನೆಲ್‍ಗಳಲ್ಲಿ ಸಂದರ್ಶನ ನೀಡುತ್ತ, ತಮ್ಮ ಸರ್ಕಾರದ ಗೃಹ ಇಲಾಖೆಯ ಅಂಕಿಅಂಶಗಳನ್ನೇ ಮರೆಮಾಚಿ ಸುಳ್ಳು ಹೇಳುತ್ತಾರೆ. ಎದುರಿಗೆ ಪ್ರಶ್ನೆ ಕೇಳಲು ಕೂತ ಭೂಪರು ಗೋಣು ಹಾಕುತ್ತಾರೆ. ಈ ಸುಳ್ಳುಗಳ ಜೊತೆಗೆ ದೇಶಭಕ್ತಿಯ ಕುರಿತಾಗಿ ಪ್ರಧಾನಿ ನಿರರ್ಗಳವಾಗಿ ಬೊಗಳೆ ಬಿಡುತ್ತಾರೆ.
ರಫೆಲ್ ಕುರಿತು ಕೇಳಿದ ಪ್ರಶ್ನೆಗಳಿಗೆ ಚಾನೆಲ್ ವಿರುದ್ಧವೇ ಸಿಟ್ಟಾದ ಪ್ರಧಾನಿ, ಇದನ್ನೇ ನೆಪ ಮಾಡಿಕೊಂಡು ರಫೆಲ್‍ಗೆ ತಾವೇ ಕ್ಲೀನ್‍ಚಿಟ್ ಕೊಟ್ಟುಕೊಂಡರು. ಇದು ಕೂಡ ನಾಟಕೀಯವಾಗಿಯೇ ಇತ್ತು. ಮತ್ತು ಪೂರ್ವಯೋಜಿತವಾಗಿತ್ತು.

ನಿನ್ನೆ ಏಪ್ರಿಲ್ 5ರಂದು ಎಬಿಪಿ ನ್ಯೂಸ್ ಚಾನೆಲ್‍ನಲ್ಲಿ ಈ ಸಂದರ್ಶನ ಪ್ರಸಾರವಾಗಿದ್ದು, ಅವರು ಮಾಡಿರುವ ಸುಳ್ಳು ಕ್ಲೈಮ್‍ಗಳನ್ನು ಮತ್ತು ವಾಸ್ತವವನ್ನು ನಿಮ್ಮ ಮುಂದಿಡುತ್ತಿದ್ದೇವೆ. 75 ನಿಮಿಷಗಳ ಈ ಸಂದರ್ಶನದಲ್ಲಿ ಸತ್ಯದ ತಲೆ ಮೇಲೆ ಹೊಡೆದಂತಿರುವ ಸುಳ್ಳುಗಳನ್ನು ಇಲ್ಲಿ ಆಯ್ದು ನೀಡಲಾಗಿದೆ.

ಮೋದಿ ಮಿಥ್ಯ: “ಈಗ ಜಮ್ಮು ಕಾಶ್ಮೀರದಲ್ಲಿ ಮೊದಲು ನಡೆಯುತ್ತಿದ್ದ ಘಟನೆಗಳು (ಉಗ್ರರ ದಾಳಿ, ಚಟುಚಟಿಕೆ) ಈಗ ತುಂಬ ಕಡಿಮೆಯಾಗಿವೆ….”
ಸತ್ಯ: ಗೃಹ ಇಲಾಖೆಯ 2017-18ರ ವಾರ್ಷಕ ವರದಿ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ 2013-17ರ ಅವಧಿಯಲ್ಲಿ ಭಯೋತ್ಪಾದನಾ ಹಿಂಸೆಯ ಪ್ರಕರಣಗಳು ಹೆಚ್ಚಿವೆ.
ಭಯೋತ್ಪಾದನಾ ಹಿಂಸೆಯ ಘಟನೆಗಳು:
2013 : 170, 2014: 222, 2015: 208, 2016: 322, 2017: 342,
ರಾಜ್ಯಸಭೆಯಲ್ಲಿ ಸರ್ಕಾರ ನೀಡಿದ ಉತ್ತರದ ಪ್ರಕಾರ, 2018 ಜನವರಿ-ಜೂನ್: 231
ಅಂದರೆ, ಪ್ರಧಾನಿ ಹೇಳಿದಂತೆ ಅಲ್ಲಿ ಹಿಂಸಾಚಾರ ಕಡಿಮೆಯಾಗಿಲ್ಲ, ಬದಲಿಗೆ ಏರುತ್ತ ಸಾಗಿದೆ.
***

ಮೋದಿ ಮಿಥ್ಯ: ‘ಜಮ್ಮು-ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿದೆ…’
ಸತ್ಯ: 2018ರ ಲೇಟೆಸ್ಟ್ ಆರ್ಥಿಕ ಸಮೀಕ್ಷೆ ವರದಿ ಪ್ರಕಾರ, 2012ರಿಂದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ.
ಪ್ರವಾಸಿಗರ ಸಂಖ್ಯೆ:
2012: 1.25 ಕೋಟಿ, 2013: 1.09 ಕೋಟಿ, 2014: 95 ಲಕ್ಷ, 2015: 92 ಲಕ್ಷ,
2016: 84 ಲಕ್ಷ, 2017: 73 ಲಕ್ಷ
ಅಂದರೆ, ಈ ಅಧಿಕೃತ ಅಂಕಿಅಂಶದ ಪ್ರಕಾರ, ಮೋದಿ ಸುಳ್ಳು ಹೇಳ್ತಾ ಇದ್ದಾರೆ.
***

ಮೋದಿ ಮಿಥ್ಯ: ‘ತಮಿಳುನಾಡಿನಲ್ಲಿ ಅಣು ವಿದ್ಯುತ್ ಘಟಕದ ವಿರುದ್ಧ ಪ್ರತಿಭಟನೆ ನಡೆದಾಗ ಕಾಂಗ್ರೆಸ್ ದೇಶದ್ರೋಹ ಅಪಾದನೆಯ ಮೇಲೆ 6 ಸಾವಿರ ಜನರನ್ನು ಜೈಲಿಗೆ ಹಾಕಿತ್ತು…’
ಸತ್ಯ: ‘ಫಸ್ಟ್ ಪೋಸ್ಟ್’ ವರದಿಯ ಪ್ರಕಾರ, ಹಿರಿಯ ಪತ್ರಕರ್ತ ಸಯಾಮ ರಾಜಪ್ಪ ನೇತೃತ್ವದ ತಂಡದ ಅಧ್ಯಯನದ ಪ್ರಕಾರ, 2011ರ ಸೆಪ್ಟೆಂಬರ್-ಡಿಸೆಂಬರ್ ಅವಧಿಯಲ್ಲಿ ತಮಿಳುನಾಡು ಪೊಲೀಸರು ದೇಶದ್ರೋಹದ ಆರೋಪದ ಮೇಲೆ ಕೂಡುಕೂಳಂ ಅಣು ಸ್ಥಾವರದ ವಿರುದ್ಧ ಪ್ರತಿಭಟಿಸುತ್ತಿದ್ದ 6 ಸಾವಿರ ಜನರನ್ನು ಜೈಲಿಗೆ ಹಾಕಿದ್ದರು.
ಆ ಸಂದರ್ಭದಲ್ಲಿ ಅಲ್ಲಿ ಆಗ ಎಐಡಿಎಂಕೆ (ಈಗ ಬಿಜೆಪಿಯ ಮಿತ್ರ) ಅಧಿಕಾರದಲ್ಲಿತ್ತು.
ಅಂದರೆ, ಆ ಸಂದರ್ಭದಲ್ಲಿ ಡಿಎಂಕೆ-ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಇಲ್ಲೂ ಪ್ರಧಾನಿ ಹಸಿಸುಳ್ಳನ್ನು ಹೇಳಿದರು.
***

ಮೋದಿ ಮಿಥ್ಯ: 4.25 ಕೋಟಿ ಜನರು ಮುದ್ರಾ ಸಾಲ ಪಡೆದಿದ್ದು, ಅವರು ಉದ್ಯಮ ಆರಂಭಿಸಿ ಎಷ್ಟೋ ಜನರಿಗೆ ಉದ್ಯೋಗ ಕೊಟ್ಟರಬಹುದಲ್ಲ…ಇದು ಉದ್ಯೋಗ ಸೃಷ್ಟಿಯಲ್ಲವೇ? ಸಿಐಐ (ವಾಣಿಜ್ಯೋದ್ಯಮ ಸಂಘ) ಪ್ರಕಾರ 6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ.
ಸತ್ಯ: ಮೊದಲಿಗೆ ಮುದ್ರಾ ಸಾಲ ಪಡೆಯುವುದನ್ನು ಉದ್ಯೋಗ ಸೃಷ್ಟಿಗೆ ತಳುಕು ಹಾಕುವುದು ಕಷ್ಟವೇ.
ಎರಡನೇದಾಗಿ, ಸಿಎಂಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ವರದಿ ಪ್ರಕಾರ, 2016-18ರ ಅವಧಿಯಲ್ಲಿ ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ ತುಂಬ ಕಡಿಮೆ ಪ್ರಮಾಣದಲ್ಲಿದೆ.


ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ:
ಸೆಪ್ಟೆಂಬರ್ 2016 : 45.98, ಸೆಪ್ಟೆಂಬರ್ 2017: 44.0, ಸೆಪ್ಟೆಂಬರ್ 2018: 42.81
ಇನ್ನೊಂದು ಕಡೆ, ಸರ್ಕಾರ ಉದ್ಯೋಗ/ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡುತ್ತಿಲ್ಲ. ಎನ್‍ಎಸ್‍ಎಸ್‍ಒ ಅಧ್ಯಯನದ ವರದಿ ( ಸೋರಿಕೆಯಾಗಿತ್ತು) ಪ್ರಕಾರ, ಈಗ ನಿರುದ್ಯೋಗ ಪ್ರಮಾಣ ಶೇ. 6.1ರಷ್ಟಿದ್ದು, ಕಳೆದ 45 ವರ್ಷಗಳಲ್ಲೇ ಇದು ಹೆಚ್ಚಿನ ಪ್ರಮಾಣದ ನಿರುದ್ಯೋಗ ಎಂದು ವಿವರಿಸಿದೆ. ಸಿಎಂಐಇ ವರದಿ ಪ್ರಕಾರ ನಿರುದ್ಯೋಗ ಪ್ರಮಾಣ ಶೇ. 6.7
ಆದರೆ ವಾಣಿಜ್ಯೋದ್ಯಮಿಗಳ ಸಂಘದ ಲೆಕ್ಕ ಹೇಳುವ ಪ್ರಧಾನಿ, ಸರ್ಕಾರದ ಅಧಿಕೃತ ಅಂಕಿಸಂಖ್ಯೆಗಳ ಬಗ್ಗೆ ಪ್ರಸ್ತಾಪಿಸುವುದಿಲ್ಲ. ಬೀದಿಯಲ್ಲಿ ನಿಂತು ನೋಡಿದರಷ್ಟೇ ನಿರುದ್ಯೋಗದ ಭೀಕರತೆ ಅರ್ಥವಾಗುತ್ತದೆ ಮಿಸ್ಟರ್ ಪಿಎಂ!
ಸ್ಕ್ರಿಪ್ಟೆಡ್ ಸಂದರ್ಶನಗಳಲ್ಲಿ ಇವೆಲ್ಲವೂ ನಡೆಯುತ್ತವೆ. ಆದರೆ ಪ್ರೆಸ್‍ಮೀಟ್‍ನಲ್ಲಿ ನಡೆಯುವುದಿಲ್ಲ. ಹೀಗಾಗಿ ಈ ದೇಶದ ಪ್ರಧಾನಿ ಇಲ್ಲಿವರೆಗೂ ಒಂದೂ ಪ್ರೆಸ್‍ಮೀಟ್ ಮಾಡಿಲ್ಲ.
(ಆಧಾರ: ದಿ ಕ್ವಿಂಟ್ ವೆಬ್ಕೂಫ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...