Homeನಿಜವೋ ಸುಳ್ಳೋಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

ಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

- Advertisement -
- Advertisement -

| ಮಲ್ಲಿ |

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಸಾರ್ವಜನಿಕ ವೇದಿಕೆಗಳ ಮೂಲಕ ಪದೇ ಪದೇ ಸುಳ್ಳುಗಳನ್ನು ಹೇಳುತ್ತ ಬಂದಿದ್ದು, ಈಗವರು ಆಯ್ದ ಚಾನೆಲ್‍ಗಳಲ್ಲಿ ಸಂದರ್ಶನ ನೀಡುತ್ತ, ತಮ್ಮ ಸರ್ಕಾರದ ಗೃಹ ಇಲಾಖೆಯ ಅಂಕಿಅಂಶಗಳನ್ನೇ ಮರೆಮಾಚಿ ಸುಳ್ಳು ಹೇಳುತ್ತಾರೆ. ಎದುರಿಗೆ ಪ್ರಶ್ನೆ ಕೇಳಲು ಕೂತ ಭೂಪರು ಗೋಣು ಹಾಕುತ್ತಾರೆ. ಈ ಸುಳ್ಳುಗಳ ಜೊತೆಗೆ ದೇಶಭಕ್ತಿಯ ಕುರಿತಾಗಿ ಪ್ರಧಾನಿ ನಿರರ್ಗಳವಾಗಿ ಬೊಗಳೆ ಬಿಡುತ್ತಾರೆ.
ರಫೆಲ್ ಕುರಿತು ಕೇಳಿದ ಪ್ರಶ್ನೆಗಳಿಗೆ ಚಾನೆಲ್ ವಿರುದ್ಧವೇ ಸಿಟ್ಟಾದ ಪ್ರಧಾನಿ, ಇದನ್ನೇ ನೆಪ ಮಾಡಿಕೊಂಡು ರಫೆಲ್‍ಗೆ ತಾವೇ ಕ್ಲೀನ್‍ಚಿಟ್ ಕೊಟ್ಟುಕೊಂಡರು. ಇದು ಕೂಡ ನಾಟಕೀಯವಾಗಿಯೇ ಇತ್ತು. ಮತ್ತು ಪೂರ್ವಯೋಜಿತವಾಗಿತ್ತು.

ನಿನ್ನೆ ಏಪ್ರಿಲ್ 5ರಂದು ಎಬಿಪಿ ನ್ಯೂಸ್ ಚಾನೆಲ್‍ನಲ್ಲಿ ಈ ಸಂದರ್ಶನ ಪ್ರಸಾರವಾಗಿದ್ದು, ಅವರು ಮಾಡಿರುವ ಸುಳ್ಳು ಕ್ಲೈಮ್‍ಗಳನ್ನು ಮತ್ತು ವಾಸ್ತವವನ್ನು ನಿಮ್ಮ ಮುಂದಿಡುತ್ತಿದ್ದೇವೆ. 75 ನಿಮಿಷಗಳ ಈ ಸಂದರ್ಶನದಲ್ಲಿ ಸತ್ಯದ ತಲೆ ಮೇಲೆ ಹೊಡೆದಂತಿರುವ ಸುಳ್ಳುಗಳನ್ನು ಇಲ್ಲಿ ಆಯ್ದು ನೀಡಲಾಗಿದೆ.

ಮೋದಿ ಮಿಥ್ಯ: “ಈಗ ಜಮ್ಮು ಕಾಶ್ಮೀರದಲ್ಲಿ ಮೊದಲು ನಡೆಯುತ್ತಿದ್ದ ಘಟನೆಗಳು (ಉಗ್ರರ ದಾಳಿ, ಚಟುಚಟಿಕೆ) ಈಗ ತುಂಬ ಕಡಿಮೆಯಾಗಿವೆ….”
ಸತ್ಯ: ಗೃಹ ಇಲಾಖೆಯ 2017-18ರ ವಾರ್ಷಕ ವರದಿ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ 2013-17ರ ಅವಧಿಯಲ್ಲಿ ಭಯೋತ್ಪಾದನಾ ಹಿಂಸೆಯ ಪ್ರಕರಣಗಳು ಹೆಚ್ಚಿವೆ.
ಭಯೋತ್ಪಾದನಾ ಹಿಂಸೆಯ ಘಟನೆಗಳು:
2013 : 170, 2014: 222, 2015: 208, 2016: 322, 2017: 342,
ರಾಜ್ಯಸಭೆಯಲ್ಲಿ ಸರ್ಕಾರ ನೀಡಿದ ಉತ್ತರದ ಪ್ರಕಾರ, 2018 ಜನವರಿ-ಜೂನ್: 231
ಅಂದರೆ, ಪ್ರಧಾನಿ ಹೇಳಿದಂತೆ ಅಲ್ಲಿ ಹಿಂಸಾಚಾರ ಕಡಿಮೆಯಾಗಿಲ್ಲ, ಬದಲಿಗೆ ಏರುತ್ತ ಸಾಗಿದೆ.
***

ಮೋದಿ ಮಿಥ್ಯ: ‘ಜಮ್ಮು-ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿದೆ…’
ಸತ್ಯ: 2018ರ ಲೇಟೆಸ್ಟ್ ಆರ್ಥಿಕ ಸಮೀಕ್ಷೆ ವರದಿ ಪ್ರಕಾರ, 2012ರಿಂದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ.
ಪ್ರವಾಸಿಗರ ಸಂಖ್ಯೆ:
2012: 1.25 ಕೋಟಿ, 2013: 1.09 ಕೋಟಿ, 2014: 95 ಲಕ್ಷ, 2015: 92 ಲಕ್ಷ,
2016: 84 ಲಕ್ಷ, 2017: 73 ಲಕ್ಷ
ಅಂದರೆ, ಈ ಅಧಿಕೃತ ಅಂಕಿಅಂಶದ ಪ್ರಕಾರ, ಮೋದಿ ಸುಳ್ಳು ಹೇಳ್ತಾ ಇದ್ದಾರೆ.
***

ಮೋದಿ ಮಿಥ್ಯ: ‘ತಮಿಳುನಾಡಿನಲ್ಲಿ ಅಣು ವಿದ್ಯುತ್ ಘಟಕದ ವಿರುದ್ಧ ಪ್ರತಿಭಟನೆ ನಡೆದಾಗ ಕಾಂಗ್ರೆಸ್ ದೇಶದ್ರೋಹ ಅಪಾದನೆಯ ಮೇಲೆ 6 ಸಾವಿರ ಜನರನ್ನು ಜೈಲಿಗೆ ಹಾಕಿತ್ತು…’
ಸತ್ಯ: ‘ಫಸ್ಟ್ ಪೋಸ್ಟ್’ ವರದಿಯ ಪ್ರಕಾರ, ಹಿರಿಯ ಪತ್ರಕರ್ತ ಸಯಾಮ ರಾಜಪ್ಪ ನೇತೃತ್ವದ ತಂಡದ ಅಧ್ಯಯನದ ಪ್ರಕಾರ, 2011ರ ಸೆಪ್ಟೆಂಬರ್-ಡಿಸೆಂಬರ್ ಅವಧಿಯಲ್ಲಿ ತಮಿಳುನಾಡು ಪೊಲೀಸರು ದೇಶದ್ರೋಹದ ಆರೋಪದ ಮೇಲೆ ಕೂಡುಕೂಳಂ ಅಣು ಸ್ಥಾವರದ ವಿರುದ್ಧ ಪ್ರತಿಭಟಿಸುತ್ತಿದ್ದ 6 ಸಾವಿರ ಜನರನ್ನು ಜೈಲಿಗೆ ಹಾಕಿದ್ದರು.
ಆ ಸಂದರ್ಭದಲ್ಲಿ ಅಲ್ಲಿ ಆಗ ಎಐಡಿಎಂಕೆ (ಈಗ ಬಿಜೆಪಿಯ ಮಿತ್ರ) ಅಧಿಕಾರದಲ್ಲಿತ್ತು.
ಅಂದರೆ, ಆ ಸಂದರ್ಭದಲ್ಲಿ ಡಿಎಂಕೆ-ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಇಲ್ಲೂ ಪ್ರಧಾನಿ ಹಸಿಸುಳ್ಳನ್ನು ಹೇಳಿದರು.
***

ಮೋದಿ ಮಿಥ್ಯ: 4.25 ಕೋಟಿ ಜನರು ಮುದ್ರಾ ಸಾಲ ಪಡೆದಿದ್ದು, ಅವರು ಉದ್ಯಮ ಆರಂಭಿಸಿ ಎಷ್ಟೋ ಜನರಿಗೆ ಉದ್ಯೋಗ ಕೊಟ್ಟರಬಹುದಲ್ಲ…ಇದು ಉದ್ಯೋಗ ಸೃಷ್ಟಿಯಲ್ಲವೇ? ಸಿಐಐ (ವಾಣಿಜ್ಯೋದ್ಯಮ ಸಂಘ) ಪ್ರಕಾರ 6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ.
ಸತ್ಯ: ಮೊದಲಿಗೆ ಮುದ್ರಾ ಸಾಲ ಪಡೆಯುವುದನ್ನು ಉದ್ಯೋಗ ಸೃಷ್ಟಿಗೆ ತಳುಕು ಹಾಕುವುದು ಕಷ್ಟವೇ.
ಎರಡನೇದಾಗಿ, ಸಿಎಂಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ವರದಿ ಪ್ರಕಾರ, 2016-18ರ ಅವಧಿಯಲ್ಲಿ ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ ತುಂಬ ಕಡಿಮೆ ಪ್ರಮಾಣದಲ್ಲಿದೆ.


ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ:
ಸೆಪ್ಟೆಂಬರ್ 2016 : 45.98, ಸೆಪ್ಟೆಂಬರ್ 2017: 44.0, ಸೆಪ್ಟೆಂಬರ್ 2018: 42.81
ಇನ್ನೊಂದು ಕಡೆ, ಸರ್ಕಾರ ಉದ್ಯೋಗ/ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡುತ್ತಿಲ್ಲ. ಎನ್‍ಎಸ್‍ಎಸ್‍ಒ ಅಧ್ಯಯನದ ವರದಿ ( ಸೋರಿಕೆಯಾಗಿತ್ತು) ಪ್ರಕಾರ, ಈಗ ನಿರುದ್ಯೋಗ ಪ್ರಮಾಣ ಶೇ. 6.1ರಷ್ಟಿದ್ದು, ಕಳೆದ 45 ವರ್ಷಗಳಲ್ಲೇ ಇದು ಹೆಚ್ಚಿನ ಪ್ರಮಾಣದ ನಿರುದ್ಯೋಗ ಎಂದು ವಿವರಿಸಿದೆ. ಸಿಎಂಐಇ ವರದಿ ಪ್ರಕಾರ ನಿರುದ್ಯೋಗ ಪ್ರಮಾಣ ಶೇ. 6.7
ಆದರೆ ವಾಣಿಜ್ಯೋದ್ಯಮಿಗಳ ಸಂಘದ ಲೆಕ್ಕ ಹೇಳುವ ಪ್ರಧಾನಿ, ಸರ್ಕಾರದ ಅಧಿಕೃತ ಅಂಕಿಸಂಖ್ಯೆಗಳ ಬಗ್ಗೆ ಪ್ರಸ್ತಾಪಿಸುವುದಿಲ್ಲ. ಬೀದಿಯಲ್ಲಿ ನಿಂತು ನೋಡಿದರಷ್ಟೇ ನಿರುದ್ಯೋಗದ ಭೀಕರತೆ ಅರ್ಥವಾಗುತ್ತದೆ ಮಿಸ್ಟರ್ ಪಿಎಂ!
ಸ್ಕ್ರಿಪ್ಟೆಡ್ ಸಂದರ್ಶನಗಳಲ್ಲಿ ಇವೆಲ್ಲವೂ ನಡೆಯುತ್ತವೆ. ಆದರೆ ಪ್ರೆಸ್‍ಮೀಟ್‍ನಲ್ಲಿ ನಡೆಯುವುದಿಲ್ಲ. ಹೀಗಾಗಿ ಈ ದೇಶದ ಪ್ರಧಾನಿ ಇಲ್ಲಿವರೆಗೂ ಒಂದೂ ಪ್ರೆಸ್‍ಮೀಟ್ ಮಾಡಿಲ್ಲ.
(ಆಧಾರ: ದಿ ಕ್ವಿಂಟ್ ವೆಬ್ಕೂಫ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...