Homeನಿಜವೋ ಸುಳ್ಳೋಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

ಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

- Advertisement -
- Advertisement -

| ಮಲ್ಲಿ |

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಸಾರ್ವಜನಿಕ ವೇದಿಕೆಗಳ ಮೂಲಕ ಪದೇ ಪದೇ ಸುಳ್ಳುಗಳನ್ನು ಹೇಳುತ್ತ ಬಂದಿದ್ದು, ಈಗವರು ಆಯ್ದ ಚಾನೆಲ್‍ಗಳಲ್ಲಿ ಸಂದರ್ಶನ ನೀಡುತ್ತ, ತಮ್ಮ ಸರ್ಕಾರದ ಗೃಹ ಇಲಾಖೆಯ ಅಂಕಿಅಂಶಗಳನ್ನೇ ಮರೆಮಾಚಿ ಸುಳ್ಳು ಹೇಳುತ್ತಾರೆ. ಎದುರಿಗೆ ಪ್ರಶ್ನೆ ಕೇಳಲು ಕೂತ ಭೂಪರು ಗೋಣು ಹಾಕುತ್ತಾರೆ. ಈ ಸುಳ್ಳುಗಳ ಜೊತೆಗೆ ದೇಶಭಕ್ತಿಯ ಕುರಿತಾಗಿ ಪ್ರಧಾನಿ ನಿರರ್ಗಳವಾಗಿ ಬೊಗಳೆ ಬಿಡುತ್ತಾರೆ.
ರಫೆಲ್ ಕುರಿತು ಕೇಳಿದ ಪ್ರಶ್ನೆಗಳಿಗೆ ಚಾನೆಲ್ ವಿರುದ್ಧವೇ ಸಿಟ್ಟಾದ ಪ್ರಧಾನಿ, ಇದನ್ನೇ ನೆಪ ಮಾಡಿಕೊಂಡು ರಫೆಲ್‍ಗೆ ತಾವೇ ಕ್ಲೀನ್‍ಚಿಟ್ ಕೊಟ್ಟುಕೊಂಡರು. ಇದು ಕೂಡ ನಾಟಕೀಯವಾಗಿಯೇ ಇತ್ತು. ಮತ್ತು ಪೂರ್ವಯೋಜಿತವಾಗಿತ್ತು.

ನಿನ್ನೆ ಏಪ್ರಿಲ್ 5ರಂದು ಎಬಿಪಿ ನ್ಯೂಸ್ ಚಾನೆಲ್‍ನಲ್ಲಿ ಈ ಸಂದರ್ಶನ ಪ್ರಸಾರವಾಗಿದ್ದು, ಅವರು ಮಾಡಿರುವ ಸುಳ್ಳು ಕ್ಲೈಮ್‍ಗಳನ್ನು ಮತ್ತು ವಾಸ್ತವವನ್ನು ನಿಮ್ಮ ಮುಂದಿಡುತ್ತಿದ್ದೇವೆ. 75 ನಿಮಿಷಗಳ ಈ ಸಂದರ್ಶನದಲ್ಲಿ ಸತ್ಯದ ತಲೆ ಮೇಲೆ ಹೊಡೆದಂತಿರುವ ಸುಳ್ಳುಗಳನ್ನು ಇಲ್ಲಿ ಆಯ್ದು ನೀಡಲಾಗಿದೆ.

ಮೋದಿ ಮಿಥ್ಯ: “ಈಗ ಜಮ್ಮು ಕಾಶ್ಮೀರದಲ್ಲಿ ಮೊದಲು ನಡೆಯುತ್ತಿದ್ದ ಘಟನೆಗಳು (ಉಗ್ರರ ದಾಳಿ, ಚಟುಚಟಿಕೆ) ಈಗ ತುಂಬ ಕಡಿಮೆಯಾಗಿವೆ….”
ಸತ್ಯ: ಗೃಹ ಇಲಾಖೆಯ 2017-18ರ ವಾರ್ಷಕ ವರದಿ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ 2013-17ರ ಅವಧಿಯಲ್ಲಿ ಭಯೋತ್ಪಾದನಾ ಹಿಂಸೆಯ ಪ್ರಕರಣಗಳು ಹೆಚ್ಚಿವೆ.
ಭಯೋತ್ಪಾದನಾ ಹಿಂಸೆಯ ಘಟನೆಗಳು:
2013 : 170, 2014: 222, 2015: 208, 2016: 322, 2017: 342,
ರಾಜ್ಯಸಭೆಯಲ್ಲಿ ಸರ್ಕಾರ ನೀಡಿದ ಉತ್ತರದ ಪ್ರಕಾರ, 2018 ಜನವರಿ-ಜೂನ್: 231
ಅಂದರೆ, ಪ್ರಧಾನಿ ಹೇಳಿದಂತೆ ಅಲ್ಲಿ ಹಿಂಸಾಚಾರ ಕಡಿಮೆಯಾಗಿಲ್ಲ, ಬದಲಿಗೆ ಏರುತ್ತ ಸಾಗಿದೆ.
***

ಮೋದಿ ಮಿಥ್ಯ: ‘ಜಮ್ಮು-ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿದೆ…’
ಸತ್ಯ: 2018ರ ಲೇಟೆಸ್ಟ್ ಆರ್ಥಿಕ ಸಮೀಕ್ಷೆ ವರದಿ ಪ್ರಕಾರ, 2012ರಿಂದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ.
ಪ್ರವಾಸಿಗರ ಸಂಖ್ಯೆ:
2012: 1.25 ಕೋಟಿ, 2013: 1.09 ಕೋಟಿ, 2014: 95 ಲಕ್ಷ, 2015: 92 ಲಕ್ಷ,
2016: 84 ಲಕ್ಷ, 2017: 73 ಲಕ್ಷ
ಅಂದರೆ, ಈ ಅಧಿಕೃತ ಅಂಕಿಅಂಶದ ಪ್ರಕಾರ, ಮೋದಿ ಸುಳ್ಳು ಹೇಳ್ತಾ ಇದ್ದಾರೆ.
***

ಮೋದಿ ಮಿಥ್ಯ: ‘ತಮಿಳುನಾಡಿನಲ್ಲಿ ಅಣು ವಿದ್ಯುತ್ ಘಟಕದ ವಿರುದ್ಧ ಪ್ರತಿಭಟನೆ ನಡೆದಾಗ ಕಾಂಗ್ರೆಸ್ ದೇಶದ್ರೋಹ ಅಪಾದನೆಯ ಮೇಲೆ 6 ಸಾವಿರ ಜನರನ್ನು ಜೈಲಿಗೆ ಹಾಕಿತ್ತು…’
ಸತ್ಯ: ‘ಫಸ್ಟ್ ಪೋಸ್ಟ್’ ವರದಿಯ ಪ್ರಕಾರ, ಹಿರಿಯ ಪತ್ರಕರ್ತ ಸಯಾಮ ರಾಜಪ್ಪ ನೇತೃತ್ವದ ತಂಡದ ಅಧ್ಯಯನದ ಪ್ರಕಾರ, 2011ರ ಸೆಪ್ಟೆಂಬರ್-ಡಿಸೆಂಬರ್ ಅವಧಿಯಲ್ಲಿ ತಮಿಳುನಾಡು ಪೊಲೀಸರು ದೇಶದ್ರೋಹದ ಆರೋಪದ ಮೇಲೆ ಕೂಡುಕೂಳಂ ಅಣು ಸ್ಥಾವರದ ವಿರುದ್ಧ ಪ್ರತಿಭಟಿಸುತ್ತಿದ್ದ 6 ಸಾವಿರ ಜನರನ್ನು ಜೈಲಿಗೆ ಹಾಕಿದ್ದರು.
ಆ ಸಂದರ್ಭದಲ್ಲಿ ಅಲ್ಲಿ ಆಗ ಎಐಡಿಎಂಕೆ (ಈಗ ಬಿಜೆಪಿಯ ಮಿತ್ರ) ಅಧಿಕಾರದಲ್ಲಿತ್ತು.
ಅಂದರೆ, ಆ ಸಂದರ್ಭದಲ್ಲಿ ಡಿಎಂಕೆ-ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಇಲ್ಲೂ ಪ್ರಧಾನಿ ಹಸಿಸುಳ್ಳನ್ನು ಹೇಳಿದರು.
***

ಮೋದಿ ಮಿಥ್ಯ: 4.25 ಕೋಟಿ ಜನರು ಮುದ್ರಾ ಸಾಲ ಪಡೆದಿದ್ದು, ಅವರು ಉದ್ಯಮ ಆರಂಭಿಸಿ ಎಷ್ಟೋ ಜನರಿಗೆ ಉದ್ಯೋಗ ಕೊಟ್ಟರಬಹುದಲ್ಲ…ಇದು ಉದ್ಯೋಗ ಸೃಷ್ಟಿಯಲ್ಲವೇ? ಸಿಐಐ (ವಾಣಿಜ್ಯೋದ್ಯಮ ಸಂಘ) ಪ್ರಕಾರ 6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ.
ಸತ್ಯ: ಮೊದಲಿಗೆ ಮುದ್ರಾ ಸಾಲ ಪಡೆಯುವುದನ್ನು ಉದ್ಯೋಗ ಸೃಷ್ಟಿಗೆ ತಳುಕು ಹಾಕುವುದು ಕಷ್ಟವೇ.
ಎರಡನೇದಾಗಿ, ಸಿಎಂಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ವರದಿ ಪ್ರಕಾರ, 2016-18ರ ಅವಧಿಯಲ್ಲಿ ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ ತುಂಬ ಕಡಿಮೆ ಪ್ರಮಾಣದಲ್ಲಿದೆ.


ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ:
ಸೆಪ್ಟೆಂಬರ್ 2016 : 45.98, ಸೆಪ್ಟೆಂಬರ್ 2017: 44.0, ಸೆಪ್ಟೆಂಬರ್ 2018: 42.81
ಇನ್ನೊಂದು ಕಡೆ, ಸರ್ಕಾರ ಉದ್ಯೋಗ/ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡುತ್ತಿಲ್ಲ. ಎನ್‍ಎಸ್‍ಎಸ್‍ಒ ಅಧ್ಯಯನದ ವರದಿ ( ಸೋರಿಕೆಯಾಗಿತ್ತು) ಪ್ರಕಾರ, ಈಗ ನಿರುದ್ಯೋಗ ಪ್ರಮಾಣ ಶೇ. 6.1ರಷ್ಟಿದ್ದು, ಕಳೆದ 45 ವರ್ಷಗಳಲ್ಲೇ ಇದು ಹೆಚ್ಚಿನ ಪ್ರಮಾಣದ ನಿರುದ್ಯೋಗ ಎಂದು ವಿವರಿಸಿದೆ. ಸಿಎಂಐಇ ವರದಿ ಪ್ರಕಾರ ನಿರುದ್ಯೋಗ ಪ್ರಮಾಣ ಶೇ. 6.7
ಆದರೆ ವಾಣಿಜ್ಯೋದ್ಯಮಿಗಳ ಸಂಘದ ಲೆಕ್ಕ ಹೇಳುವ ಪ್ರಧಾನಿ, ಸರ್ಕಾರದ ಅಧಿಕೃತ ಅಂಕಿಸಂಖ್ಯೆಗಳ ಬಗ್ಗೆ ಪ್ರಸ್ತಾಪಿಸುವುದಿಲ್ಲ. ಬೀದಿಯಲ್ಲಿ ನಿಂತು ನೋಡಿದರಷ್ಟೇ ನಿರುದ್ಯೋಗದ ಭೀಕರತೆ ಅರ್ಥವಾಗುತ್ತದೆ ಮಿಸ್ಟರ್ ಪಿಎಂ!
ಸ್ಕ್ರಿಪ್ಟೆಡ್ ಸಂದರ್ಶನಗಳಲ್ಲಿ ಇವೆಲ್ಲವೂ ನಡೆಯುತ್ತವೆ. ಆದರೆ ಪ್ರೆಸ್‍ಮೀಟ್‍ನಲ್ಲಿ ನಡೆಯುವುದಿಲ್ಲ. ಹೀಗಾಗಿ ಈ ದೇಶದ ಪ್ರಧಾನಿ ಇಲ್ಲಿವರೆಗೂ ಒಂದೂ ಪ್ರೆಸ್‍ಮೀಟ್ ಮಾಡಿಲ್ಲ.
(ಆಧಾರ: ದಿ ಕ್ವಿಂಟ್ ವೆಬ್ಕೂಫ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...