Homeಮುಖಪುಟನಮ್ಮೆಲ್ಲರ ಶತ್ರು ಒಬ್ಬನೇ ಎಂದರಿತು ಹೋರಾಡೋಣ: ಸುರೀಂದರ್‌ ಸಿಂಘ್

ನಮ್ಮೆಲ್ಲರ ಶತ್ರು ಒಬ್ಬನೇ ಎಂದರಿತು ಹೋರಾಡೋಣ: ಸುರೀಂದರ್‌ ಸಿಂಘ್

ಸತ್ಯದ ಮಾತನಾಡಿದ ಗೌರಿ ಲಂಕೇಶರಂತಹವರ ಮೇಲೆ ದಾಳಿ ನಡೆದಂತೆ ಪಂಜಾಬಿನಲ್ಲಿ ಹಲವು ದಾಳಿಗಳು ನಡೆದವು. ಈ ಫ್ಯಾಸಿಸ್ಟ್‌ ದಾಳಿಯನ್ನು ವಿರೋಧಿಸಿ ಚಂಡೀಗಢದಲ್ಲಿ 20000 ಜನಕ್ಕೂ ಹೆಚ್ಚು ಮಂದಿ ಸೇರಿ ಪ್ರತಿಭಟನೆ ನಡೆಸಿದರು.

- Advertisement -
- Advertisement -

ನಮ್ಮೆಲ್ಲರ ಶತ್ರು ಒಬ್ಬನೇ ಎಂಬುದನ್ನು ಅರಿತು ಸಂಘಟನೆ ಕಟ್ಟುವುದು ಇಂದಿನ ಅಗತ್ಯ ಎಂದು ಟಿಕ್ರಿಗಡಿಯಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸುರೀಂದರ್‌ ಸಿಂಘ್ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ಮಾಸ್‌ ಮೀಡಿಯಾ ಫೌಂಡೇಷನ್‌ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಪಂಜಾಬಿನ ರೈತರು ಸಂಘಟಿತರಾಗಿದ್ದು ಹೇಗೆ, ಫ್ಯಾಸಿಸ್ಟ್‌ ಶಕ್ತಿಯ ದಬ್ಬಾಳಿಕೆ ವಿರುದ್ಧ ಹೋರಾಟ ಮೊದಲಾಗಿದ್ದು ಹೇಗೆ ಎಂಬುದನ್ನು ವಿವರಿಸಿದರು.

ಪಂಜಾಬಿನಲ್ಲಿ ಇದುವರೆಗೆ ನಡೆದ ಯಾವುದೇ ಯುದ್ಧ ಅನ್ಯಾಯ, ಹಿಂಸೆಗಳ ವಿರುದ್ಧ ನಡೆದಿದೆಯೇ ಹೊರತು, ಜಾತಿ ಮತಗಳ ವಿರುದ್ಧವಲ್ಲ ಎಂದು ಅವರು ಹೇಳಿದರು.

1980ರ ನಂತರ ಭಾರತದಲ್ಲಿ ಕೃಷಿ ಸಮಸ್ಯೆ ಹೆಚ್ಚಾಯಿತು. ಹಸಿರು ಕ್ರಾಂತಿಯ ಮೂಲಕ ಕಂಡ ಅಭಿವೃದ್ಧಿಯ ಕನಸು ಸಾಯಲಾರಂಭಿಸಿತ್ತು. ವಿವೇಕದ ಕೊರತೆಯೇ ಈ ಹಿನ್ನೆಡೆಗೆ ಕಾರಣ ಎಂಬುದನ್ನು ಅರಿತೆವು. ಆಗಿನಿಂದ ಸಂಘಟನೆ ಕಟ್ಟುತ್ತಿದ್ದೇವೆ ಎಂದರು.

ಸುರೀಂದರ್‌ ಸಿಂಘ್ ರವರ ವಿಡಿಯೋ ನೋಡಿ:

“ಪಂಜಾಬಿನ ವಿವಿಧ ಭಾಗಗಳಲ್ಲಿ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ರೈತರು ಹೋರಾಟ ನಡೆಸಿದ್ದರು. ಅವರೆಲ್ಲರನ್ನೂ ಒಗ್ಗೂಡಿಸಬೇಕಿತ್ತು. ಗೂಂಡಾ, ಪೊಲೀಸ್‌, ರಾಜಕಾರಣಿಯ ಒಕ್ಕೂಟದ ಎದರು ನಾವು ಒಟ್ಟಾಗಿ ಹೋರಾಡಬೇಕು ಎಂಬ ಘೋಷಣೆಯ ಮೂಲಕ ಭಿನ್ನ ವಿಚಾರಧಾರೆಯವರನ್ನು ಒಂದುಗೂಡಿಸಿದೆವು” ಎಂದು ರೈತ ಹೋರಾಟ ಸಂಘಟಿಸಿದ ಬಗೆಯನ್ನು ಸುರೀಂದರ್‌ ಸಿಂಘ್‌ ವಿವರಿಸಿದರು.

“ಮೋದಿ ಸರ್ಕಾರ ಬಂದ ಮೇಲೆ ಪಂಜಾಬ್‌ ಮೇಲೆ ಮತ್ತೊಂದು ರೀತಿಯ ದಾಳಿ ನಡೆಯಿತು. ಕಾಶ್ಮೀರದ ಮೇಲೆ ನಡೆದಂತೆ, ಸತ್ಯದ ಮಾತನಾಡಿದ ಗೌರಿ ಲಂಕೇಶರಂತಹವರ ಮೇಲೆ ದಾಳಿ ನಡೆದಂತೆ ಪಂಜಾಬಿನಲ್ಲಿ ಹಲವು ದಾಳಿಗಳು ನಡೆದವು. ಈ ಫ್ಯಾಸಿಸ್ಟ್‌ ದಾಳಿಯನ್ನು ವಿರೋಧಿಸಿ ಚಂಡೀಗಢದಲ್ಲಿ 20000 ಜನಕ್ಕೂ ಹೆಚ್ಚು ಮಂದಿ ಸೇರಿ ಪ್ರತಿಭಟನೆ ನಡೆಸಿದರು. ಹೀಗೆ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಒಕ್ಕೂಟವೊಂದು ರಚನೆಯಾಯಿತು” ಎಂದು ಸುರೀಂದರ್‌ ಸಿಂಘ್‌ ವಿವರಿಸಿದರು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...