Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...

ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ ‘ಶುದ್ಧೀಕರಣ ಆಚರಣೆ’; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

ಕೋಝಿಕ್ಕೋಡ್‌ನ ಪೆರಂಬ್ರಾದ ಚಂಗರೋತ್ ಪಂಚಾಯತ್ ಕಚೇರಿಯ ಮುಂದೆ ದಲಿತ ಸಮುದಾಯಕ್ಕೆ ಸೇರಿದ ನಿರ್ಗಮಿತ ಅಧ್ಯಕ್ಷ ಉನ್ನಿ ವೆಂಗೇರಿ ಅವರನ್ನು ಅವಮಾನಿಸಲು "ಶುದ್ಧೀಕರಣ ಆಚರಣೆ" ನಡೆಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಪರಿಶಿಷ್ಟ...

ಬೆಳ್ತಂಗಡಿ | ಆಭರಣ ಮಳಿಗೆ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ : ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದಲ್ಲಿ ಸೋಮವಾರ (ಡಿ.16) ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ...

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ...

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...