Homeಮುಖಪುಟಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

- Advertisement -
- Advertisement -

ಕೋವಿಡ್ ಲಸಿಕೆಯ ಪರಿಣಾಮಕಾರಿತ್ವ ಮತ್ತು ಅಡ್ಡ ಪರಿಣಾಮಗಳ ಬಗ್ಗೆ ಹಲವು ಅನುಮಾನಗಳು ಎದ್ದಿರುವ ಸಮಯದಲ್ಲಿ ಲಸಿಕೆ ವಿರೋಧಿಗಳ ಸಂಖ್ಯೆಯು ಹೆಚ್ಚುತ್ತಿದೆ. ದೇಶದ ಮೊದಲ ಕೋವಿಡ್ ಲಸಿಕೆಯನ್ನು ಪ್ರಧಾನಿ ಮೋದಿಯವರೇ ತೆಗೆದುಕೊಳ್ಳಲಿ. ನಂತರ ನಾವು ತೆಗೆದುಕೊಳ್ಳುತ್ತೇವೆ ಎಂದು ಆರ್‌ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್ ಆಗ್ರಹಿಸಿದ್ದಾರೆ.

ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಇಲ್ಲ ಎಂದು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ ಎಂದು  ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಬಹತೇಕರು ಕೋವಿಡ್ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಮುಖಂಡರು ಲಸಿಕೆ ಹೆಸರಿನಲ್ಲಿ ಪ್ರಚಾರ ಪಡೆದುಕೊಳ್ಳುತ್ತಿದ್ದು, ಭಾರತದಲ್ಲೇ ತಯಾರಿಸುತ್ತಿರುವ ಕೋವಿಡ್ ಲಸಿಕೆ ಅತ್ಯಂತ ಪರಿಣಾಮಕಾರಿ ಎನ್ನುತ್ತಿದ್ದಾರೆ. ಹಾಗಾಗಿ ಬಹುತೇಕರು ಮೋದಿಯವರೆ ಮೊದಲು ಲಸಿಕೆ ತೆಗೆದುಕೊಳ್ಳಲಿ ಎಂದು ಸವಾಲು ಹಾಕುತ್ತಿದ್ದಾರೆ.

ಬಿಹಾರದ ಚುನಾವಣಾ ಫಲಿತಾಂಶದ ಕುರಿತು ಆರ್‌ಜೆಡಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ತೇಜ್‌ ಪ್ರತಾಪ್ ಯಾದವ್ “ಮೊದಲ ಕೋವಿಡ್ ಲಸಿಕೆಯನ್ನು ದೇಶದ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಳ್ಳಲಿ. ನಂತರ ನಾವೆಲ್ಲರೂ ತೆಗೆದುಕೊಳ್ಳುತ್ತೇವೆ” ಎಂದು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಈ ಹಿಂದೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ “ನಾನು ಸದ್ಯಕ್ಕೆ ಲಸಿಕೆ ತೆಗೆದುಕೊಳ್ಳಲು ಹೋಗುತ್ತಿಲ್ಲ. ಬಿಜೆಪಿಯ ಲಸಿಕೆಯನ್ನು ನಾನು ಹೇಗೆ ನಂಬಲಿ? ನಮ್ಮ ಸರ್ಕಾರ ರಚನೆಯಾದಾಗ ಎಲ್ಲರಿಗೂ ಉಚಿತ ಲಸಿಕೆ ಸಿಗುತ್ತದೆ. ನಾವು ಬಿಜೆಪಿಯ ಲಸಿಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಅದೇ ರೀತಿಯಲ್ಲಿ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ, ಶಶಿ ತರೂರ್, ಜೈರಾಮ್ ರಮೇಶ್ ಸಹ ಲಸಿಕೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದರು. ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಮೂರನೇ ಹಂತದ ಪ್ರಯೋಗಗಳ ಫಲಿತಾಂಶವಿಲ್ಲದೆ ಲಸಿಕೆಯನ್ನು ನಂಬುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು.

ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಲಸಿಕೆಗಳಿಗೆ ತುರ್ತು ಅನುಮೋದನೆ ನೀಡುವಲ್ಲಿ ಎಚ್ಚರಿಕೆ ವಹಿಸಬೇಕೆಂದು ತಿಳಿಸಿತ್ತು.

ಈ ವಾರದ ಆರಂಭದಲ್ಲಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ “ಬಿಹಾರ ರಾಜ್ಯದಾದ್ಯಂತ ಕೋವಿಡ್ 19 ವ್ಯಾಕ್ಸಿನೇಷನ್ ನೀಡಲು ರಾಜ್ಯ ಸರ್ಕಾರ ಸಿದ್ಧವಾಗಿದೆ. ರಾಜ್ಯದ ಜನರಿಗೆ ಲಸಿಕೆ ನೀಡುವುದು ನಮ್ಮ ಆದ್ಯತೆಯ ಎಂದು ಹೇಳಿದ್ದರು.


ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋ… ಭಕ್ತರಿಗೆ ಮೊದಲು ನೀಡಬೇಕು.
    ನಂತರ ಮೋ… ವಿರೋಧಿಗಳಿಗೆ ನೀಡಲಿ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...