Homeಅಂಕಣಗಳುಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

ಮಾರ್ಟಿನ್ ಲಿಂಗ್ಸ್ ಅವರ ಮಹಮದ್ : ಇಸ್ಲಾಂನ ಧಾರ್ಮಿಕ ಮತ್ತು ಚಾರಿತ್ರಿಕ ಅನಾವರಣ

- Advertisement -
- Advertisement -

ಇಸ್ಲಾಂ, ಕುರಾನ್ ಮತ್ತು ಪ್ರವಾದಿ ಮಹಮದ್; ಈ ಮೂರರ ಬಗ್ಗೆ ಮುಸಲ್ಮಾನೇತರ ಜನರು ಅನೇಕಾನೇಕ ತಪ್ಪು ಅಭಿಪ್ರಾಯಗಳನ್ನು ಹೊಂದಿರುವುದು ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಇಸ್ಲಾಮೋಫೋಭಿಯಾವನ್ನು ಹುಟ್ಟುಹಾಕಲು ಒಂದಷ್ಟು ರಾಷ್ಟ್ರಗಳು ಯಶಸ್ವಿ ಪ್ರಯತ್ನವನ್ನು ಮಾಡಿವೆ. ಸಾಮಾನ್ಯ ಜನರು ಹರಡುವ ಸಾಮಾನ್ಯ ತಪ್ಪು ಮಾಹಿತಿಯೆಂದರೆ ಇಸ್ಲಾಂ ಎಂಬ ಧರ್ಮವನ್ನು ಪ್ರವಾದಿ ಮಹಮದರು ಸ್ಥಾಪಿಸಿದರು ಎಂಬುದು. ಇಸ್ಲಾಂ ಮಹಮದರ ಪೂರ್ವದಲ್ಲಿಯೇ ಅರಬರಲ್ಲಿ ಇದ್ದಂತಹ ಒಂದು ಧಾರ್ಮಿಕತೆ. ಅದಕ್ಕೊಂದು ಅಚ್ಚುಕಟ್ಟಾದ ಕ್ರಮವನ್ನು ಒದಗಿಸುವ ದಿಕ್ಕಿನಲ್ಲಿ ಕೆಲಸ ಮಾಡಿದರು. ದೇವರ ಬಗ್ಗೆ ಇದ್ದಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ, ಧಾರ್ಮಿಕ ಹೊಣೆಗಾರಿಕೆಯನ್ನು ಸ್ಪಷ್ಟಪಡಿಸುವ ಮತ್ತು ಸಮಾಜೋಧಾರ್ಮಿಕ ದೃಷ್ಟಿಯನ್ನು ವ್ಯಕ್ತಿಯು ನೇಮ ಮತ್ತು ನಿಷ್ಠೆಯ ಮೂಲಕ ಅನುಷ್ಠಾನಕ್ಕೆ ತರಲು ಬೇಕಾದಂತಹ ವಿಧಾನಗಳನ್ನು ಖಚಿತತೆಯಿಂದ ಮನಗಾಣಿಸಿದ್ದು, ಕ್ರಮಗೊಳಿಸಿದ್ದು ಪ್ರವಾದಿ ಮಹಮದ್. ತತ್ವ, ನಿಯಮ, ಒಳನೋಟ, ಬಹಳ ಮುಖ್ಯವಾಗಿ ದಾರಿ; ಇತ್ಯಾದಿಗಳನ್ನು ದಾಖಲಿಸಿದ್ದು ಕುರಾನಿನಲ್ಲಿ.

ಮಹಮದ್: ಹಿಸ್ ಲೈಫ್ ಬೇಸ್ಡ್ ಆನ್ ದ ಅರ್ಲಿಯೆಸ್ಟ್ ಸೋರ್ಸಸ್ ಎಂಬ ಮಾರ್ಟಿನ್ ಲಿಂಗ್ಸ್ ಅವರ ಪುಸ್ತಕವು ಮಹಮದರ ಜೀವನವನ್ನು ಬೇರಾವ ಪುಸ್ತಕದಲ್ಲಿಯೂ ನೀಡದಿರುವಷ್ಟು ವಿವರಗಳಿಂದ ಕಟ್ಟಿಕೊಡುತ್ತದೆ. ಬೋಳುವಾರು ಮಹಮದ್ ಕುಂಯ್ಞಿ ಅವರ ’ಓದಿರಿ’ ಕಾದಂಬರಿಯನ್ನು ಓದಿದರೆ ಮಹಮದರ ಜೀವನ ಚಿತ್ರಣವನ್ನು ಕಟ್ಟಿಕೊಳ್ಳಲು ಬಹುಪಾಲು ಸಾಧ್ಯವಾಗುತ್ತದೆ. ಈ ಎರಡೂ ಪುಸ್ತಕಗಳಲ್ಲಿ ಯಾವುದನ್ನೇ ಮೊದಲು ಓದಿದರೂ ಮತ್ತೊಂದನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ.

ಮಾರ್ಟಿನ್ ಅವರ ಪುಸ್ತಕದ ಶಕ್ತಿಯೇ ಪುರಾತನ ಅರಬರ ಆಕರಗಳನ್ನು ಆಧರಿಸಿ ಬರೆದಿರುವುದು. ಅವುಗಳಲ್ಲಿ ಬಹಳಷ್ಟು ಮೊದಲ ಬಾರಿಗೆ ಇಂಗ್ಲಿಷಿಗೆ ಅನುವಾದಗೊಂಡಿವೆ. ಹಾಗಂತ ಇದು ಮಹಮದರ ಬಗ್ಗೆ ಇರುವ ಇತರ ಬರಹಗಳಿಗೆ ವಿರೋಧಾಭಾಸವಾಗಿಯೇನೂ ಇಲ್ಲ. ಬದಲಾಗಿ ಒಳನೋಟಗಳನ್ನು ಮತ್ತು ಹೆಚ್ಚಿನ ವಿವರಗಳನ್ನು ನೀಡುತ್ತದೆ.

PC : Beyaz Tarih

ಮಹಮದರ ಸಮಕಾಲೀನರು ಮತ್ತು ಅವರ ಜೀವನಶೈಲಿ ಮತ್ತು ಕೆಲಸಗಳನ್ನು ನೇರವಾಗಿ ಸಾಕ್ಷೀಕರಿಸಿರುವವರ ಮಾತುಗಳು ಅರಬ್ ಸಾಹಿತ್ಯದಲ್ಲಿ ದಾಖಲಾಗಿವೆ. ಅವುಗಳನ್ನೂ ಮಾರ್ಟಿನ್ ಮುಖ್ಯವಾಗಿ ಆಕರವನ್ನಾಗಿ ಬಳಸಿಕೊಂಡಿದ್ದಾರೆ. ಇಸ್ಲಾಮಿನ ಮತ್ತು ಅರಬ್ಬರ ಚರಿತ್ರೆಯ ಮೈಲಿಗಲ್ಲುಗಳನ್ನು ಮತ್ತು ಮಹಮದರ ಜೀವನದ ಗತಿಯನ್ನು ಕಾಲಾನುಕ್ರಮಣಿಕೆಯ ಆಧಾರದಲ್ಲಿಯೇ ಮಾರ್ಟಿನ್ ಬರೆಯುತ್ತಾರೆ. ಹಾಗಾಗಿ ಇದು ಇತಿಹಾಸ ಅಧ್ಯಯನ ಮಾಡುವವರಿಗೆ ಮಾತ್ರವಲ್ಲದೇ ಸಂಶೋಧನಾಸಕ್ತಿ ಇರುವವರಿಗೂ ಒಂದು ಮುಖ್ಯ ಆಕರವಾಗಿ ಪರಿಣಮಿಸುತ್ತದೆ.

ಇದು ಕಾದಂಬರಿಯಲ್ಲದಿದ್ದರೂ ಭಾಷೆಯ ಸರಳ ಶೈಲಿ ಮತ್ತು ಓಘದ ರೀತಿಯು ಕತೆಯನ್ನು ಓದಿಸುವಷ್ಟೇ ಸುಲಲಿತವಾಗಿ ಓದಿಸಿಕೊಂಡು ಹೋಗುತ್ತದೆ. ಇಸ್ಲಾಮಿನ ಬೋಧನೆಗಳ ಮೇಲೆ ಗಮನವನ್ನು ಕೇಂದ್ರೀಕರಿಸದ ಇದು ಮಹಮದರ ಜೀವನವನ್ನೇ ತನ್ನ ಕೇಂದ್ರವಾಗಿಟ್ಟುಕೊಂಡಿದೆ. ಇಂಗ್ಲೆಂಡಿನ ಇಂಗ್ಲಿಷಾದರೂ ಜಾಗತಿಕ ಮಟ್ಟದ ಇಂಗ್ಲಿಷಿನ ಸರಳತೆಯನ್ನು ಹೊಂದಿದೆ. ಇತಿಹಾಸದ ದೃಷ್ಟಿಯಲ್ಲಿ ಇದರಲ್ಲಿರುವ ನಿಖರತೆಯ ಕಾರಣ ಇದನ್ನು ಇಂಗ್ಲಿಷ್ ಭಾಷೆಯಲ್ಲಿರುವ ವ್ಯಕ್ತಿಚರಿತ್ರೆಗಳ ಸಾಲಿನಲ್ಲಿ ಬಹಳ ಮಹತ್ವದ ಪುಸ್ತಕವನ್ನಾಗಿ ಪರಿಗಣಿಸುತ್ತಾರೆ.

ಆದರೆ, ಈ ಪುಸ್ತಕವು ಸುದೀರ್ಘಕಾಲಿನ ವಿಷಯಭರಿತವಾಗಿದೆ ಎಂದು ಅರಬ್ಬಿನ ಸಂಪ್ರದಾಯವಾದಿಗಳು ಟೀಕಿಸಿರುವುದುಂಟು. ಆದರೆ, ಅರಬ್ ಭಾಷೆಯ ನಿಯತಕಾಲಿಕಗಳಲ್ಲಿ ಮಾರ್ಟಿನ್ ಅವುಗಳಿಗೆಲ್ಲಾ ಸೂಕ್ತ ಉತ್ತರಗಳನ್ನು ನೀಡಿದ್ದಾರೆ. ಪ್ರಾಯಶಃ ಮಾರ್ಟಿನ್ ಅವರ ಬರಹಗಳಲ್ಲಿ ಇಸ್ಲಾಮಿನ ತಾತ್ವಿಕತೆಯು ಸೂಫಿ ಪಂಥದ ಛಾಯೆಯನ್ನು ಪಡೆದುಕೊಳ್ಳುವುದರ ಕಾರಣವೂ ಈ ಬಗೆಯ ವಿರೋಧಗಳನ್ನು ಎದುರಿಸಿದ್ದಿರಬಹುದು. ಇವರನ್ನು ಹತ್ತಿರದಿಂದ ಬಲ್ಲವರು ಸೂಫಿ ಸಂತರೆಂದೇ ಕರೆಯುತ್ತಿದ್ದರು. ಬೌದ್ಧಿಕವಾಗಿ ಮನವೊಲಿಸುವ ಕಲೆಯಂತೂ ಮಾರ್ಟಿನರಿಗೆ ಕರಗತವಾಗಿದ್ದು, ಮುಸಲ್ಮಾನೇತರರೂ ಅವರನ್ನು ಅಭಿಮಾನದಿಂದ ನೋಡುತ್ತಿದ್ದರು ಮತ್ತು ಅನುಸರಿಸುತ್ತಿದ್ದರು.

ಪ್ರಾಟಸ್ಟೆಂಟ್ ಕ್ರೈಸ್ತ ಕುಟುಂಬದಲ್ಲಿ ಹುಟ್ಟಿದ ಮಾರ್ಟಿನ್ ನಾಸ್ತಿಕರಾಗಿ ಪರಿವರ್ತನೆ ಹೊಂದಿದ್ದರು. ಅನೇಕ ಐರೋಪ್ಯ ವಿಶ್ವವಿದ್ಯಾಲಯಗಳಲ್ಲಿ ಪಾಠ ಮಾಡಿದ್ದ ಮಾರ್ಟಿನ್ ಅವರ ಈಜಿಪ್ಟಿನ ಹೆಂಡತಿಯ ಜೊತೆ ಸಂವಹನ ನಡೆಸಲು ಅರಬ್ ಭಾಷೆಯನ್ನು ಕಲಿತರು. ನಂತರ ಇಸ್ಲಾಂ ಧರ್ಮದ ಪ್ರಭಾವಕ್ಕೊಳಗಾದ ಮಾರ್ಟಿನ್ ಇಸ್ಲಾಂ ಸ್ವೀಕರಿಸಿದರು. ಧಾರ್ಮಿಕತೆಯಲ್ಲದ ಆಧ್ಯಾತ್ಮಿಕತೆಯ ಒಲವನ್ನು ಹೊಂದಿದ್ದ ಮಾರ್ಟಿನ್ ಸೂಫಿಯ ರೀತಿ ನೀತಿಗಳ ಅಧ್ಯಯನ ಮತ್ತು ಅನುಸರಣೆಗಳನ್ನು ಮಾಡತೊಡಗಿದ್ದರು.

ಒಟ್ಟಾರೆ ಪ್ರಾಚೀನ ಅರಬ್ ಆಕರಗಳನ್ನು ಆಧರಿಸಿ ರಚಿಸಿರುವ ಮಹಮದ್, ಇಸ್ಲಾಂಅನ್ನು ಧಾರ್ಮಿಕವಾಗಿ ಮಾತ್ರವಲ್ಲದೇ ಚಾರಿತ್ರಿಕವಾಗಿ ತಿಳಿಯಲು ನೆರವಾಗುತ್ತದೆ.


ಇದನ್ನೂ ಓದಿ: ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...