Homeಮುಖಪುಟಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಈ ನಡುವೆ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೊಬ್ಬರು ಆಕ್ಷೇಪಾರ್ಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದ ಬಡೌನ್ ಜಿಲ್ಲೆಯ ಗ್ರಾಮವೊಂದರಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಸಂತ್ರಸ್ತೆಯನ್ನು ಅವರ ಮನೆ ಎದುರು ಬಿಸಾಕಿ ಹೋದ ಅಮಾನವೀಯ ಘಟನೆ ಭಾನುವಾರ ನಡೆದಿತ್ತು. ದೇವಸ್ಥಾನದಲ್ಲಿಯೇ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಪೊಲೀಸರು ಪ್ರಮುಖ ಆರೋಪಿ ದೇವಸ್ಥಾನದ ಅರ್ಚಕ ಸತ್ಯಾನಂದ ಎಂಬುವವರನ್ನು ಬಂಧಿಸಿದ್ದಾರೆ. ಪಕ್ಕದ ಗ್ರಾಮದ ಭಕ್ತರೊಬ್ಬರ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದ ಅವನನ್ನು ಗುರುವಾರ ತಡ ರಾತ್ರಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ಹೇಳಿಕೆ ಆಧರಿಸಿ ಪಿಟಿಐ ವರದಿ ಮಾಡಿದೆ.

ಅರ್ಚಕ ಮತ್ತು ಆತನ ಇಬ್ಬರು ಸಹಚರರು ಭಾನುವಾರ ರಾತ್ರಿ ಆಕೆಯನ್ನು ಅವರ ಮನೆ ಮುಂದೆ ಬಿಟ್ಟು ಹೋಗಿದ್ದರು ಎಂಬ ಆರೋಪವಿದ್ದು, ನಂತರ ಅತಿಯಾದ ರಕ್ತಸ್ರಾವದಿಂದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಇನ್ನಿಬ್ಬರು ಆರೋಪಿಗಳನ್ನು ಬುಧವಾರವೇ ಬಂಧಿಸಲಾಗಿತ್ತು.

ಸ್ಥಳೀಯರೊಬ್ಬರು ಹೇಳುವಂತೆ, ಸಾವಿಗೀಡಾದ ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ರವಿವಾರ ಏನಾಯ್ತು ಎಂಬುದು ಯಾರಿಗೂ ಗೊತ್ತಿಲ್ಲ. ಗ್ರಾಮದ ಪ್ರಮುಖ ರಸ್ತೆಯ ಸಮೀಪದಲ್ಲೇ ದೇವಸ್ಥಾನವಿದ್ದು, ಅದರ ಆವರಣದ ಕೋಣೆಯೊಂದರಲ್ಲಿ ಅರ್ಚಕ ಸತ್ಯಾನಂದ ವಾಸವಾಗಿದ್ದಾರೆ. ಸ್ಥಳೀಯರ ಪ್ರಕಾರ, ಸತ್ಯಾನಂದ 5 ಬರ್ಷದ ಹಿಂದೆ ಗ್ರಾಮಕ್ಕೆ ಬಂದಿದ್ದು, ಜನರೊಡನೆ ಅಷ್ಟಾಗಿ ಬೆರೆಯುತ್ತಿರಲಿಲ್ಲ.

‘ಸಮೀಪದ ಪ್ರದೇಶಗಳಿಂದ ಜನರು ಅಲ್ಲಿಗೆ ಬರುತ್ತಿದ್ದ ಕಾರಣಕ್ಕಷ್ಟೇ ಸತ್ಯಾನಂದನ ಬಗ್ಗೆ ಸ್ಥಳೀಯರಿಗೆ ತಿಳಿದಿತ್ತು. ಈ ಘಟನೆ ಸಂಭವಿಸುವವರೆಗೆ ಜನರು ದೇವಸ್ಥಾನದ ಆಗು-ಹೋಗುಗಳಲ್ಲಿ ಅಷ್ಟಾಗಿ ಮಧ್ಯಸ್ಥಿಕೆ ವಹಿಸುತ್ತಿರಲಿಲ್ಲ ಮತ್ತು ಅರ್ಚಕನ ಬಗ್ಗೆ ತಿಳಿಯುವ ಪ್ರಯತ್ನ ಮಾಡಿರಲಿಲ್ಲ. ಆತನನ್ನು ಕೆಲವೊಮ್ಮೆ ದೇವಸ್ಥಾನದ ಅವರಣದ ಹೊರಗೆ ನೋಡಿದ್ದೇವೆ. ಆದರೂ, ಆತ ಹೊರಬಂದಿದ್ದು ತುಂಬ ವಿರಳ’ ಎಂದು ಸ್ಥಳೀಯ ನಿವಾಸಿ ನಂದು ಹೇಳಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಭಕ್ತರು, ‘ತಮಗಾಗಿ ಸತ್ಯಾನಂದ ಪೂಜೆಯ ಆಚರಣೆಗಳನ್ನು ನಡೆಸುತ್ತಿದ್ದರು. ಜನರ ನೋವು ಶಮನಕ್ಕೆ ಸಭೆ ನಡೆಸುತ್ತಿದ್ದರು’ ಎಂದಿದ್ದಾರೆ.

‘ಬಂಧಿತರಾದ ಇತರ ಇಬ್ಬರು ಆರೋಪಿಗಳು, ಗಾಯಗೊಂಡ ಸ್ಥಿತಿಯಲ್ಲಿದ್ದ ಆ ಮಹಿಳೆಗೆ ಸಹಾಯ ಮಾಡಲು ತಾವು ಪ್ರಯತ್ನಿಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ನಾನು ಅಪರಾಧ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದು, ನಮಗೆ ಲಭ್ಯವಾದ ಆಧಾರಗಳ ಪ್ರಕಾರ ನಾವು ಇದನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಎಂದು ಪರಿಗಣಿಸಿದ್ದೇವೆ’ ಎಂದು ಬಡೌನ್ ಜಿಲ್ಲೆಯ ಎಸ್‌ಎಸ್‌ಪಿ ಸಂಕಲ್ಪ್ ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಬಂಧಿತ ಇಬ್ಬರ ಹೇಳಿಕೆಯನ್ನು ಮೃತ ಮಹಿಳೆಯ ಕುಟುಂಬ ಒಪ್ಪಿಲ್ಲ. ‘ಮಹಿಳೆಗೆ ಸಹಾಯ ಮಾಡುವ ಉದ್ದೇಶವಿದ್ದಿದ್ದರೆ, ಅವರು ಗ್ರಾಮಸ್ಥರನ್ನು ಎಬ್ಬಿಸಬಹುದಿತ್ತು. ಆದರೆ ಅವರ ಉದ್ದೇಶ ಆಕೆ ಸಾಯಬೇಕು ಎಂಬುದೇ ಆಗಿತ್ತು. ದೇವರ ಭಕ್ತೆಯಾಗಿದ್ದ ಆಕೆಗೆ ದೇವಸ್ಥಾನದಲ್ಲಿ ಇಂಥದ್ದು ಸಂಭವಿಸುತ್ತದೆ ಎಂಬುದನ್ನು ನಾವು ಊಹಿಸಿರಲೂ ಇಲ್ಲ’ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಹಿಳಾ ಆಯೋಗದ ಸದಸ್ಯೆಯ ಹೇಳಿಕೆ

ಗುರುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ, ‘ಸಂಜೆ ಹೊತ್ತಿನಲ್ಲಿ ಏಕಾಂಗಿಯಾಗಿ ಆ ಮಹಿಳೆ ಹೊರಬರದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂಬ ಹೇಳಿಕೆ ನೀಡಿದ್ದಾರೆ.

‘ಈ ಘಟನೆ ಮಾನವೀಯತೆಗೆ ಮಾಡಿದ ಅವಮಾನ ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಮಹಿಳೆಯರು –ಯಾರದೇ ಪ್ರಭಾವಕ್ಕೆ ಒಳಗಾಗಿದ್ದರೂ-ಅಕಾಲಿಕವಾಗಿ ಮನೆಯಿಂದ ಹೊರ ಹೋಗಲೇಬಾರದು. ಮಹಿಳೆ ಸಂಜೆ ಹೊತ್ತು ಬರದಿದ್ದರೆ ಅಥವಾ ಹೊರ ಬಂದಾಗ ಜೊತೆಗೆ ಆಕೆಯ ಜೊತೆ ಒಬ್ಬ ಮಗನಾದರೂ ಇದ್ದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂದು ಚಂದ್ರಮುಖಿ ದೇವಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ‘ಆಯೋಗದ ಸದಸ್ಯೆ ಹಾಗೇಕೆ ಹೇಳಿದರು ಎಂಬುದು ನನಗೆ ಗೊತ್ತಿಲ್ಲ. ಆದರೆ ಯಾವುದೇ ಹೊತ್ತಿನಲ್ಲಿ, ಯಾವುದೇ ಸ್ಥಳಕ್ಕೆ ತನ್ನ ಇಚ್ಛಾನುಸಾರ ಹೋಗುವ ಸ್ವಾತಂತ್ರ್ಯ ಮಹಿಳೆಗಿದೆ’ ಎಂದಿದ್ದಾರೆ.


ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...