Homeಮುಖಪುಟಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಈ ನಡುವೆ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೊಬ್ಬರು ಆಕ್ಷೇಪಾರ್ಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದ ಬಡೌನ್ ಜಿಲ್ಲೆಯ ಗ್ರಾಮವೊಂದರಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಸಂತ್ರಸ್ತೆಯನ್ನು ಅವರ ಮನೆ ಎದುರು ಬಿಸಾಕಿ ಹೋದ ಅಮಾನವೀಯ ಘಟನೆ ಭಾನುವಾರ ನಡೆದಿತ್ತು. ದೇವಸ್ಥಾನದಲ್ಲಿಯೇ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಪೊಲೀಸರು ಪ್ರಮುಖ ಆರೋಪಿ ದೇವಸ್ಥಾನದ ಅರ್ಚಕ ಸತ್ಯಾನಂದ ಎಂಬುವವರನ್ನು ಬಂಧಿಸಿದ್ದಾರೆ. ಪಕ್ಕದ ಗ್ರಾಮದ ಭಕ್ತರೊಬ್ಬರ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದ ಅವನನ್ನು ಗುರುವಾರ ತಡ ರಾತ್ರಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ಹೇಳಿಕೆ ಆಧರಿಸಿ ಪಿಟಿಐ ವರದಿ ಮಾಡಿದೆ.

ಅರ್ಚಕ ಮತ್ತು ಆತನ ಇಬ್ಬರು ಸಹಚರರು ಭಾನುವಾರ ರಾತ್ರಿ ಆಕೆಯನ್ನು ಅವರ ಮನೆ ಮುಂದೆ ಬಿಟ್ಟು ಹೋಗಿದ್ದರು ಎಂಬ ಆರೋಪವಿದ್ದು, ನಂತರ ಅತಿಯಾದ ರಕ್ತಸ್ರಾವದಿಂದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಇನ್ನಿಬ್ಬರು ಆರೋಪಿಗಳನ್ನು ಬುಧವಾರವೇ ಬಂಧಿಸಲಾಗಿತ್ತು.

ಸ್ಥಳೀಯರೊಬ್ಬರು ಹೇಳುವಂತೆ, ಸಾವಿಗೀಡಾದ ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ರವಿವಾರ ಏನಾಯ್ತು ಎಂಬುದು ಯಾರಿಗೂ ಗೊತ್ತಿಲ್ಲ. ಗ್ರಾಮದ ಪ್ರಮುಖ ರಸ್ತೆಯ ಸಮೀಪದಲ್ಲೇ ದೇವಸ್ಥಾನವಿದ್ದು, ಅದರ ಆವರಣದ ಕೋಣೆಯೊಂದರಲ್ಲಿ ಅರ್ಚಕ ಸತ್ಯಾನಂದ ವಾಸವಾಗಿದ್ದಾರೆ. ಸ್ಥಳೀಯರ ಪ್ರಕಾರ, ಸತ್ಯಾನಂದ 5 ಬರ್ಷದ ಹಿಂದೆ ಗ್ರಾಮಕ್ಕೆ ಬಂದಿದ್ದು, ಜನರೊಡನೆ ಅಷ್ಟಾಗಿ ಬೆರೆಯುತ್ತಿರಲಿಲ್ಲ.

‘ಸಮೀಪದ ಪ್ರದೇಶಗಳಿಂದ ಜನರು ಅಲ್ಲಿಗೆ ಬರುತ್ತಿದ್ದ ಕಾರಣಕ್ಕಷ್ಟೇ ಸತ್ಯಾನಂದನ ಬಗ್ಗೆ ಸ್ಥಳೀಯರಿಗೆ ತಿಳಿದಿತ್ತು. ಈ ಘಟನೆ ಸಂಭವಿಸುವವರೆಗೆ ಜನರು ದೇವಸ್ಥಾನದ ಆಗು-ಹೋಗುಗಳಲ್ಲಿ ಅಷ್ಟಾಗಿ ಮಧ್ಯಸ್ಥಿಕೆ ವಹಿಸುತ್ತಿರಲಿಲ್ಲ ಮತ್ತು ಅರ್ಚಕನ ಬಗ್ಗೆ ತಿಳಿಯುವ ಪ್ರಯತ್ನ ಮಾಡಿರಲಿಲ್ಲ. ಆತನನ್ನು ಕೆಲವೊಮ್ಮೆ ದೇವಸ್ಥಾನದ ಅವರಣದ ಹೊರಗೆ ನೋಡಿದ್ದೇವೆ. ಆದರೂ, ಆತ ಹೊರಬಂದಿದ್ದು ತುಂಬ ವಿರಳ’ ಎಂದು ಸ್ಥಳೀಯ ನಿವಾಸಿ ನಂದು ಹೇಳಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಭಕ್ತರು, ‘ತಮಗಾಗಿ ಸತ್ಯಾನಂದ ಪೂಜೆಯ ಆಚರಣೆಗಳನ್ನು ನಡೆಸುತ್ತಿದ್ದರು. ಜನರ ನೋವು ಶಮನಕ್ಕೆ ಸಭೆ ನಡೆಸುತ್ತಿದ್ದರು’ ಎಂದಿದ್ದಾರೆ.

‘ಬಂಧಿತರಾದ ಇತರ ಇಬ್ಬರು ಆರೋಪಿಗಳು, ಗಾಯಗೊಂಡ ಸ್ಥಿತಿಯಲ್ಲಿದ್ದ ಆ ಮಹಿಳೆಗೆ ಸಹಾಯ ಮಾಡಲು ತಾವು ಪ್ರಯತ್ನಿಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ನಾನು ಅಪರಾಧ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದು, ನಮಗೆ ಲಭ್ಯವಾದ ಆಧಾರಗಳ ಪ್ರಕಾರ ನಾವು ಇದನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಎಂದು ಪರಿಗಣಿಸಿದ್ದೇವೆ’ ಎಂದು ಬಡೌನ್ ಜಿಲ್ಲೆಯ ಎಸ್‌ಎಸ್‌ಪಿ ಸಂಕಲ್ಪ್ ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಬಂಧಿತ ಇಬ್ಬರ ಹೇಳಿಕೆಯನ್ನು ಮೃತ ಮಹಿಳೆಯ ಕುಟುಂಬ ಒಪ್ಪಿಲ್ಲ. ‘ಮಹಿಳೆಗೆ ಸಹಾಯ ಮಾಡುವ ಉದ್ದೇಶವಿದ್ದಿದ್ದರೆ, ಅವರು ಗ್ರಾಮಸ್ಥರನ್ನು ಎಬ್ಬಿಸಬಹುದಿತ್ತು. ಆದರೆ ಅವರ ಉದ್ದೇಶ ಆಕೆ ಸಾಯಬೇಕು ಎಂಬುದೇ ಆಗಿತ್ತು. ದೇವರ ಭಕ್ತೆಯಾಗಿದ್ದ ಆಕೆಗೆ ದೇವಸ್ಥಾನದಲ್ಲಿ ಇಂಥದ್ದು ಸಂಭವಿಸುತ್ತದೆ ಎಂಬುದನ್ನು ನಾವು ಊಹಿಸಿರಲೂ ಇಲ್ಲ’ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಹಿಳಾ ಆಯೋಗದ ಸದಸ್ಯೆಯ ಹೇಳಿಕೆ

ಗುರುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ, ‘ಸಂಜೆ ಹೊತ್ತಿನಲ್ಲಿ ಏಕಾಂಗಿಯಾಗಿ ಆ ಮಹಿಳೆ ಹೊರಬರದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂಬ ಹೇಳಿಕೆ ನೀಡಿದ್ದಾರೆ.

‘ಈ ಘಟನೆ ಮಾನವೀಯತೆಗೆ ಮಾಡಿದ ಅವಮಾನ ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಮಹಿಳೆಯರು –ಯಾರದೇ ಪ್ರಭಾವಕ್ಕೆ ಒಳಗಾಗಿದ್ದರೂ-ಅಕಾಲಿಕವಾಗಿ ಮನೆಯಿಂದ ಹೊರ ಹೋಗಲೇಬಾರದು. ಮಹಿಳೆ ಸಂಜೆ ಹೊತ್ತು ಬರದಿದ್ದರೆ ಅಥವಾ ಹೊರ ಬಂದಾಗ ಜೊತೆಗೆ ಆಕೆಯ ಜೊತೆ ಒಬ್ಬ ಮಗನಾದರೂ ಇದ್ದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂದು ಚಂದ್ರಮುಖಿ ದೇವಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ‘ಆಯೋಗದ ಸದಸ್ಯೆ ಹಾಗೇಕೆ ಹೇಳಿದರು ಎಂಬುದು ನನಗೆ ಗೊತ್ತಿಲ್ಲ. ಆದರೆ ಯಾವುದೇ ಹೊತ್ತಿನಲ್ಲಿ, ಯಾವುದೇ ಸ್ಥಳಕ್ಕೆ ತನ್ನ ಇಚ್ಛಾನುಸಾರ ಹೋಗುವ ಸ್ವಾತಂತ್ರ್ಯ ಮಹಿಳೆಗಿದೆ’ ಎಂದಿದ್ದಾರೆ.


ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...