Homeಕರ್ನಾಟಕಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ನಮ್ಮ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಬಚಾವೋ ಎಂಬ ಘೋಷಣೆ ನೀಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ- ಟಿ.ಎಚ್ ಹಾಲೇಶಪ್ಪ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಸಾಮೂಹಿಕವಾಗಿ ಅರ್ಚಕರು ನಡೆಸಿರುವ ಪೈಶಾಚಿಕ ಅತ್ಯಾಚಾರ ಘಟನೆಯನ್ನು ಖಂಡಿಸಿ ಇಂದು ಶಿವಮೊಗ್ಗದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ನೂರಾರು ಕಾರ್ಯಕರ್ತರು “ಗೂಂಡಾ ರಾಜ್ಯ ಯುಪಿ ಸರ್ಕಾರಕ್ಕೆ, ಯುಪಿ ಪೊಲೀಸರಿಗೆ ಧಿಕ್ಕಾರ” ಎಂಬ ಘೋಷಣೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್‌ರವರು ಮಾತನಾಡಿ “ಉತ್ತರ ಪ್ರದೇಶದಲ್ಲಿ ದೇವರಿಗೆ ಪೂಜೆ ಮಾಡುವ ಅರ್ಚಕರು ಅಂಗನವಾಡಿ ಶಿಕ್ಷಕಿಯ ಮೇಲೆ ಸಾಮೂಹಿಕವಾಗಿ ಕ್ರೂರ ಅತ್ಯಾಚಾರ ನಡೆಸಿದ್ದಾರೆ. ನಾವು ದೇವರಿಗೆ ಪೂಜೆ ಮಾಡುವ ಪೂಜಾರಿಗಳನ್ನು ದೇವರೆಂದೇ ಭಾವಿಸುತ್ತೇವೆ. ಆ ಪೂಜಾರಿಗಳು 50 ವರ್ಷದ ಮಹಿಳೆಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿರುವುದು ನಾವೆಲ್ಲರೂ ತಲೆ ತಗ್ಗಿಸಬೇಕಾದ ವಿಚಾರ” ಎಂದರು.

ಈ ರೀತಿಯ ಬರ್ಬರ ಕೃತ್ಯಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ. ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಆತ ನಿಜಕ್ಕೂ ಯೋಗಿಯಲ್ಲ. ಯೋಗಿ ಅಂದರೆ ಆಧ್ಯಾತ್ಮ, ಒಳ್ಳೆಯವರು. ಆ ರೀತಿಯ ಒಳ್ಳೆಯ ಸ್ವಾಮಿಗಳಿದ್ದು, ಒಳ್ಳೆಯ ಕೆಲಸ ಮಾಡುತ್ತಾರೆ. ಆದರೆ ಆತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲಾಗದ ರೋಗಿ ಆಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2012ರಲ್ಲಿಯೂ ಸಹ ಒಬ್ಬ ದಲಿತ ಬಾಲಕಿಯ ಮೇಲೆ ಇದೇ ಯೋಗಿ ಆದಿತ್ಯನಾಥ್‌ ಕಡೆಯ ಗೂಂಡಾಗಳು ಅತ್ಯಾಚಾರ ಎಸಗಿ ಕೊಂದರು. ವಿಶ್ವದಲ್ಲಿ ಸುಮಾರು 200 ದೇಶಗಳಿವೆ, ಸಾವಿರಾರು ರಾಜ್ಯಗಳಿವೆ. ಆ ಎಲ್ಲಾ ದೇಶ-ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಹೆಚ್ಚು ಅತ್ಯಾಚಾರ-ಕೊಲೆಗಳು ನಡೆಯುತ್ತಿರುವುದು ಉತ್ತರ ಪ್ರದೇಶದಲ್ಲಿಯೇ ಆಗಿದೆ. ಒಬ್ಬ ಖಾವಿ ಬಟ್ಟೆಯನ್ನು ಹಾಕಿಕೊಂಡಿರುವ, ಜನರ ಪ್ರಾಣ – ಮಾನ ಕಾಪಾಡಬೇಕಾದ ಮುಖ್ಯಮಂತ್ರಿಯನ್ನು ಹೊಂದಿರುವ ರಾಜ್ಯದಲ್ಲಿ ಇವೆಲ್ಲ ನಡೆಯುತ್ತಿವೆ ಎಂದು ಕೆ.ಎಲ್ ಅಶೋಕ್ ಬೇಸರ ವ್ಯಕ್ತಪಡಿಸಿದರು.

ದಲಿತರು, ಬಡವರು, ಶೂದ್ರರು, ದಮನಿತರು ಎನ್ನುವ ಕಾರಣಕ್ಕೆ ಅತ್ಯಾಚಾರಕ್ಕೊಳಗಾದವರಿಗೆ ನ್ಯಾಯ ಸಿಗುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಈಗಾಗಿಯೇ ಇಂತಹ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ಬಿಹಾರವನ್ನು ಗೂಂಡಾ ರಾಜ್ ಎಂದು ಕರೆಯಲಾಗುತ್ತಿದೆ. ಅದರ ಹತ್ತು ಪಟ್ಟು ಅಪರಾಧದ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿಯೇ ಒಬ್ಬ ಬಾಲಕಿಯ ಮೇಲೆ ಅತ್ಯಾಚಾರ ನಡೆಯಿತು. ಅತ್ಯಾಚಾರ ಎಂಬ ಪಿಡುಗು ನಮ್ಮ ಮನೆಯ ಬಾಗಿಲಿನಲ್ಲಿಯೇ ಇದೆ. ಹಾಗಾಗಿ ನಾವೆಲ್ಲ ಎಚ್ಚೆತ್ತುಕೊಂಡು ಇದರ ವಿರುದ್ಧ ಹೋರಾಡುವುದು ಅನಿವಾರ್ಯ ಎಂದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಕಾರ್ಯದರ್ಶಿ ಟಿ.ಎಚ್ ಹಾಲೇಶಪ್ಪನವರು ಮಾತನಾಡಿ “ನಮ್ಮ ಕರ್ನಾಟಕದಲ್ಲಿ ಅರ್ಚಕರನ್ನು ಮದುವೆಯಾದರೆ 3 ಲಕ್ಷ ರೂಗಳ ಬಾಂಡ್ ಕೊಡುತ್ತೇವೆ ಎಂದು ಸಿಎಂ ಯಡಿಯೂರಪ್ಪನವರು ಘೋಷಿಸಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಅದೇ ಹಣವನ್ನು ಮಹಿಳೆಯರ ರಕ್ಷಣೆಗೆ ನೀಡಬೇಕು” ಎಂದು ಆಗ್ರಹಿಸಿದರು.

ದೇವಸ್ಥಾನ ಪವಿತ್ರ ಎನ್ನುತ್ತಾರೆ. ಅಲ್ಲಿಯ ಅರ್ಚಕರೆ ಕಾಮುಕರಾದರೆ ಮಹಿಳೆಯರಿಗೆ ಇನ್ನೆಲ್ಲಿ ರಕ್ಷಣೆ ಇದೆ. ಇಂದು ನಮ್ಮ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಬಚಾವೋ ಎಂಬ ಘೋಷಣೆ ನೀಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ. ಈ ಗೂಂಡಾ ಸರ್ಕಾರಗಳನ್ನು ಕೆಳಗಿಳಿಸಬೇಕು, ಮಹಿಳೆಯರಿಗೆ ನಾವೇ ರಕ್ಷಣೆ ನೀಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ಪ್ರತಿಭಟನೆಯಲ್ಲಿ ರಾಮಚಂದ್ರಪ್ಪ, ಅನಿಲ್ ಕುಮಾರ್, ನಾಗವೇಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...