Homeಕರ್ನಾಟಕಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ನಮ್ಮ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಬಚಾವೋ ಎಂಬ ಘೋಷಣೆ ನೀಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ- ಟಿ.ಎಚ್ ಹಾಲೇಶಪ್ಪ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಸಾಮೂಹಿಕವಾಗಿ ಅರ್ಚಕರು ನಡೆಸಿರುವ ಪೈಶಾಚಿಕ ಅತ್ಯಾಚಾರ ಘಟನೆಯನ್ನು ಖಂಡಿಸಿ ಇಂದು ಶಿವಮೊಗ್ಗದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ನೂರಾರು ಕಾರ್ಯಕರ್ತರು “ಗೂಂಡಾ ರಾಜ್ಯ ಯುಪಿ ಸರ್ಕಾರಕ್ಕೆ, ಯುಪಿ ಪೊಲೀಸರಿಗೆ ಧಿಕ್ಕಾರ” ಎಂಬ ಘೋಷಣೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್‌ರವರು ಮಾತನಾಡಿ “ಉತ್ತರ ಪ್ರದೇಶದಲ್ಲಿ ದೇವರಿಗೆ ಪೂಜೆ ಮಾಡುವ ಅರ್ಚಕರು ಅಂಗನವಾಡಿ ಶಿಕ್ಷಕಿಯ ಮೇಲೆ ಸಾಮೂಹಿಕವಾಗಿ ಕ್ರೂರ ಅತ್ಯಾಚಾರ ನಡೆಸಿದ್ದಾರೆ. ನಾವು ದೇವರಿಗೆ ಪೂಜೆ ಮಾಡುವ ಪೂಜಾರಿಗಳನ್ನು ದೇವರೆಂದೇ ಭಾವಿಸುತ್ತೇವೆ. ಆ ಪೂಜಾರಿಗಳು 50 ವರ್ಷದ ಮಹಿಳೆಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿರುವುದು ನಾವೆಲ್ಲರೂ ತಲೆ ತಗ್ಗಿಸಬೇಕಾದ ವಿಚಾರ” ಎಂದರು.

ಈ ರೀತಿಯ ಬರ್ಬರ ಕೃತ್ಯಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ. ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಆತ ನಿಜಕ್ಕೂ ಯೋಗಿಯಲ್ಲ. ಯೋಗಿ ಅಂದರೆ ಆಧ್ಯಾತ್ಮ, ಒಳ್ಳೆಯವರು. ಆ ರೀತಿಯ ಒಳ್ಳೆಯ ಸ್ವಾಮಿಗಳಿದ್ದು, ಒಳ್ಳೆಯ ಕೆಲಸ ಮಾಡುತ್ತಾರೆ. ಆದರೆ ಆತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲಾಗದ ರೋಗಿ ಆಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2012ರಲ್ಲಿಯೂ ಸಹ ಒಬ್ಬ ದಲಿತ ಬಾಲಕಿಯ ಮೇಲೆ ಇದೇ ಯೋಗಿ ಆದಿತ್ಯನಾಥ್‌ ಕಡೆಯ ಗೂಂಡಾಗಳು ಅತ್ಯಾಚಾರ ಎಸಗಿ ಕೊಂದರು. ವಿಶ್ವದಲ್ಲಿ ಸುಮಾರು 200 ದೇಶಗಳಿವೆ, ಸಾವಿರಾರು ರಾಜ್ಯಗಳಿವೆ. ಆ ಎಲ್ಲಾ ದೇಶ-ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಹೆಚ್ಚು ಅತ್ಯಾಚಾರ-ಕೊಲೆಗಳು ನಡೆಯುತ್ತಿರುವುದು ಉತ್ತರ ಪ್ರದೇಶದಲ್ಲಿಯೇ ಆಗಿದೆ. ಒಬ್ಬ ಖಾವಿ ಬಟ್ಟೆಯನ್ನು ಹಾಕಿಕೊಂಡಿರುವ, ಜನರ ಪ್ರಾಣ – ಮಾನ ಕಾಪಾಡಬೇಕಾದ ಮುಖ್ಯಮಂತ್ರಿಯನ್ನು ಹೊಂದಿರುವ ರಾಜ್ಯದಲ್ಲಿ ಇವೆಲ್ಲ ನಡೆಯುತ್ತಿವೆ ಎಂದು ಕೆ.ಎಲ್ ಅಶೋಕ್ ಬೇಸರ ವ್ಯಕ್ತಪಡಿಸಿದರು.

ದಲಿತರು, ಬಡವರು, ಶೂದ್ರರು, ದಮನಿತರು ಎನ್ನುವ ಕಾರಣಕ್ಕೆ ಅತ್ಯಾಚಾರಕ್ಕೊಳಗಾದವರಿಗೆ ನ್ಯಾಯ ಸಿಗುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಈಗಾಗಿಯೇ ಇಂತಹ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ಬಿಹಾರವನ್ನು ಗೂಂಡಾ ರಾಜ್ ಎಂದು ಕರೆಯಲಾಗುತ್ತಿದೆ. ಅದರ ಹತ್ತು ಪಟ್ಟು ಅಪರಾಧದ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿಯೇ ಒಬ್ಬ ಬಾಲಕಿಯ ಮೇಲೆ ಅತ್ಯಾಚಾರ ನಡೆಯಿತು. ಅತ್ಯಾಚಾರ ಎಂಬ ಪಿಡುಗು ನಮ್ಮ ಮನೆಯ ಬಾಗಿಲಿನಲ್ಲಿಯೇ ಇದೆ. ಹಾಗಾಗಿ ನಾವೆಲ್ಲ ಎಚ್ಚೆತ್ತುಕೊಂಡು ಇದರ ವಿರುದ್ಧ ಹೋರಾಡುವುದು ಅನಿವಾರ್ಯ ಎಂದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಕಾರ್ಯದರ್ಶಿ ಟಿ.ಎಚ್ ಹಾಲೇಶಪ್ಪನವರು ಮಾತನಾಡಿ “ನಮ್ಮ ಕರ್ನಾಟಕದಲ್ಲಿ ಅರ್ಚಕರನ್ನು ಮದುವೆಯಾದರೆ 3 ಲಕ್ಷ ರೂಗಳ ಬಾಂಡ್ ಕೊಡುತ್ತೇವೆ ಎಂದು ಸಿಎಂ ಯಡಿಯೂರಪ್ಪನವರು ಘೋಷಿಸಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಅದೇ ಹಣವನ್ನು ಮಹಿಳೆಯರ ರಕ್ಷಣೆಗೆ ನೀಡಬೇಕು” ಎಂದು ಆಗ್ರಹಿಸಿದರು.

ದೇವಸ್ಥಾನ ಪವಿತ್ರ ಎನ್ನುತ್ತಾರೆ. ಅಲ್ಲಿಯ ಅರ್ಚಕರೆ ಕಾಮುಕರಾದರೆ ಮಹಿಳೆಯರಿಗೆ ಇನ್ನೆಲ್ಲಿ ರಕ್ಷಣೆ ಇದೆ. ಇಂದು ನಮ್ಮ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಬಚಾವೋ ಎಂಬ ಘೋಷಣೆ ನೀಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ. ಈ ಗೂಂಡಾ ಸರ್ಕಾರಗಳನ್ನು ಕೆಳಗಿಳಿಸಬೇಕು, ಮಹಿಳೆಯರಿಗೆ ನಾವೇ ರಕ್ಷಣೆ ನೀಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ಪ್ರತಿಭಟನೆಯಲ್ಲಿ ರಾಮಚಂದ್ರಪ್ಪ, ಅನಿಲ್ ಕುಮಾರ್, ನಾಗವೇಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...