Homeಚಳವಳಿರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆ

ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆ

ಕರ್ನಾಟಕವು ಕೃಷಿಗೆ ಸಂಬಂಧಿಸಿದ ಎರಡು ವಿಚಾರಗಳಲ್ಲಿ ದೇಶದಲ್ಲೇ ಅತ್ಯಂತ ದುಸ್ಥಿತಿಯಲ್ಲಿದೆ. ದೆಹಲಿಯ ಬಾಲಂಗೋಚಿಗಳೂ, ನಿಷ್ಕ್ರಿಯರೂ ಆದ ಪ್ರಮುಖ ರಾಜಕೀಯ ಪಕ್ಷಗಳಿಗೆ ಇವುಗಳು ಮುಖ್ಯವೇ ಅಲ್ಲ. ನಮಗಾದರೂ ಮುಖ್ಯವಾಗಬೇಕೆಂಬ ಕಾರಣಕ್ಕೆ ಈ ಚರ್ಚೆಯನ್ನು ಏರ್ಪಡಿಸಲಾಗಿದೆ - ಜಾಗೃತ ಕರ್ನಾಟಕ

- Advertisement -
- Advertisement -

‘ರೈತ ವಿರೋಧಿ ಕಾಯ್ದೆಗಳು ಮತ್ತು ಕರ್ನಾಟಕಕ್ಕಾಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ?’ ಎಂಬ ವಿಷಯದ ಕುರಿತು ರಾಜ್ಯದ ಹಾಗೂ ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ ಸಭೆಯನ್ನು ‘ಜಾಗೃತ ಕರ್ನಾಟಕ’ ಸಂಘಟನೆ ಆಯೋಜಿಸಿದೆ. ಸಭೆಯು ಜನವರಿ 10 ರ ಭಾನುವಾರ ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಗಾಂಧಿ ಭವನದ ಜೆ.ಸಿ. ಕುಮಾರಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಸಮಾಲೋಚನಾ ಸಭೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರೈತ ಪ್ರತಿನಿಧಿಗಳು ತಮ್ಮ ತಮ್ಮ ರಾಜ್ಯಗಳ ಪರಿಸ್ಥಿತಿಯ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ತಮಿಳುನಾಡಿನ ತಮಿಳಗ ವ್ಯವಸಾಯಿಗಳ್ ಸಂಘಂ ಮುಖಂಡ ಸೆಲ್ವಮುತ್ತು, ಆಂಧ್ರ ಪ್ರದೇಶದ ರೈತು ಸ್ವರಾಜ್ಯ ವೇದಿಕೆ ಮುಖಂಡ ಕಿರಣ್ ಕುಮಾರ್‌ ವಿಸ್ಸಾ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ರಜಾಕ್ ಉಸ್ತಾದ್ ಸೇರಿದಂತೆ ಹಲವರು ಮಾತನಾಡಲಿದ್ದಾರೆ.

ನಂತರ ಪ್ರಾಧ್ಯಾಪಕರು ಮತ್ತು ಅಂಕಣಕಾರರಾದ ಎ.ನಾರಾಯಣ, ವಕೀಲರಾದ ವೀಣಾ ಬಹದ್ದೂರ್ ದೇಸಾಯಿ, ನಾವು ದ್ರಾವಿಡ ಕನ್ನಡಿಗರು ಚಳವಳಿಯ ಅಭಿಗೌಡ, ಚಿಂತಕರಾದ ನಾಗೇಗೌಡ ಕೀಲಾರ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಪ್ರತಿಕ್ರಿಯೆ ನೀಡಲಿದ್ದಾರೆ.

ಇದನ್ನೂ ಓದಿ: ಕೃಷಿ ಕ್ಷೇತ್ರದ ಸಮಸ್ಯೆಗಳು: -ಆಹಾರ ಭದ್ರತೆ ನೀಡಿದ ರೈತರ ಪಾಡೇನು?

ಕರ್ನಾಟಕವು ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ವಿಚಾರಗಳಲ್ಲಿ ದೇಶದಲ್ಲೇ ಅತ್ಯಂತ ದುಸ್ಥಿತಿಯಲ್ಲಿದೆ ಎಂದಿರುವ ಜಾಗೃತ ಕರ್ನಾಟಕ ಸಂಘಟನೆ, ದೆಹಲಿಯ ಬಾಲಂಗೋಚಿಗಳೂ, ನಿಷ್ಕ್ರಿಯರೂ ಆದ ಪ್ರಮುಖ ರಾಜಕೀಯ ಪಕ್ಷಗಳಿಗೆ ಇವುಗಳು ಮುಖ್ಯವೇ ಅಲ್ಲ. ನಮಗಾದರೂ ಮುಖ್ಯವಾಗಬೇಕೆಂಬ ಕಾರಣಕ್ಕೆ ಈ ಚರ್ಚೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಗ್ರಾಮೀಣ ಕರ್ನಾಟಕವು ಕೇಂದ್ರ ಸರ್ಕಾರದಿಂದ ಏನನ್ನಾದರೂ ಪಡೆದುಕೊಂಡಿದೆಯೆ? ಕೊಟ್ಟಿದ್ದೆಷ್ಟು ಕಳೆದುಕೊಂಡಿದ್ದೆಷ್ಟು? ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಒಂದೇ ಪಕ್ಷದಡಿ ಇದ್ದುದರಿಂದ ಲಾಭವಾಗಿದೆಯೇ? ನಷ್ಟವಾಗಿದೆಯೆ? ಈ ಎರಡು ಪ್ರಮುಖ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಮತ್ತು ಒಕ್ಕೂಟ ಸರ್ಕಾರಗಳ ಬಳಿ ಉತ್ತರವಿದೆಯೇ? ಪ್ರತಿಪಕ್ಷಗಳೇಕೆ ಈ ಪ್ರಶ್ನೆಗಳನ್ನೆತ್ತುತ್ತಿಲ್ಲ? ಎಂದು ಜಾಗೃತ ಕರ್ನಾಟಕ ಪ್ರಶ್ನಿಸಿದ್ದು, ಇಂತಹ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಈ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...