Homeಮುಖಪುಟಶೇ. 7.7 ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ಅಂದಾಜು: ತೀವ್ರವಾಗಿ ಕುಸಿಯಲಿರುವ 2020-21ರ ಆರ್ಥಿಕತೆ

ಶೇ. 7.7 ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ಅಂದಾಜು: ತೀವ್ರವಾಗಿ ಕುಸಿಯಲಿರುವ 2020-21ರ ಆರ್ಥಿಕತೆ

ನಿರ್ಮಾಣ, ಉತ್ಪಾದನೆ, ಗಣಿಗಾರಿಕೆ ಮತ್ತು ಸೇವಾ ಉದ್ಯಮಗಳು ಹೆಚ್ಚು ಹಾನಿಗೊಳಗಾಗಲಿವೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಬಿಡುಗಡೆ ಮಾಡಿದ ಮೊದಲ ಮುಂಗಡ ಜಿಡಿಪಿ ಅಂದಾಜು ಹೇಳಿದೆ.

- Advertisement -
- Advertisement -

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ 7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿದೆ. (ಸಂಕುಚಿತಗೊಳ್ಳುವಿಕೆ ಋಣಾತ್ಮಕ ಬೆಳವಣಿಗೆ ಸೂಚಿಸುತ್ತದೆ. ಗ್ರಾಫ್ ಗಮನಿಸಿ.)

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5  (ಮೈನಸ್ 9.5%) ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರಫ್ತಿನಲ್ಲಿ ಶೇ.0.8 ಕುಸಿತ: 15.71 ಬಿಲಿಯನ್ ಡಾಲರ್‌ಗೇರಿದ‌ ಭಾರತದ ವ್ಯಾಪಾರ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....