Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...