Homeಅಂತರಾಷ್ಟ್ರೀಯBlack Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

- Advertisement -
- Advertisement -

ಬುಧವಾರ ಶಸ್ತ್ರಸಜ್ಜಿತ ಮತ್ತು ಉದ್ರಿಕ್ತ ಟ್ರಂಪ್ ಬೆಂಬಲಿಗರು (ಬಹುತೇಕರು ಬಿಳಿಯರೇ) ಯು.ಎಸ್ ಕ್ಯಾಪಿಟಲ್ ಮೇಲೆ ಮುತ್ತಿಗೆ ಹಾಕಿ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಬದಲಿಸಲು ಹವಣಿಸಿದರು. ಈ ಕುರಿತು ಮಾತಾಡಿರುವ ಹಲವು ರಾಜಕೀಯ ನಾಯಕರು ಮತ್ತು ಕಾರ್ಯಕರ್ತರು, ಈ ಸಂದರ್ಭದಲ್ಲಿನ ಪೊಲೀಸರ ಮೃದು ವರ್ತನೆ ಮತ್ತು ಕಳೆದ ವರ್ಷ ನಡೆದ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ತೋರಿದ ದೌರ್ಜನ್ಯವನ್ನು ಉಲ್ಲೇಖಿಸಿ, ಪೊಲೀಸರ ಪಕ್ಷಪಾತಿ ಕ್ರಮವನ್ನು ಖಂಡಿಸಿದ್ದಾರೆ.

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

‘ನನಗೆ ಇದನ್ನು ಯಾರೂ ಹೇಳಬೇಕಿಲ್ಲ. ನಿನ್ನೆ ಪ್ರತಿಭಟಿಸಿದವರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಕೊಲೆಗಡುಕರ ಗುಂಪಿನ ಬದಲು, ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರಾಗಿದ್ದರೆ ಅವರನ್ನು ಬೇರೆ ರೀತಿಯಲ್ಲೇ ಟ್ರೀಟ್ ಮಾಡಲಾಗುತ್ತಿತ್ತು. ಇದು ಸತ್ಯ ಎಂಬುದು ನಮ್ಮೆಲ್ಲರಿಗೂ ಗೊತ್ತು. ಇದು ಒಪ್ಪಿತವಲ್ಲ, ಸಂಪೂರ್ಣ ಒಪ್ಪಿತವಲ್ಲ…’ ಎಂದು ಬೈಡನ್ ಟ್ವೀಟ್ ಮಾಡಿದ್ದಾರೆ.

‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರನ್ನು ಕೊಲೆಗಡುಕರು ಎಂದೇ ಕರೆಯುತ್ತಿದ್ದ ಟ್ರಂಪ್, ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದವರ ಪರ ಮಾತನಾಡುತ್ತ, ‘ದೀರ್ಘ ಸಮಯದಿಂದ ಕೆಟ್ಟದಾಗಿ ಟ್ರೀಟ್ ಮಾಡಲ್ಪಟ್ಟ ಇವರೆಲ್ಲ ಮಹಾನ್ ದೇಶಭಕ್ತರು ಎಂದು ಶ್ಲಾಘಿಸಿದ್ದಾರೆ.

ಮುತ್ತಿಗೆಯ ವಿಡಿಯೋ ಮತ್ತು ಫೋಟೊಗಳು ಹೊರ ಬರುತ್ತಿದ್ದಂತೆ, ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ನಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು, ಬುಧವಾರ ಪೊಲೀಸರು ತೋರಿದ ಮೃದು ಧೋರಣೆಯನ್ನು ಉಲ್ಲೇಖಿಸಿ, ‘ಇದು ಅಮೆರಿಕದ ಅಸಮಾನ ನ್ಯಾಯ ವ್ಯವಸ್ಥೆಯ ಸ್ಪಷ್ಟ ಅಭಿವ್ಯಕ್ತಿಯಾಗಿದೆ ಎಂದು ಟೀಕಿಸಿದರು.

ಕಳೆದ ವರ್ಷ ಮಿನ್ನಿಪೊಲಿಸ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಕಪ್ಪು ವರ್ಣದ ಜಾರ್ಜ್ ಫ್ಲಾಯ್ಡ್ ಎಂಬ ವ್ಯಕ್ತಿಯನ್ನು ಮೊಣಕಾಲಿನಿಂದ ಕತ್ತು ಹಿಸುಕಿ ಕೊಂದ ನಂತರ ಅಮೆರಿಕದಲ್ಲಿ ಜನಾಂಗೀಯ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆ ನಡೆದವು. ಆ ಪ್ರತಿಭಟನೆಗಳಿಗೆ ಕಠಿಣವಾಗಿ ಸ್ಪಂದಿಸಿದ ಅಧ್ಯಕ್ಷ ಟ್ರಂಪ್, ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ‘ನ್ಯಾಷನಲ್ ಗಾರ್ಡ್ ಟ್ರೂಪ್’ಗಳನ್ನು ನಿಯೋಜಿಸಿದ್ದರು.

ಮೊನ್ನೆ ಜನವರಿ 6ರಂದು ಟ್ರಂಪ್‌ನ ಸಾವಿರಾರು ಬೆಂಬಲಿಗರು, ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸಲು ಐತಿಹಾಸಿಕ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದರು. ಕಾನೂನು ಜಾರಿ ಅಧಿಕಾರಿಗಳಿದ್ದರೂ, ಅವರು ಕಟ್ಟಡದ ಮೆಟ್ಟಿಲುಗಳನ್ನು ಏರಿದರು, ಪೊಲೀಸ್ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದರು ಮತ್ತು ಕಟ್ಟಡದ ಹೊರಭಾಗದ ಗೋಡೆಯನ್ನು ಏರಿದರು.

ಕಳೆದ ವರ್ಷದ ಜೂನ್‌ನಲ್ಲಿ ವಾಷಿಂಗ್ಟನ್ ಡಿಸಿಯ ಲೆಫಾಯತ್ತೆ ಪಾರ್ಕ್ ಬಳಿ ವರ್ಣಭೇದ ನೀತಿ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ನ್ಯಾಷನಲ್ ಗಾರ್ಡ್ ಟ್ರೂಪ್‌ನವರು ಕ್ರೂರವಾಗಿ ದಾಳಿ ನಡೆಸಿದ್ದರು. ಒಂದು ಫೋಟೊ ಕಾರ್ಯಕ್ರಮಕ್ಕಾಗಿ ಅಂದು ಟ್ರಂಪ್ ವೈಟ್‌ಹೌಸ್‌ನಿಂದ ಈ ಪಾರ್ಕ್ ಮಾರ್ಗವಾಗಿ ಚರ್ಚ್ ಒಂದಕ್ಕೆ ಹೋಗುತ್ತಿದ್ದ ಕಾರಣಕ್ಕಾಗಿ, ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದರು.

ಆದರೆ ಮೊನ್ನೆ ಬುಧವಾರ ಟ್ರಂಪ್ ಬೆಂಬಲಿಗರಿಂದ ಅವ್ಯವಸ್ಥೆ ಉಂಟಾದ ಕೂಡಲೇ, ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಲು ಸಭೆ ಸೇರಿದ್ದ ಶಾಸಕರನ್ನು (ಲಾ ಮೇಕರ್ಸ್) ಆವರಣದಿಂದ ಸ್ಥಳಾಂತರಿಸಲಾಯಿತು. ಉದ್ರಿಕ್ತ ಗಲಭೆಕೋರರು ಅವರ ಕಚೇರಿಗಳನ್ನು ಧ್ವಂಸಗೊಳಿಸಿದರು.

ಕಳೆದ ವರ್ಷ ಜೂನ್‌ನಲ್ಲಿ ಕಪ್ಪು ವರ್ಣೀಯರು ಪೊಲೀಸ್ ದೌರ್ಜನ್ಯ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ, ನ್ಯಾಷನಲ್ ಗಾರ್ಡ್ ಸದಸ್ಯರು ಲಿಂಕನ್ ಸ್ಮಾರಕದ ಸುತ್ತ ಸಾಲಾಗಿ ನಿಂತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್ ಆಗಿತ್ತು.

ಕಳೆದ ವರ್ಷ ಕಾನೂನು ಜಾರಿ ಮಾಡುವ ಅಧಿಕಾರಿಗಳು, ವರ್ಣಭೇದ ನೀತಿ ವಿರೋದಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಟಿಯರ್ ಗ್ಯಾಸ್ ಮತ್ತು ರಬ್ಬರ್ ಬುಲೆಟ್‌ಗಳನ್ನು ಪ್ರಯೋಗಿಸಿದ್ದರು. ಅವರ ಆ ಕ್ರೌರ್ಯತೆಗೆ ಜಗತ್ತಿನಾದ್ಯಂತ ಮಾನವ ಹಕ್ಕು ಹೋರಾಟಗಾರರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಮೊನ್ನೆ ಮುತ್ತಿಗೆ ಹಾಕಿದ ದಂಗೆಕೋರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದರಾದರೂ, ಕಾನೂನು ಜಾರಿ ಅಧಿಕಾರಿಗಳು ದಂಗೆಕೋರರೊಂದಿಗೆ ಶಾಂತವಾಗಿ, ಮೃದುವಾಗಿ ಮಾತನಾಡಿದರು. ಕಾನೂನು ಜಾರಿ ಅಧಿಕಾರಿಗಳು ಗಾಯಗೊಂಡ ಟ್ರಂಪ್ ಬೆಂಬಲಿಗರ ಆರೈಕೆ ಮಾಡುವ ಫೋಟೊ, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಕೆರಳಿಸಿದೆ. ಕಳೆದ ವರ್ಷ ಗಾಯಗೊಂಡ ತಮ್ಮ ಸದಸ್ಯರಿಗೆ ಇಂತಹ ಆರೈಕೆ ಸಿಗದೇ ಇದ್ದುದನ್ನು ಅವರು ಈಗ ಪ್ರಶ್ನಿಸುತ್ತಿದ್ದಾರೆ.

ಕಳೆದ ವರ್ಷ ಜನಾಂಗೀಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಬಂಧಿಲಾಗಿತ್ತು. ಪೊಲೀಸ್ ಅಂಕಿಸಂಖ್ಯೆ ಪ್ರಕಾರ, 2020 ಮೇ 30 ಮತ್ತು ಜೂನ್ 2ರ ನಡುವೆ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ 427 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು.

ಆದರೆ ಬುಧವಾರ ಗಲಭೆಕೋರರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಪ್ರಕರಣದಲ್ಲಿ ಕೇವಲ 53 ಜನರನ್ನು ಬಂಧಿಲಾಗಿದೆ.

ಕೃಪೆ: –ರಹೇಲ್ ಫಿಲಿಪೋಸ್ (ಇಂಡಿಯನ್ ಎಕ್ಸ್ ಪ್ರೆಸ್)

ಅನುವಾದ: ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...