Homeಮುಖಪುಟಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

ಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

- Advertisement -
- Advertisement -

ಕಳೆದ ಎರಡು ವಾರಗಳಲ್ಲಿ ಹಲವಾರು ಸಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಆಗುತ್ತಲೇ ಇದೆ. ವಿಪಕ್ಷಗಳ ವಿಚಾರದಲ್ಲಿ ಕಠೋರ ನಿಲುವು ತಾಳುತ್ತಿರುವ ಚುನಾವಣಾ ಆಯೋಗ ಗಂಭೀರ ತಪ್ಪು ಮಾಡಿದ ಬಿಜೆಪಿ ನಾಯಕರಿಗೆ ‘ಅಸಂತೋಷ’ದ ಸೂಚನೆ ನೀಡುತ್ತಿದೆ… ಇದನ್ನೆಲ್ಲ ಗಮಿನಿಸಿದರೆ, ಸಿಬಿಐ, ಐಟಿ ಇಲಾಖೆ ಹಾದಿಯಲ್ಲೇ ಆಯೋಗವೂ ಸಾಗುತ್ತಿರುವ ಸಾಧ್ಯತೆಗಳು ಗೋಚರಿಸುತ್ತಿವೆ..

ನಿನ್ನೆ ಏಪ್ರಿಲ್ 5ರಂದು ದೇಶದ ಪ್ರಜಾಪ್ರಭುತ್ವದ ‘ಒಂಬುಡ್ಸ್‍ಮನ್’ ಎಂದು ಕರೆಯಲ್ಪಡುವ ಚುನಾವಣಾ ಆಯೋಗವು ನೀತಿ ಸಂಹಿತೆ ಉಲ್ಲಂಘನೆಯ ಎರಡು  ಪ್ರಕರಣಗಳ ಕುರಿತಂತೆ ತಪ್ಪು  ತೀರ್ಪುಗಳನ್ನು ನೀಡಿದೆ. ಒಂದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು, ಭಾರತೀಯ ಸೇನೆಯನ್ನು ಮೋದಿಸೇನೆ ಎಂದ ಪ್ರಕರಣ.

ಮೋದಿ ಸಂಪುಟದ ಸಚಿವ ವಿ.ಕೆ. ಸಿಂಗ್ ಸೇರಿದಂತೆ, ಹಲವಾರು ಜನರ ಖಂಡನೆಯ ನಂತರ ಚುನಾವಣಾ ಆಯೋಗವು ಯೋಗಿಗೆ ‘ಜಾರೂಕರಾಗಿರುವಂತೆ ಸಲಹೆ’ ನೀಡುವ ಪತ್ರವನ್ನು ಕಳಿಸಿದೆ!

ಎರಡನೇಯ ನೀತಿ ಸಂಹಿತೆ ಉಲ್ಲಂಘನೆ, ನೀತಿ ಆಯೋಗದ ಉಪಾಧ್ಯಕ್ಷ  ರಾಜೀವಕುಮಾರ್, ಕಾಂಗ್ರೆಸ್‍ನ ‘ಕನಿಷ್ಠ ಆದಾಯ ಖಾತ್ರಿ’ಯ ಭರವಸೆ ಕುರಿತು ಮಾಡಿದ ಟೀಕೆ ಕುರಿತದ್ದು. ಈ ಕುರಿತಂತೆ ರಾಜೀವಕುಮಾರರಿಗೂ ಪತ್ರ ಕಳಿಸಿರುವ ಆಯೋಗ,  ಸಾರ್ವಜನಿಕ ಸೇವಕರು ನೀತಿ ಸಂಹಿತೆ ಪಾಲಿಸುವುದು, ಚುನಾವಣಾ ಪಾವಿತ್ರ್ಯವನ್ನು ಕಾಪಾಡುವುದು ಅಗತ್ಯ’ ಎಂದು ‘ಬೋಧನೆ’ ಮಾಡಿರುವ ಅದು, ‘ತಮ್ಮ ನಡೆ ಬಗ್ಗೆ ಆಯೋಗಕ್ಕೆ ಅಸಂತೋಷವಿದೆ, ಇನ್ನುಂದೆ ಹುಷಾರಾಗಿರಿ’ ಎಂದಿದೆ!

ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು, ಅದರಲ್ಲೂ ಬಿಜೆಪಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಿನ್ನೆಯೇ (ಏ.5) ವಿಪಕ್ಷಗಳು ‘ಹಫ್‍ಫೋಸ್ಟ್  ಬಯಲು ಮಾಡಿರುವ ‘’ಅಸೋಷಿಯೇಷನ್ ಆಫ್ ಬಿಲಿಯನ್ ಮೈಂಡ್ಸ್’ ಸಂಸ್ಥೆಯ ಮೇಲೆ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಬಿಜೆಪಿಯಿಂದ ತೆರೆಮರೆಯಲ್ಲಿ ನಡೆಸಲ್ಪಡುವ ಈ ಎನ್‍ಜಿಒ, ಕಳೆದ ಐದು ವರ್ಷಗಳ ಕಾಲ ಆನ್‍ಲೈನಿನಲ್ಲಿ ಬಿಜೆಪಿ ಪ್ರಪಗಂಡಾಗಳನ್ನು ವ್ಯವಸ್ಥಿತವಾಗಿ ಹರಡುವ ಕೆಲಸ ಮಾಡುತ್ತಿದೆ.

ಇದರ ವಿರುದ್ಧ ಆಯೋಗ ತ್ವರಿತ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸುವುದೇ ಮೂರ್ಖತನವೇನೋ?  ‘ಈ ಸಮಾಜಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ವಿಷಯದಲ್ಲೂ ಆಯೋಗ ಕಾಟಾಚಾರದ ಆಟವಾಡಿದೆ.

ಮೋದಿಯ ‘ಮೈ ಭಿ ಚೌಕಿದಾರ್’ ಕಾರ್ಯಕ್ರಮ ನೇರ ಪ್ರಸಾರ ಮಾಡಿದ ದೂರದರ್ಶನ, ನಿಯಮಗಳನ್ನು ಉಲ್ಲಂಘಿಸಿ ಹಠಾತ್ತನೇ ಹುಟ್ಟಿದ ‘ನಮೋ ಟಿವಿ’- ಇವೆಲ್ಲವಕ್ಕೂ ಆಯೋಗ ಸ್ಪಷ್ಟೀಕರಣ ಕೇಳುವ ಕೆಲಸ ಮಾಡುತ್ತಿದೆಯಷ್ಟೇ. ಮೋದಿಯ ಜೀವನಾಧಾರಿತ ಚಿತ್ರ ಬಿಡುಗಡೆಗೂ ಆಯೋಗದ ಆಕ್ಷೇಪವಿಲ್ಲ.

ಆದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರಿಗೆ ಆಪ್ತರೆನ್ನಲಾದ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಹಳೆಯ ಆದೇಶವೊಂದರ ನೆಪದಲ್ಲಿ ಆಯೋಗ ಸಸ್ಪೆಂಡ್ ಮಾಡಿದೆ.

ಬರುವ ದಿನಗಳಲ್ಲಿ ಆಯೋಗವು ಬಿಜೆಪಿಯ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣವಾಗಿ ವರ್ತಿಸಲಾರದು ಎಂಬ ಸಂದೇಶ ಈಗಾಗಲೇ ಬಿಜೆಪಿ ನಾಯಕರಿಗೆ ಮನದಟ್ಟಾಗುತ್ತಿದ್ದು, ಇನ್ನಷ್ಟು ದ್ವೇಷಾಸೂಯೆಯ, ಸೇನೆಯ ಹೆಸರು ದುರ್ಬಳಕೆಯ ಭಾಷಣಗಳು ಕೇಳಿ ಬರಲಿವೆ. ಜನ ಮಾತ್ರ ಇಂಥದಕ್ಕೆಲ್ಲ ಬಲಿಯಾಗಬಾರದು.

ಮೋದಿಯ ಬುಟ್ಟಿಯಲ್ಲಿ ಈಗ ಆಯೋಗವೂ ಸ್ಥಾನ ಪಡೆದುಕೊಂಡಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...