Homeಮುಖಪುಟಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

ಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

- Advertisement -
- Advertisement -

ಕಳೆದ ಎರಡು ವಾರಗಳಲ್ಲಿ ಹಲವಾರು ಸಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಆಗುತ್ತಲೇ ಇದೆ. ವಿಪಕ್ಷಗಳ ವಿಚಾರದಲ್ಲಿ ಕಠೋರ ನಿಲುವು ತಾಳುತ್ತಿರುವ ಚುನಾವಣಾ ಆಯೋಗ ಗಂಭೀರ ತಪ್ಪು ಮಾಡಿದ ಬಿಜೆಪಿ ನಾಯಕರಿಗೆ ‘ಅಸಂತೋಷ’ದ ಸೂಚನೆ ನೀಡುತ್ತಿದೆ… ಇದನ್ನೆಲ್ಲ ಗಮಿನಿಸಿದರೆ, ಸಿಬಿಐ, ಐಟಿ ಇಲಾಖೆ ಹಾದಿಯಲ್ಲೇ ಆಯೋಗವೂ ಸಾಗುತ್ತಿರುವ ಸಾಧ್ಯತೆಗಳು ಗೋಚರಿಸುತ್ತಿವೆ..

ನಿನ್ನೆ ಏಪ್ರಿಲ್ 5ರಂದು ದೇಶದ ಪ್ರಜಾಪ್ರಭುತ್ವದ ‘ಒಂಬುಡ್ಸ್‍ಮನ್’ ಎಂದು ಕರೆಯಲ್ಪಡುವ ಚುನಾವಣಾ ಆಯೋಗವು ನೀತಿ ಸಂಹಿತೆ ಉಲ್ಲಂಘನೆಯ ಎರಡು  ಪ್ರಕರಣಗಳ ಕುರಿತಂತೆ ತಪ್ಪು  ತೀರ್ಪುಗಳನ್ನು ನೀಡಿದೆ. ಒಂದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು, ಭಾರತೀಯ ಸೇನೆಯನ್ನು ಮೋದಿಸೇನೆ ಎಂದ ಪ್ರಕರಣ.

ಮೋದಿ ಸಂಪುಟದ ಸಚಿವ ವಿ.ಕೆ. ಸಿಂಗ್ ಸೇರಿದಂತೆ, ಹಲವಾರು ಜನರ ಖಂಡನೆಯ ನಂತರ ಚುನಾವಣಾ ಆಯೋಗವು ಯೋಗಿಗೆ ‘ಜಾರೂಕರಾಗಿರುವಂತೆ ಸಲಹೆ’ ನೀಡುವ ಪತ್ರವನ್ನು ಕಳಿಸಿದೆ!

ಎರಡನೇಯ ನೀತಿ ಸಂಹಿತೆ ಉಲ್ಲಂಘನೆ, ನೀತಿ ಆಯೋಗದ ಉಪಾಧ್ಯಕ್ಷ  ರಾಜೀವಕುಮಾರ್, ಕಾಂಗ್ರೆಸ್‍ನ ‘ಕನಿಷ್ಠ ಆದಾಯ ಖಾತ್ರಿ’ಯ ಭರವಸೆ ಕುರಿತು ಮಾಡಿದ ಟೀಕೆ ಕುರಿತದ್ದು. ಈ ಕುರಿತಂತೆ ರಾಜೀವಕುಮಾರರಿಗೂ ಪತ್ರ ಕಳಿಸಿರುವ ಆಯೋಗ,  ಸಾರ್ವಜನಿಕ ಸೇವಕರು ನೀತಿ ಸಂಹಿತೆ ಪಾಲಿಸುವುದು, ಚುನಾವಣಾ ಪಾವಿತ್ರ್ಯವನ್ನು ಕಾಪಾಡುವುದು ಅಗತ್ಯ’ ಎಂದು ‘ಬೋಧನೆ’ ಮಾಡಿರುವ ಅದು, ‘ತಮ್ಮ ನಡೆ ಬಗ್ಗೆ ಆಯೋಗಕ್ಕೆ ಅಸಂತೋಷವಿದೆ, ಇನ್ನುಂದೆ ಹುಷಾರಾಗಿರಿ’ ಎಂದಿದೆ!

ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು, ಅದರಲ್ಲೂ ಬಿಜೆಪಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಿನ್ನೆಯೇ (ಏ.5) ವಿಪಕ್ಷಗಳು ‘ಹಫ್‍ಫೋಸ್ಟ್  ಬಯಲು ಮಾಡಿರುವ ‘’ಅಸೋಷಿಯೇಷನ್ ಆಫ್ ಬಿಲಿಯನ್ ಮೈಂಡ್ಸ್’ ಸಂಸ್ಥೆಯ ಮೇಲೆ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಬಿಜೆಪಿಯಿಂದ ತೆರೆಮರೆಯಲ್ಲಿ ನಡೆಸಲ್ಪಡುವ ಈ ಎನ್‍ಜಿಒ, ಕಳೆದ ಐದು ವರ್ಷಗಳ ಕಾಲ ಆನ್‍ಲೈನಿನಲ್ಲಿ ಬಿಜೆಪಿ ಪ್ರಪಗಂಡಾಗಳನ್ನು ವ್ಯವಸ್ಥಿತವಾಗಿ ಹರಡುವ ಕೆಲಸ ಮಾಡುತ್ತಿದೆ.

ಇದರ ವಿರುದ್ಧ ಆಯೋಗ ತ್ವರಿತ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸುವುದೇ ಮೂರ್ಖತನವೇನೋ?  ‘ಈ ಸಮಾಜಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ವಿಷಯದಲ್ಲೂ ಆಯೋಗ ಕಾಟಾಚಾರದ ಆಟವಾಡಿದೆ.

ಮೋದಿಯ ‘ಮೈ ಭಿ ಚೌಕಿದಾರ್’ ಕಾರ್ಯಕ್ರಮ ನೇರ ಪ್ರಸಾರ ಮಾಡಿದ ದೂರದರ್ಶನ, ನಿಯಮಗಳನ್ನು ಉಲ್ಲಂಘಿಸಿ ಹಠಾತ್ತನೇ ಹುಟ್ಟಿದ ‘ನಮೋ ಟಿವಿ’- ಇವೆಲ್ಲವಕ್ಕೂ ಆಯೋಗ ಸ್ಪಷ್ಟೀಕರಣ ಕೇಳುವ ಕೆಲಸ ಮಾಡುತ್ತಿದೆಯಷ್ಟೇ. ಮೋದಿಯ ಜೀವನಾಧಾರಿತ ಚಿತ್ರ ಬಿಡುಗಡೆಗೂ ಆಯೋಗದ ಆಕ್ಷೇಪವಿಲ್ಲ.

ಆದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರಿಗೆ ಆಪ್ತರೆನ್ನಲಾದ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಹಳೆಯ ಆದೇಶವೊಂದರ ನೆಪದಲ್ಲಿ ಆಯೋಗ ಸಸ್ಪೆಂಡ್ ಮಾಡಿದೆ.

ಬರುವ ದಿನಗಳಲ್ಲಿ ಆಯೋಗವು ಬಿಜೆಪಿಯ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣವಾಗಿ ವರ್ತಿಸಲಾರದು ಎಂಬ ಸಂದೇಶ ಈಗಾಗಲೇ ಬಿಜೆಪಿ ನಾಯಕರಿಗೆ ಮನದಟ್ಟಾಗುತ್ತಿದ್ದು, ಇನ್ನಷ್ಟು ದ್ವೇಷಾಸೂಯೆಯ, ಸೇನೆಯ ಹೆಸರು ದುರ್ಬಳಕೆಯ ಭಾಷಣಗಳು ಕೇಳಿ ಬರಲಿವೆ. ಜನ ಮಾತ್ರ ಇಂಥದಕ್ಕೆಲ್ಲ ಬಲಿಯಾಗಬಾರದು.

ಮೋದಿಯ ಬುಟ್ಟಿಯಲ್ಲಿ ಈಗ ಆಯೋಗವೂ ಸ್ಥಾನ ಪಡೆದುಕೊಂಡಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...