Homeಮುಖಪುಟಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

ಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

- Advertisement -
- Advertisement -

ಕಳೆದ ಎರಡು ವಾರಗಳಲ್ಲಿ ಹಲವಾರು ಸಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಆಗುತ್ತಲೇ ಇದೆ. ವಿಪಕ್ಷಗಳ ವಿಚಾರದಲ್ಲಿ ಕಠೋರ ನಿಲುವು ತಾಳುತ್ತಿರುವ ಚುನಾವಣಾ ಆಯೋಗ ಗಂಭೀರ ತಪ್ಪು ಮಾಡಿದ ಬಿಜೆಪಿ ನಾಯಕರಿಗೆ ‘ಅಸಂತೋಷ’ದ ಸೂಚನೆ ನೀಡುತ್ತಿದೆ… ಇದನ್ನೆಲ್ಲ ಗಮಿನಿಸಿದರೆ, ಸಿಬಿಐ, ಐಟಿ ಇಲಾಖೆ ಹಾದಿಯಲ್ಲೇ ಆಯೋಗವೂ ಸಾಗುತ್ತಿರುವ ಸಾಧ್ಯತೆಗಳು ಗೋಚರಿಸುತ್ತಿವೆ..

ನಿನ್ನೆ ಏಪ್ರಿಲ್ 5ರಂದು ದೇಶದ ಪ್ರಜಾಪ್ರಭುತ್ವದ ‘ಒಂಬುಡ್ಸ್‍ಮನ್’ ಎಂದು ಕರೆಯಲ್ಪಡುವ ಚುನಾವಣಾ ಆಯೋಗವು ನೀತಿ ಸಂಹಿತೆ ಉಲ್ಲಂಘನೆಯ ಎರಡು  ಪ್ರಕರಣಗಳ ಕುರಿತಂತೆ ತಪ್ಪು  ತೀರ್ಪುಗಳನ್ನು ನೀಡಿದೆ. ಒಂದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು, ಭಾರತೀಯ ಸೇನೆಯನ್ನು ಮೋದಿಸೇನೆ ಎಂದ ಪ್ರಕರಣ.

ಮೋದಿ ಸಂಪುಟದ ಸಚಿವ ವಿ.ಕೆ. ಸಿಂಗ್ ಸೇರಿದಂತೆ, ಹಲವಾರು ಜನರ ಖಂಡನೆಯ ನಂತರ ಚುನಾವಣಾ ಆಯೋಗವು ಯೋಗಿಗೆ ‘ಜಾರೂಕರಾಗಿರುವಂತೆ ಸಲಹೆ’ ನೀಡುವ ಪತ್ರವನ್ನು ಕಳಿಸಿದೆ!

ಎರಡನೇಯ ನೀತಿ ಸಂಹಿತೆ ಉಲ್ಲಂಘನೆ, ನೀತಿ ಆಯೋಗದ ಉಪಾಧ್ಯಕ್ಷ  ರಾಜೀವಕುಮಾರ್, ಕಾಂಗ್ರೆಸ್‍ನ ‘ಕನಿಷ್ಠ ಆದಾಯ ಖಾತ್ರಿ’ಯ ಭರವಸೆ ಕುರಿತು ಮಾಡಿದ ಟೀಕೆ ಕುರಿತದ್ದು. ಈ ಕುರಿತಂತೆ ರಾಜೀವಕುಮಾರರಿಗೂ ಪತ್ರ ಕಳಿಸಿರುವ ಆಯೋಗ,  ಸಾರ್ವಜನಿಕ ಸೇವಕರು ನೀತಿ ಸಂಹಿತೆ ಪಾಲಿಸುವುದು, ಚುನಾವಣಾ ಪಾವಿತ್ರ್ಯವನ್ನು ಕಾಪಾಡುವುದು ಅಗತ್ಯ’ ಎಂದು ‘ಬೋಧನೆ’ ಮಾಡಿರುವ ಅದು, ‘ತಮ್ಮ ನಡೆ ಬಗ್ಗೆ ಆಯೋಗಕ್ಕೆ ಅಸಂತೋಷವಿದೆ, ಇನ್ನುಂದೆ ಹುಷಾರಾಗಿರಿ’ ಎಂದಿದೆ!

ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು, ಅದರಲ್ಲೂ ಬಿಜೆಪಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಿನ್ನೆಯೇ (ಏ.5) ವಿಪಕ್ಷಗಳು ‘ಹಫ್‍ಫೋಸ್ಟ್  ಬಯಲು ಮಾಡಿರುವ ‘’ಅಸೋಷಿಯೇಷನ್ ಆಫ್ ಬಿಲಿಯನ್ ಮೈಂಡ್ಸ್’ ಸಂಸ್ಥೆಯ ಮೇಲೆ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಬಿಜೆಪಿಯಿಂದ ತೆರೆಮರೆಯಲ್ಲಿ ನಡೆಸಲ್ಪಡುವ ಈ ಎನ್‍ಜಿಒ, ಕಳೆದ ಐದು ವರ್ಷಗಳ ಕಾಲ ಆನ್‍ಲೈನಿನಲ್ಲಿ ಬಿಜೆಪಿ ಪ್ರಪಗಂಡಾಗಳನ್ನು ವ್ಯವಸ್ಥಿತವಾಗಿ ಹರಡುವ ಕೆಲಸ ಮಾಡುತ್ತಿದೆ.

ಇದರ ವಿರುದ್ಧ ಆಯೋಗ ತ್ವರಿತ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸುವುದೇ ಮೂರ್ಖತನವೇನೋ?  ‘ಈ ಸಮಾಜಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ವಿಷಯದಲ್ಲೂ ಆಯೋಗ ಕಾಟಾಚಾರದ ಆಟವಾಡಿದೆ.

ಮೋದಿಯ ‘ಮೈ ಭಿ ಚೌಕಿದಾರ್’ ಕಾರ್ಯಕ್ರಮ ನೇರ ಪ್ರಸಾರ ಮಾಡಿದ ದೂರದರ್ಶನ, ನಿಯಮಗಳನ್ನು ಉಲ್ಲಂಘಿಸಿ ಹಠಾತ್ತನೇ ಹುಟ್ಟಿದ ‘ನಮೋ ಟಿವಿ’- ಇವೆಲ್ಲವಕ್ಕೂ ಆಯೋಗ ಸ್ಪಷ್ಟೀಕರಣ ಕೇಳುವ ಕೆಲಸ ಮಾಡುತ್ತಿದೆಯಷ್ಟೇ. ಮೋದಿಯ ಜೀವನಾಧಾರಿತ ಚಿತ್ರ ಬಿಡುಗಡೆಗೂ ಆಯೋಗದ ಆಕ್ಷೇಪವಿಲ್ಲ.

ಆದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರಿಗೆ ಆಪ್ತರೆನ್ನಲಾದ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಹಳೆಯ ಆದೇಶವೊಂದರ ನೆಪದಲ್ಲಿ ಆಯೋಗ ಸಸ್ಪೆಂಡ್ ಮಾಡಿದೆ.

ಬರುವ ದಿನಗಳಲ್ಲಿ ಆಯೋಗವು ಬಿಜೆಪಿಯ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣವಾಗಿ ವರ್ತಿಸಲಾರದು ಎಂಬ ಸಂದೇಶ ಈಗಾಗಲೇ ಬಿಜೆಪಿ ನಾಯಕರಿಗೆ ಮನದಟ್ಟಾಗುತ್ತಿದ್ದು, ಇನ್ನಷ್ಟು ದ್ವೇಷಾಸೂಯೆಯ, ಸೇನೆಯ ಹೆಸರು ದುರ್ಬಳಕೆಯ ಭಾಷಣಗಳು ಕೇಳಿ ಬರಲಿವೆ. ಜನ ಮಾತ್ರ ಇಂಥದಕ್ಕೆಲ್ಲ ಬಲಿಯಾಗಬಾರದು.

ಮೋದಿಯ ಬುಟ್ಟಿಯಲ್ಲಿ ಈಗ ಆಯೋಗವೂ ಸ್ಥಾನ ಪಡೆದುಕೊಂಡಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...