Homeಚಳವಳಿದೆಹಲಿ ಗಡಿಗಳಲ್ಲಿ ರಾಜಸ್ಥಾನ-ಮಹಾರಾಷ್ಟ್ರ ರೈತರ ಹೋರಾಟ: ನೀವು ತಿಳಿಯಬೇಕಾದ ಅಂಶಗಳು

ದೆಹಲಿ ಗಡಿಗಳಲ್ಲಿ ರಾಜಸ್ಥಾನ-ಮಹಾರಾಷ್ಟ್ರ ರೈತರ ಹೋರಾಟ: ನೀವು ತಿಳಿಯಬೇಕಾದ ಅಂಶಗಳು

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

- Advertisement -
- Advertisement -

ಟ್ರಿಕಿ, ಸಿಂಗು, ಗಾಜಿಯಾಪುರ‌ದಂತೆಯೇ ರಾಜಸ್ಥಾನ-ಹರಿಯಾಣ ರಾಜ್ಯಗಳನ್ನು ಬೆಸೆಯುವ ಹೆದ್ದಾರಿಯಲ್ಲಿರುವ ಶಹಜಹಾನ್‌ಪುರ್‌ ಗಡಿಯಲ್ಲಿ ರೈತ ಹೋರಾಟ ನಡೆಯುತ್ತಿದೆ.

ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ ಪಂಜಾಬ್‌, ಹರಿಯಾಣದಿಂದ ದೊಡ್ಡ ಸಂಖ್ಯೆಯಲ್ಲಿ ಬಂದ ರೈತರು ಹೋರಾಟಕ್ಕೆ ಕುಳಿತಿದ್ದರೆ, ಶಹಜಹಾನ್‌ಪುರ್‌ ಗಡಿಯಲ್ಲಿ ಡಿಸೆಂಬರ್‌ 12ರಿಂದ ರಾಜಸ್ಥಾನದಿಂದ ಬಂದ ರೈತರು ಹೋರಾಟಕ್ಕೆ ಕುಳಿತಿದ್ದಾರೆ. ಈ ಹೋರಾಟದ ಮುಂದಾಳತ್ವವನ್ನು ಆಲ್‌ ಇಂಡಿಯಾ ಕಿಸಾನ್‌ ಸಭಾ ವಹಿಸಿಕೊಂಡಿದೆ.

ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಕೇರಳದಿಂದಲೂ ಸಾವಿರಾರು ಸಂಖ್ಯೆಯ ರೈತರು ಈ ಗಡಿ ಭಾಗಕ್ಕೆ ಬಂದು ಹೋರಾಟದಲ್ಲಿ ಜೊತೆಯಾಗಿದ್ದಾರೆ.

ದೆಹಲಿ ಚಲೋ ಜಾಥಾದ ಭಾಗವಾಗಿ ರಾಜಸ್ಥಾನದಿಂದ ಹೊರಟ ರೈತರನ್ನು ರಾಜಸ್ಥಾನ ಹಾಗೂ ಹರಿಯಾಣ ಪೊಲೀಸರು ಈ ಗಡಿಯಲ್ಲಿ ತಡೆದು ನಿಲ್ಲಿಸಿದ್ದು ಕಳೆದ ಆರು ವಾರಗಳಿಂದ ಹೋರಾಟ ಮುಂದುವರೆದಿದೆ.

ಕಿಸಾನ್‌ ಮಹಾ ಪಂಚಾಯತ್‌ ಸೇರಿದಂತೆ ವಿವಿಧ ರೈತ ಸಂಘಟನೆಗಳು 25 ಟ್ರ್ಯಾಕ್ಟರ್‌ಗಳೊಂದಿಗೆ ಗಡಿಯನ್ನು ತಲುಪಿದ್ದು, ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಕ್ಕೆ ಪಂಜಾಬ್‌ ರೈತರಂತೆ ಪಟ್ಟು ಹಿಡಿದಿದ್ದಾರೆ.

ಜಾಟ್‌ ಮಹಾಸಭಾ 100ಕ್ಕೂ ಹೆಚ್ಚು ವಾಹನಗಳೊಂದಿಗೆ ಈ ಹೋರಾಟದಲ್ಲಿ ಜೊತೆಯಾಗಿ ಇತ್ತೀಚೆಗೆ ಜೈಪುರ -ದೆಹಲಿ ಹೈವೇ ತಡೆಯುವ ಯತ್ನ ನಡೆಸಿ, ಸರ್ಕಾರಗಳಿಗೆ ಹೋರಾಟದ ಬಿಸಿ ಮುಟ್ಟಿಸಿತ್ತು.

ಕಿಸಾನ್‌ ಸಂಯುಕ್ತ ಮೋರ್ಚಾದ ಸಂಯೋಜಕರಾಗಿರುವ ರಾಜಕೀಯ ಚಿಂತಕ ಯೋಗೇಂದ್ರ ಯಾದವ್‌, ಪ್ರಾದೇಶಿಕ ರೈತ ಸಂಘಟನೆಗಳನ್ನು ಇಲ್ಲಿಗೆ ಕರೆತರುವ, ಹೋರಾಟದ ಬಲವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸಿದ್ದಾರೆ.

ಇದಕ್ಕಾಗಿ ಸಕ್ತಪುರಾ, ಗುಗಲ್‌ಕೋಟ, ಮಿರ್ಜಾಪುರ್‌, ಪಲವಾ, ಬಿರೋದಾ, ಫೌಲಾದ್‌ಪುರ್‌ಗಳ ರೈತರಿಂದ ಬೆಂಬಲವನ್ನು ಕೇಳಲಾಗಿದೆ.

ಕಿಸಾನ್ ಸಂಘರ್ಷ ಸಮಿತಿ, ಭೀಮಸೇನೆ, ಎಎಎಸ್‌ಪಿ, ಸಮಾಜವಾದಿ ಪಕ್ಷ, ಅಂಬೇಡ್ಕರ್‌ವಾದಿ ಪಕ್ಷ, ರಾಷ್ಟ್ರೀಯ ಲೋಕ ತಾಂತ್ರಿಕ ಪಕ್ಷ, ಸ್ವರಾಜ್‌ ಯುವ ಸಂಘಟನೆ ಈ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಮಾಜಿ ಶಾಸಕ, ಹಾಲಿ ಆಲ್‌ ಇಂಡಿಯಾ ಕಿಸಾನ್‌ ಸಭಾದ ಅಮ್ರಾ ರಾಮ್‌, ಲೋಕ ತಾಂತ್ರಿಕ ಪಕ್ಷದ ಸಂಸದ ಹನುಮಾನ್‌ ಬೆನಿವಾಲಾ ಹೋರಾಟ ನಾಯಕತ್ವ ವಹಿಸಿಕೊಂಡಿದ್ದಾರೆ. ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌, ಕಿಸಾನ್‌ ಮಹಾಪಂಚಾಯತ್‌ ರಾಷ್ಟ್ರೀಯ ಅಧ್ಯಕ್ಷ ರಾಮ್‌ಪಾಲ್‌ ಜಾಟ್‌, ಸಮಾಜಸೇವಕ ರಾಧೇಶ್ಯಾಮ್‌ ಶುಕ್ಲಾವಾಸ್‌, ಕಿಸಾನ್‌ ಯೂನಿಯನ್‌ನ ಬಲಬೀರ್‌ ಛಿಲ್ಲರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಲಿತ್‌ ಯಾದವ್‌ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಈ ಹೋರಾಟದಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ರಾಜಸ್ಥಾನ, ಹರಿಯಾಣ ಸೇರಿದಂತೆ ವಿವಿಧ ಭಾಗಗಳ ನಾಯಕರು ಇಲ್ಲಿ ನೆರೆದ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಹೊಸ ವರ್ಷದ ಮುನ್ನಾ ದಿನ ರೈತರು ಮತ್ತು ಪೊಲೀಸರೊಂದಿಗೆ ನಡೆದ ಸಂಘರ್ಷದಲ್ಲಿ ಯುವ ಹೋರಾಟಗಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕೆಡವಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಹೋರಾಟಗಾರರನ್ನು ಹಿಮ್ಮೆಟ್ಟಿಸುವುದಕ್ಕಾಗಿ ಟಿಯರ್‌ ಗ್ಯಾಸ್‌, ವಾಟರ್‌ ಕ್ಯಾನನ್‌ಗಳನ್ನು ಬಳಸಿದವು. ಗಡಿಯ ಎರಡು ಬದಿಯಲ್ಲಿ ಡ್ರೋನ್‌ಗಳ ಮೂಲಕ ಹೋರಾಟಗಾರರ ಮೇಲೆ ನಿಗಾ ಇಡಲಾಗಿದೆ.

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

ಹೀಗೇ ವಿವಿಧ ರಾಜ್ಯಗಳಿಂದ ರೈತ ಹೋರಾಟಗಾರರು ಈ ಗಡಿಯನ್ನು ತಲುಪುತ್ತಿದ್ದು, ಪ್ರತಿಭಟನೆಗೆ ದಿನದಿನಕ್ಕೂ ಹೊಸ ಹುರುಪು, ಹೊಸ ಶಕ್ತಿಯನ್ನು ಪಡೆದುಕೊಳ್ಳುತ್ತಿದೆ. ಶುಕ್ರವಾರ 8ನೇ ಸುತ್ತಿನ ಮಾತುಕತೆಯೂ ವಿಫಲವಾದ ನಂತರ ರೈತರು ಟಿಕ್ರಿ-ಸಿಂಘು ರೈತರಂತೆ ಈ ಗಡಿಯ ರೈತ ಹೋರಾಟಗಾರರು ಜ. 26ರ ಟ್ರ್ಯಾಕ್ಟರ್‌ ರ್ಯಾಲಿಗೆ ಸಿದ್ಧರಾಗುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...