Homeಚಳವಳಿದೆಹಲಿ ಗಡಿಗಳಲ್ಲಿ ರಾಜಸ್ಥಾನ-ಮಹಾರಾಷ್ಟ್ರ ರೈತರ ಹೋರಾಟ: ನೀವು ತಿಳಿಯಬೇಕಾದ ಅಂಶಗಳು

ದೆಹಲಿ ಗಡಿಗಳಲ್ಲಿ ರಾಜಸ್ಥಾನ-ಮಹಾರಾಷ್ಟ್ರ ರೈತರ ಹೋರಾಟ: ನೀವು ತಿಳಿಯಬೇಕಾದ ಅಂಶಗಳು

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

- Advertisement -
- Advertisement -

ಟ್ರಿಕಿ, ಸಿಂಗು, ಗಾಜಿಯಾಪುರ‌ದಂತೆಯೇ ರಾಜಸ್ಥಾನ-ಹರಿಯಾಣ ರಾಜ್ಯಗಳನ್ನು ಬೆಸೆಯುವ ಹೆದ್ದಾರಿಯಲ್ಲಿರುವ ಶಹಜಹಾನ್‌ಪುರ್‌ ಗಡಿಯಲ್ಲಿ ರೈತ ಹೋರಾಟ ನಡೆಯುತ್ತಿದೆ.

ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ ಪಂಜಾಬ್‌, ಹರಿಯಾಣದಿಂದ ದೊಡ್ಡ ಸಂಖ್ಯೆಯಲ್ಲಿ ಬಂದ ರೈತರು ಹೋರಾಟಕ್ಕೆ ಕುಳಿತಿದ್ದರೆ, ಶಹಜಹಾನ್‌ಪುರ್‌ ಗಡಿಯಲ್ಲಿ ಡಿಸೆಂಬರ್‌ 12ರಿಂದ ರಾಜಸ್ಥಾನದಿಂದ ಬಂದ ರೈತರು ಹೋರಾಟಕ್ಕೆ ಕುಳಿತಿದ್ದಾರೆ. ಈ ಹೋರಾಟದ ಮುಂದಾಳತ್ವವನ್ನು ಆಲ್‌ ಇಂಡಿಯಾ ಕಿಸಾನ್‌ ಸಭಾ ವಹಿಸಿಕೊಂಡಿದೆ.

ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಕೇರಳದಿಂದಲೂ ಸಾವಿರಾರು ಸಂಖ್ಯೆಯ ರೈತರು ಈ ಗಡಿ ಭಾಗಕ್ಕೆ ಬಂದು ಹೋರಾಟದಲ್ಲಿ ಜೊತೆಯಾಗಿದ್ದಾರೆ.

ದೆಹಲಿ ಚಲೋ ಜಾಥಾದ ಭಾಗವಾಗಿ ರಾಜಸ್ಥಾನದಿಂದ ಹೊರಟ ರೈತರನ್ನು ರಾಜಸ್ಥಾನ ಹಾಗೂ ಹರಿಯಾಣ ಪೊಲೀಸರು ಈ ಗಡಿಯಲ್ಲಿ ತಡೆದು ನಿಲ್ಲಿಸಿದ್ದು ಕಳೆದ ಆರು ವಾರಗಳಿಂದ ಹೋರಾಟ ಮುಂದುವರೆದಿದೆ.

ಕಿಸಾನ್‌ ಮಹಾ ಪಂಚಾಯತ್‌ ಸೇರಿದಂತೆ ವಿವಿಧ ರೈತ ಸಂಘಟನೆಗಳು 25 ಟ್ರ್ಯಾಕ್ಟರ್‌ಗಳೊಂದಿಗೆ ಗಡಿಯನ್ನು ತಲುಪಿದ್ದು, ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಕ್ಕೆ ಪಂಜಾಬ್‌ ರೈತರಂತೆ ಪಟ್ಟು ಹಿಡಿದಿದ್ದಾರೆ.

ಜಾಟ್‌ ಮಹಾಸಭಾ 100ಕ್ಕೂ ಹೆಚ್ಚು ವಾಹನಗಳೊಂದಿಗೆ ಈ ಹೋರಾಟದಲ್ಲಿ ಜೊತೆಯಾಗಿ ಇತ್ತೀಚೆಗೆ ಜೈಪುರ -ದೆಹಲಿ ಹೈವೇ ತಡೆಯುವ ಯತ್ನ ನಡೆಸಿ, ಸರ್ಕಾರಗಳಿಗೆ ಹೋರಾಟದ ಬಿಸಿ ಮುಟ್ಟಿಸಿತ್ತು.

ಕಿಸಾನ್‌ ಸಂಯುಕ್ತ ಮೋರ್ಚಾದ ಸಂಯೋಜಕರಾಗಿರುವ ರಾಜಕೀಯ ಚಿಂತಕ ಯೋಗೇಂದ್ರ ಯಾದವ್‌, ಪ್ರಾದೇಶಿಕ ರೈತ ಸಂಘಟನೆಗಳನ್ನು ಇಲ್ಲಿಗೆ ಕರೆತರುವ, ಹೋರಾಟದ ಬಲವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸಿದ್ದಾರೆ.

ಇದಕ್ಕಾಗಿ ಸಕ್ತಪುರಾ, ಗುಗಲ್‌ಕೋಟ, ಮಿರ್ಜಾಪುರ್‌, ಪಲವಾ, ಬಿರೋದಾ, ಫೌಲಾದ್‌ಪುರ್‌ಗಳ ರೈತರಿಂದ ಬೆಂಬಲವನ್ನು ಕೇಳಲಾಗಿದೆ.

ಕಿಸಾನ್ ಸಂಘರ್ಷ ಸಮಿತಿ, ಭೀಮಸೇನೆ, ಎಎಎಸ್‌ಪಿ, ಸಮಾಜವಾದಿ ಪಕ್ಷ, ಅಂಬೇಡ್ಕರ್‌ವಾದಿ ಪಕ್ಷ, ರಾಷ್ಟ್ರೀಯ ಲೋಕ ತಾಂತ್ರಿಕ ಪಕ್ಷ, ಸ್ವರಾಜ್‌ ಯುವ ಸಂಘಟನೆ ಈ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಮಾಜಿ ಶಾಸಕ, ಹಾಲಿ ಆಲ್‌ ಇಂಡಿಯಾ ಕಿಸಾನ್‌ ಸಭಾದ ಅಮ್ರಾ ರಾಮ್‌, ಲೋಕ ತಾಂತ್ರಿಕ ಪಕ್ಷದ ಸಂಸದ ಹನುಮಾನ್‌ ಬೆನಿವಾಲಾ ಹೋರಾಟ ನಾಯಕತ್ವ ವಹಿಸಿಕೊಂಡಿದ್ದಾರೆ. ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌, ಕಿಸಾನ್‌ ಮಹಾಪಂಚಾಯತ್‌ ರಾಷ್ಟ್ರೀಯ ಅಧ್ಯಕ್ಷ ರಾಮ್‌ಪಾಲ್‌ ಜಾಟ್‌, ಸಮಾಜಸೇವಕ ರಾಧೇಶ್ಯಾಮ್‌ ಶುಕ್ಲಾವಾಸ್‌, ಕಿಸಾನ್‌ ಯೂನಿಯನ್‌ನ ಬಲಬೀರ್‌ ಛಿಲ್ಲರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಲಿತ್‌ ಯಾದವ್‌ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಈ ಹೋರಾಟದಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ರಾಜಸ್ಥಾನ, ಹರಿಯಾಣ ಸೇರಿದಂತೆ ವಿವಿಧ ಭಾಗಗಳ ನಾಯಕರು ಇಲ್ಲಿ ನೆರೆದ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಹೊಸ ವರ್ಷದ ಮುನ್ನಾ ದಿನ ರೈತರು ಮತ್ತು ಪೊಲೀಸರೊಂದಿಗೆ ನಡೆದ ಸಂಘರ್ಷದಲ್ಲಿ ಯುವ ಹೋರಾಟಗಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕೆಡವಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಹೋರಾಟಗಾರರನ್ನು ಹಿಮ್ಮೆಟ್ಟಿಸುವುದಕ್ಕಾಗಿ ಟಿಯರ್‌ ಗ್ಯಾಸ್‌, ವಾಟರ್‌ ಕ್ಯಾನನ್‌ಗಳನ್ನು ಬಳಸಿದವು. ಗಡಿಯ ಎರಡು ಬದಿಯಲ್ಲಿ ಡ್ರೋನ್‌ಗಳ ಮೂಲಕ ಹೋರಾಟಗಾರರ ಮೇಲೆ ನಿಗಾ ಇಡಲಾಗಿದೆ.

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

ಹೀಗೇ ವಿವಿಧ ರಾಜ್ಯಗಳಿಂದ ರೈತ ಹೋರಾಟಗಾರರು ಈ ಗಡಿಯನ್ನು ತಲುಪುತ್ತಿದ್ದು, ಪ್ರತಿಭಟನೆಗೆ ದಿನದಿನಕ್ಕೂ ಹೊಸ ಹುರುಪು, ಹೊಸ ಶಕ್ತಿಯನ್ನು ಪಡೆದುಕೊಳ್ಳುತ್ತಿದೆ. ಶುಕ್ರವಾರ 8ನೇ ಸುತ್ತಿನ ಮಾತುಕತೆಯೂ ವಿಫಲವಾದ ನಂತರ ರೈತರು ಟಿಕ್ರಿ-ಸಿಂಘು ರೈತರಂತೆ ಈ ಗಡಿಯ ರೈತ ಹೋರಾಟಗಾರರು ಜ. 26ರ ಟ್ರ್ಯಾಕ್ಟರ್‌ ರ್ಯಾಲಿಗೆ ಸಿದ್ಧರಾಗುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...