Homeಚಳವಳಿದೆಹಲಿ ಗಡಿಗಳಲ್ಲಿ ರಾಜಸ್ಥಾನ-ಮಹಾರಾಷ್ಟ್ರ ರೈತರ ಹೋರಾಟ: ನೀವು ತಿಳಿಯಬೇಕಾದ ಅಂಶಗಳು

ದೆಹಲಿ ಗಡಿಗಳಲ್ಲಿ ರಾಜಸ್ಥಾನ-ಮಹಾರಾಷ್ಟ್ರ ರೈತರ ಹೋರಾಟ: ನೀವು ತಿಳಿಯಬೇಕಾದ ಅಂಶಗಳು

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

- Advertisement -
- Advertisement -

ಟ್ರಿಕಿ, ಸಿಂಗು, ಗಾಜಿಯಾಪುರ‌ದಂತೆಯೇ ರಾಜಸ್ಥಾನ-ಹರಿಯಾಣ ರಾಜ್ಯಗಳನ್ನು ಬೆಸೆಯುವ ಹೆದ್ದಾರಿಯಲ್ಲಿರುವ ಶಹಜಹಾನ್‌ಪುರ್‌ ಗಡಿಯಲ್ಲಿ ರೈತ ಹೋರಾಟ ನಡೆಯುತ್ತಿದೆ.

ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ ಪಂಜಾಬ್‌, ಹರಿಯಾಣದಿಂದ ದೊಡ್ಡ ಸಂಖ್ಯೆಯಲ್ಲಿ ಬಂದ ರೈತರು ಹೋರಾಟಕ್ಕೆ ಕುಳಿತಿದ್ದರೆ, ಶಹಜಹಾನ್‌ಪುರ್‌ ಗಡಿಯಲ್ಲಿ ಡಿಸೆಂಬರ್‌ 12ರಿಂದ ರಾಜಸ್ಥಾನದಿಂದ ಬಂದ ರೈತರು ಹೋರಾಟಕ್ಕೆ ಕುಳಿತಿದ್ದಾರೆ. ಈ ಹೋರಾಟದ ಮುಂದಾಳತ್ವವನ್ನು ಆಲ್‌ ಇಂಡಿಯಾ ಕಿಸಾನ್‌ ಸಭಾ ವಹಿಸಿಕೊಂಡಿದೆ.

ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಕೇರಳದಿಂದಲೂ ಸಾವಿರಾರು ಸಂಖ್ಯೆಯ ರೈತರು ಈ ಗಡಿ ಭಾಗಕ್ಕೆ ಬಂದು ಹೋರಾಟದಲ್ಲಿ ಜೊತೆಯಾಗಿದ್ದಾರೆ.

ದೆಹಲಿ ಚಲೋ ಜಾಥಾದ ಭಾಗವಾಗಿ ರಾಜಸ್ಥಾನದಿಂದ ಹೊರಟ ರೈತರನ್ನು ರಾಜಸ್ಥಾನ ಹಾಗೂ ಹರಿಯಾಣ ಪೊಲೀಸರು ಈ ಗಡಿಯಲ್ಲಿ ತಡೆದು ನಿಲ್ಲಿಸಿದ್ದು ಕಳೆದ ಆರು ವಾರಗಳಿಂದ ಹೋರಾಟ ಮುಂದುವರೆದಿದೆ.

ಕಿಸಾನ್‌ ಮಹಾ ಪಂಚಾಯತ್‌ ಸೇರಿದಂತೆ ವಿವಿಧ ರೈತ ಸಂಘಟನೆಗಳು 25 ಟ್ರ್ಯಾಕ್ಟರ್‌ಗಳೊಂದಿಗೆ ಗಡಿಯನ್ನು ತಲುಪಿದ್ದು, ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಕ್ಕೆ ಪಂಜಾಬ್‌ ರೈತರಂತೆ ಪಟ್ಟು ಹಿಡಿದಿದ್ದಾರೆ.

ಜಾಟ್‌ ಮಹಾಸಭಾ 100ಕ್ಕೂ ಹೆಚ್ಚು ವಾಹನಗಳೊಂದಿಗೆ ಈ ಹೋರಾಟದಲ್ಲಿ ಜೊತೆಯಾಗಿ ಇತ್ತೀಚೆಗೆ ಜೈಪುರ -ದೆಹಲಿ ಹೈವೇ ತಡೆಯುವ ಯತ್ನ ನಡೆಸಿ, ಸರ್ಕಾರಗಳಿಗೆ ಹೋರಾಟದ ಬಿಸಿ ಮುಟ್ಟಿಸಿತ್ತು.

ಕಿಸಾನ್‌ ಸಂಯುಕ್ತ ಮೋರ್ಚಾದ ಸಂಯೋಜಕರಾಗಿರುವ ರಾಜಕೀಯ ಚಿಂತಕ ಯೋಗೇಂದ್ರ ಯಾದವ್‌, ಪ್ರಾದೇಶಿಕ ರೈತ ಸಂಘಟನೆಗಳನ್ನು ಇಲ್ಲಿಗೆ ಕರೆತರುವ, ಹೋರಾಟದ ಬಲವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸಿದ್ದಾರೆ.

ಇದಕ್ಕಾಗಿ ಸಕ್ತಪುರಾ, ಗುಗಲ್‌ಕೋಟ, ಮಿರ್ಜಾಪುರ್‌, ಪಲವಾ, ಬಿರೋದಾ, ಫೌಲಾದ್‌ಪುರ್‌ಗಳ ರೈತರಿಂದ ಬೆಂಬಲವನ್ನು ಕೇಳಲಾಗಿದೆ.

ಕಿಸಾನ್ ಸಂಘರ್ಷ ಸಮಿತಿ, ಭೀಮಸೇನೆ, ಎಎಎಸ್‌ಪಿ, ಸಮಾಜವಾದಿ ಪಕ್ಷ, ಅಂಬೇಡ್ಕರ್‌ವಾದಿ ಪಕ್ಷ, ರಾಷ್ಟ್ರೀಯ ಲೋಕ ತಾಂತ್ರಿಕ ಪಕ್ಷ, ಸ್ವರಾಜ್‌ ಯುವ ಸಂಘಟನೆ ಈ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಮಾಜಿ ಶಾಸಕ, ಹಾಲಿ ಆಲ್‌ ಇಂಡಿಯಾ ಕಿಸಾನ್‌ ಸಭಾದ ಅಮ್ರಾ ರಾಮ್‌, ಲೋಕ ತಾಂತ್ರಿಕ ಪಕ್ಷದ ಸಂಸದ ಹನುಮಾನ್‌ ಬೆನಿವಾಲಾ ಹೋರಾಟ ನಾಯಕತ್ವ ವಹಿಸಿಕೊಂಡಿದ್ದಾರೆ. ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌, ಕಿಸಾನ್‌ ಮಹಾಪಂಚಾಯತ್‌ ರಾಷ್ಟ್ರೀಯ ಅಧ್ಯಕ್ಷ ರಾಮ್‌ಪಾಲ್‌ ಜಾಟ್‌, ಸಮಾಜಸೇವಕ ರಾಧೇಶ್ಯಾಮ್‌ ಶುಕ್ಲಾವಾಸ್‌, ಕಿಸಾನ್‌ ಯೂನಿಯನ್‌ನ ಬಲಬೀರ್‌ ಛಿಲ್ಲರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಲಿತ್‌ ಯಾದವ್‌ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಈ ಹೋರಾಟದಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ರಾಜಸ್ಥಾನ, ಹರಿಯಾಣ ಸೇರಿದಂತೆ ವಿವಿಧ ಭಾಗಗಳ ನಾಯಕರು ಇಲ್ಲಿ ನೆರೆದ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಹೊಸ ವರ್ಷದ ಮುನ್ನಾ ದಿನ ರೈತರು ಮತ್ತು ಪೊಲೀಸರೊಂದಿಗೆ ನಡೆದ ಸಂಘರ್ಷದಲ್ಲಿ ಯುವ ಹೋರಾಟಗಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕೆಡವಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಹೋರಾಟಗಾರರನ್ನು ಹಿಮ್ಮೆಟ್ಟಿಸುವುದಕ್ಕಾಗಿ ಟಿಯರ್‌ ಗ್ಯಾಸ್‌, ವಾಟರ್‌ ಕ್ಯಾನನ್‌ಗಳನ್ನು ಬಳಸಿದವು. ಗಡಿಯ ಎರಡು ಬದಿಯಲ್ಲಿ ಡ್ರೋನ್‌ಗಳ ಮೂಲಕ ಹೋರಾಟಗಾರರ ಮೇಲೆ ನಿಗಾ ಇಡಲಾಗಿದೆ.

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

ಹೀಗೇ ವಿವಿಧ ರಾಜ್ಯಗಳಿಂದ ರೈತ ಹೋರಾಟಗಾರರು ಈ ಗಡಿಯನ್ನು ತಲುಪುತ್ತಿದ್ದು, ಪ್ರತಿಭಟನೆಗೆ ದಿನದಿನಕ್ಕೂ ಹೊಸ ಹುರುಪು, ಹೊಸ ಶಕ್ತಿಯನ್ನು ಪಡೆದುಕೊಳ್ಳುತ್ತಿದೆ. ಶುಕ್ರವಾರ 8ನೇ ಸುತ್ತಿನ ಮಾತುಕತೆಯೂ ವಿಫಲವಾದ ನಂತರ ರೈತರು ಟಿಕ್ರಿ-ಸಿಂಘು ರೈತರಂತೆ ಈ ಗಡಿಯ ರೈತ ಹೋರಾಟಗಾರರು ಜ. 26ರ ಟ್ರ್ಯಾಕ್ಟರ್‌ ರ್ಯಾಲಿಗೆ ಸಿದ್ಧರಾಗುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...