Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...