Homeಮುಖಪುಟ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

ಹಿಂದೆಯೂ ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ಕಾನೂನಿನಿಂದ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ನೆರವಿಗೆ ಈ ಕೋರ್ಟ್ ಮುಂದಾಗಿತ್ತು

- Advertisement -
- Advertisement -

ಹಲವಾರು ಸಂದರ್ಭಗಳಲ್ಲಿ ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಂತರ್‌ಜಾತಿ ಮತ್ತು ಅಂತರ್ ಧರ್ಮೀಯ ಮದುವೆಗಳನ್ನು ಎತ್ತಿ ಹಿಡಿದು ದಂಪತಿಗಳಿಗೆ ರಕ್ಷಣೆ ನೀಡಿದೆ. ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.

ಇದೇನೂ ಮೊದಲ ಸಲವಲ್ಲ, ಹಲವಾರು ಸಲ ಅಂತರ್‌ಧರ್ಮೀಯ ದಂಪತಿಗಳ ಪರ ಅಲಹಾಬಾದ್ ಹೈಕೋರ್ಟ್ ನಿಂತಿದೆ. ಮತಾಂತರ ವಿರೋಧಿ ಕಾನೂನು ಸೃಷ್ಟಿಸುತ್ತಿರುವ ಗೊಂದಲ-ಕಿರಿಕಿರಿಯ ಪ್ರಕರಣಗಳಲ್ಲಿ ಈ ಕೋರ್ಟ್ ಅಂತರ್‌ಧರ್ಮೀಯ ಮದುವೆಗಳ ಪರ ನಿಂತಿದೆ.

ಬುಧವಾರ ಕೂಡ, ಹೊಸ ಕಾನೂನಿನಿಂದ ಅನಗತ್ಯ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ಪರ ನಿಂತ ಹೈಕೋರ್ಟ್, ‘ಇವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ, ಅಧಿಕಾರ ಯಾರಿಗೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಮುಸ್ಲಿಂ ಪುರುಷ ಮತ್ತು ಅವರ ಹಿಂದೂ ಪತ್ನಿ (ನಂತರದಲ್ಲಿ ಇವರು ಸ್ವ ಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿದ್ದಾರೆ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ನೇತೃತ್ವದ ಹೈಕೋರ್ಟ್ ಪೀಠ ಈ ಕೆಳಗಿನಂತೆ ಅಭಿಪ್ರಾಯಪಟ್ಟಿದೆ.

‘ಮೆಜಾರಿಟಿ ವಯಸ್ಸು ತಲುಪಿದ ಇಬ್ಬರು ವ್ಯಕ್ತಿಗಳು ಜೊತೆಯಾಗಿ ಬದುಕುತ್ತಿದ್ದರೆ, ಅವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ/ಅಧಿಕಾರ ಯಾರಿಗೂ ಇಲ್ಲ ಎಂದು ಈ ಕೋರ್ಟ್ ಮತ್ತೆ ಮತ್ತೆ ಸ್ಪಷ್ಟಪಡಿಸಿದೆ…’

ತಾವು ವಯಸ್ಕರಾಗಿದ್ದೇವೆ (ಮೆಜಾರಿಟಿ ವಯಸ್ಸಿನವರು) ಎಂದು ಹೇಳಿದ್ದ ದಂಪತಿ ತಾವು, 1997 ಮತ್ತು 1998ರಲ್ಲಿ ಜನಿಸಿರುವ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಿದ್ದರು.

‘ಅಗತ್ಯ ಬಿದ್ದರೆ ಈ ದಂಪತಿಗೆ ಸೂಕ್ತ ರಕ್ಷಣೆ ನೀಡಿ’ ಎಂದು ಬಿಜ್ನೋರ್ ಎಸ್‌ಪಿಗೆ ಸೂಚಿಸಿದ ನ್ಯಾ. ಶ್ರೀವಾಸ್ತವ್, ಫೆಬ್ರುವರಿ 8ಕ್ಕೆ ವಿಚಾರಣೆ ಮುಂದೂಡಿದರು ಎಂದು ಲೈವ್ ಲಾ ವರದಿ ಮಾಡಿದೆ. ‘ಪತ್ನಿ ಹೆಸರಲ್ಲಿ 3 ಲಕ್ಷ ರೂ. ಡಿಪಾಸಿಟ್ ಮಾಡಲು ಕೋರ್ಟ್ ಪತಿಗೆ ಸೂಚಿಸಿದ್ದು, ಇದು ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿಲ್ಲ.

ಈ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸುಪ್ರಿಂಕೋರ್ಟ್‌ನ ಎರಡು ತೀರ್ಪುಗಳನ್ನು ಉಲ್ಲೇಖಿಸಿದೆ. ಅಂತರ್‌ಧರ್ಮೀಯ ಮದುವೆ ವಿರೋಧಿಸಿ ಮಹಿಳೆಯ ಪಾಲಕರು ಸಲ್ಲಿಸಿದ ಅರ್ಜಿ ಪ್ರಕರಣದ ತೀರ್ಪು(2006) ಮತ್ತು ಸಂಬಂಧವೊಂದಕ್ಕಾಗಿ ಮಹಿಳೆಯನ್ನು ಆ ಕುಟುಂಬದವರೇ ಕೊಂದ ಪ್ರಕರಣದ ತೀರ್ಪು (2008)ಗಳನ್ನು ಕೋರ್ಟ್ ಉಲ್ಲೇಖಿಸಿದೆ.

2006ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ನ್ಯಾ. ಮಾರ್ಖಂಡೇಯ ಖಟ್ಜು ತೀರ್ಪಿನಲ್ಲಿ ಉಲ್ಲೇಖಿಸಿದ ಸಾಲುಗಳನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ: ‘ಇದು ಮುಕ್ತ ಮತ್ತು ಪ್ರಜಾಪ್ರಭುತ್ವ ದೇಶವಾಗಿದ್ದು, ಮೇಜರ್ ವಯಸ್ಸು ತಲುಪಿದ ಯಾರೇ ಆಗಲಿ ತಮಗೆ ಇಷ್ಟವಾದವರನ್ನು ಮದುವೆ ಆಗಬಹುದು. ಹುಡುಗ ಅಥವಾ ಹುಡುಗಿಯ ಪೋಷಕರಿಗೆ ಇಂತಹ ಅಂತರ್‌ಜಾತಿ ಅಥವಾ ಅಂತರ್‌ಧರ್ಮೀಯ ಮದುವೆ ಇಷ್ಟವಾಗದಿದ್ದಲ್ಲಿ, ಅವರು ಹೆಚ್ಚೆಂದರೆ ಆ ದಂಪತಿಯ ಜೊತೆ ಸಾಮಾಜಿಕ ಸಂಪರ್ಕ ಕಡಿದುಕೊಳ್ಳಬಹುದು, ಆದರೆ ಆ ದಂಪತಿಗೆ ಬೆದರಿಕೆ ಹಾಕುವುದನ್ನಾಗಲಿ, ಅವರಿಗೆ ಹಿಂಸಿಸುವುದನ್ನಾಗಲಿ, ಹಿಂಸೆಗೆ ಪ್ರಚೋದನೆ ಮಾಡುವುದನ್ನಾಗಲಿ ಮಾಡುವಂತಿಲ್ಲ….’

ಒತ್ತಾಯದ ಮತಾಂತರ ತಡೆಗೆ ಇತ್ತೀಚೆಗೆ ಉತ್ತರಪ್ರದೇಶ ಸರ್ಕಾರ ಜಾರಿಗೆ ತಂದ ಕಾಯ್ದೆಯ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಈ ಅಭಿಪ್ರಾಯ ಮಹತ್ವದ್ದಾಗಿದೆ. ವಾಸ್ತವದಲ್ಲಿ ಈ ಕಾಯ್ದೆ ಸಂಘ ಪರಿವಾರದ ‘ಲವ್ ಜಿಹಾದ್’ ಕತೆಗೆ ಕಾನೂನಾತ್ಮಕ ಬೆಂಬಲ ಕೊಡಲು ಜಾರಿಗೆ ಬಂದಿದೆ. ‘ಮದುವೆ ಮೂಲಕ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಾರೆ’ ಎಂಬ ಕಪೋಕಲ್ಪಿತ ಸಂಚನ್ನು ಲವ್ ಜಿಹಾದ್ ಸೂಚಿಸುತ್ತದೆ.

ಕಾಯ್ದೆ ಅಂಗೀಕಾರದ ನಂತರ ಹಲವಾರು ಎಫ್‌ಐಆರ್ ದಾಖಲಾಗಿವೆ ಮತ್ತು ಹಲವಾರು ಸಂಶಯಾಸ್ಪದ ಬಂಧನಗಳು ನಡೆದಿವೆ. 2020ರ ನವೆಂಬರ್ ಒಂದರಲ್ಲೇ ಅಲಹಾಬಾದ್ ಹೈಕೋರ್ಟ್, 125 ಅಂತರ್‌ಧರ್ಮಿಯ ದಂಪತಿಗಳಿಗೆ ರಕ್ಷಣೆ ನೀಡಲು ಆದೇಶಿಸಿದೆ. ಆ ತಿಂಗಳಲ್ಲೇ ಏಕ ನ್ಯಾಯಾಧೀಶರ ಪೀಠವೊಂದು, ‘ಅಂತರ್‌ಧರ್ಮೀಯ ಮದುವೆಗಳು ಮತಾಂತರದ ಉದ್ದೇಶಕ್ಕೇ ನಡೆಯುತ್ತವೆ’ ಎಂದು ಪ್ರಕಟಿಸಿದ ನಿರ್ಧಾರವನ್ನು ಖಂಡಿಸಿದ್ದ ಹೈಕೋರ್ಟ್, ಇದು ಅಸಮ್ಮತ ನಿರ್ಧಾರವಾಗಿದ್ದು, ಈ ನಿರ್ಧಾರ ‘bad in law’ ಎಂದು ಟೀಕಿಸಿತ್ತು.

ಡಿಸೆಂಬರ್‌ನಲ್ಲಿ ಇದೇ ಅಲಹಾಬಾದ್ ಹೈಕೋರ್ಟ್, 21 ವರ್ಷದ ಹಿಂದೂ ಯುವತಿ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗಲು ನೆರವು ನೀಡಿತ್ತು. ‘ಒಬ್ಬ ವಯಸ್ಕ ಮಹಿಳೆ ತನ್ನಿಷ್ಟದಂತೆ ಬದುಕುವ ಆಯ್ಕೆ ಹೊಂದಿದ್ದಾಳೆ. ಆಕೆ ಮೂರನೇ ವ್ಯಕ್ತಿಯ ಅಡೆತಡೆಗಳನ್ನು ಧಿಕ್ಕರಿಸಿ, ತನ್ನ ಆಯ್ಕೆಯಂತೆ ಮುಕ್ತವಾಗಿ ಮುನ್ನಡೆಯುವ ಸ್ವಾತಂತ್ರ್ಯ ಹೊಂದಿದ್ದಾಳೆ’ ಎಂದು ಪೀಠ ಅಭಿಪ್ರಾಯ ಪಟ್ಟಿತ್ತು.

ಡಿಸೆಂಬರ್ 7ರಂದು ಚೀಫ್ ಮ್ಯಾಜಿಸ್ಟ್ರೇಟ್ ಪೀಠವು ಶಿಖಾ ಅವರನ್ನು ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿಟ್ಟು, ಆಕೆ ತನ್ನ ಪೋಷಕರ ಮನೆಯಲ್ಲಿ ವಾಸಿಸಲು ವ್ಯವಸ್ಥೆ ಮಾಡಲು ಸೂಚಿಸಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗುವಂತೆ ಮಾಡಿತ್ತು.

ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...