Homeಮುಖಪುಟದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ದೇಶದ ಅನ್ನದಾತ ರೈತರು ರಸ್ತೆಯಲ್ಲಿ.. ದೇಶದ ಪ್ರಧಾನಿ ಮೋದಿ ಅದಾನಿ-ಅಂಬಾನಿ ಮನೆ ಬಾಗಿಲಿನಲ್ಲಿ..." ಎಂದು ವೀರ ಕನ್ನಡಿಗ ಎಂಬುವವರು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

“ರಸ್ತೆಯಲ್ಲಿ ರೈತ, ಇಟಲಿಯಲ್ಲಿ ರಾಹುಲ್” ಎಂಬ ಶೀರ್ಷಿಕೆಯಲ್ಲಿ ಕನ್ನಡದ ಸುವರ್ಣ ಟಿವಿಯಲ್ಲಿ ಕಾರ್ಯಕ್ರಮ ಪ್ರಸಾರ ಮಾಡಿದ ಅಜಿತ್ ಹನುಮಕ್ಕನವರ್ ಮತ್ತು ಕನ್ನಡಪ್ರಭ ಪತ್ರಿಕೆಯಲ್ಲಿ ಲೇಖನ ಬರೆದ ಪ್ರಶಾಂತ್ ನಾತು ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ದೇಶದ್ರ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ? ನೇರವಾಗಿ ಮೋದಿಯನ್ನು ಪ್ರಶ್ನಿಸಲಾಗದೆ ವಿರೋಧಪಕ್ಷಗಳನ್ನು ಗುರುಮಾಡುವ ಗೋದಿ ಮೀಡಿಯಾ ನೀವು ಎಂಬ ಟೀಕೆ ಕೇಳಿಬಂದಿದೆ.

ರೈತರು ಜಿಯೋ ಸಿಮ್ ತಿರಸ್ಕರಿಸಲು ಕರೆ ನೀಡಿದಾಗ, ದೆಹಲಿಯಲ್ಲಿ ರೈತರ ಹೋರಾಟ ಆರಂಭವಾದಾಗಿನಿಂದಲೂ ಈ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ರೈತರ ವಿರುದ್ಧವೇ ಲೇಖನಗಳು ಬರೆಸುತ್ತಿವೆ. ಆದರೆ ಈಗ ಕೃಷಿ ಕಾಯ್ದೆಗಳನ್ನು ತಂದಿರುವುದು ನರೇಂದ್ರ ಮೋದಿ, ರೈತರು ಹೋರಾಡುತ್ತಿರುವುದು ಮೋದಿ ಸರ್ಕಾರದ ವಿರುದ್ಧ. ಹೀಗಿರುವಾಗ ಮೋದಿಯನ್ನು ಗುರಿಮಾಡಲು ಧೈರ್ಯವಿಲ್ಲದ ಈ ಪತ್ರಿಕೆಗಳು ರಾಹುಲ್‌ ಗಾಂಧಿಯನ್ನು ಗುರಿಮಾಡಿರುವುದು ಜಾಲತಾಣಿಗರ ಆಕ್ರೋಶವನ್ನು ಹೆಚ್ಚು ಮಾಡಿದೆ.

“ಇದನ್ನು ಅವರು ಸುಮ್ಮನೆ ಮಾಡ್ತಿಲ್ಲಾ ಪೊಲಿಟಿಕಲ್ ಹಿಕ್ ಮತ್ ಇಟ್ಕೊಂಡೆ ಮಾಡುವುದು. ಅಧಿಕಾರದಲ್ಲಿರುವವರನ್ನು ಕೇಳದೆ, ಅಧಿಕಾರದಲ್ಲಿರದ ರಾಹುಲ್ ನನ್ನು ಕೇಳುವುದು. ವಿರೋಧ ಪಕ್ಷಗಳ ಬಗ್ಗೆ ಅಪಪ್ರಚಾರ ಮಾಡುವುದು, ರಾಜಕೀಯ ವರ್ಚಸ್ಸು ಬೆಳೆಯದಂತೆ ಮಾಡುವುದು. ಬಿಜೆಪಿಯ ದೊಂಬಿ, ಅವೈಜ್ಞಾನಿಕ ಆಡಳಿತ ಪ್ರಜೆಗಳಿಗೆ ಗೊತ್ತಾಗದಂತೆ ಮಾಡುತ್ತಾ ಇಡೀ ದೇಶವನ್ನು ಖಾಸಗಿ ವ್ಯಕ್ತಿಗಳ ಕೈಗೆ ಅಡವಿಡುವುದು! ಇದು ಪತ್ರಿಕೋದ್ಯಮವಲ್ಲ,ದೇಶದ ತಲೆ ಹೊಡೆಯುವ ಕೆಲಸ” ಎಂದು ಕಾಂತರಾಜು ಕೆ ಗೊಲ್ಲರಹಟ್ಟಿಯವರು ಕಿಡಿಕಾರಿದ್ದಾರೆ.

ಈತನಿಗೆ ನಿಜವಾಗಿಯೂ ಪತ್ರಿಕಾಧರ್ಮ, ಸಾಮಾಜಿಕ ಕಾಳಜಿ ಎಂದರೆ ಏನೆಂದು ಗೊತ್ತಿದ್ದರೆ, ವೃತ್ತಿಯ ವಿಚಾರದಲ್ಲಿ ಯಾವುದೇ ಪಂಥದ ಪಕ್ಷಪಾತಿ ಅಲ್ಲದೇ ಇರುತ್ತಿದ್ದರೆ ಈ ಅಂಕಣದ ಹೆಡ್ಡಿಂಗ್ ‘ರಸ್ತೆಯಲ್ಲಿ ರೈತ ಮನೆಯಲ್ಲಿ ಮೋದಿ’ ಹೀಗೆ ಇರಬೇಕಿತ್ತು ಎಂದು ಪತ್ರಕರ್ತೆ ಹೇಮಾವತಿ ವೆಂಕಟ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯ ರಸ್ತೆಯಲ್ಲಿ ನೂರಾರು ಕಿಲೋಮೀಟರ್ ನಡಿಗೆಯಲ್ಲಿ ಸಾಗುತ್ತಿದ್ದ ಕಾರ್ಮಿಕರನ್ನು ರಾಹುಲ್ ಗಾಂಧಿ ಮಾತನಾಡಿಸಿದರೆ ಅದು ನಾಟಕ, ಕಾರ್ಮಿಕರಿಗೆ ಊರಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿದರೆ ಗಿಮಿಕ್,
ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ಹೋದರೆ ಅದು ರಾಜಕೀಯ. ಇಟಲಿಗೆ ಹೋದರೆ ಪಲಾಯನ ಎಂದು ಬೊಬ್ಬೆ ಹೊಡೆಯುವವರು ಇದೇ ಪತ್ರಕರ್ತರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರೈತ ರಸ್ತೆಯಲ್ಲಿರುವಾಗ ವಾರಣಾಸಿಯಲ್ಲಿ ದೀಪಾವಳಿ, ಆರ್ಕೆಸ್ಟ್ರಾ, ಕುಣಿತ ಎಲ್ಲ ಬೇಕಿತ್ತಾ? ಹೊಸ ಸಂಸತ್ತಿಗೆ ಭೂಮಿ ಪೂಜೆ ಮಾಡುವ ಅರ್ಜಂಟ್ ಏನಿತ್ತು? ಈ ತುರ್ತು ಸಂದರ್ಭದಲ್ಲಿ ಚಳಿಗಾಲದ ಅಧಿವೇಶನ ರದ್ದು ಪಡಿಸಿದ್ದು ಯಾಕೆ ಎಂದು ಒಬ್ಬರಾದರೂ ಅಂಕಣ ಬರೆದ್ರಾ? ಯಾಕೆ ಬಿಜೆಪಿ ಬೆಂಬಲಿಗರಾದ ಮಾತ್ರಕ್ಕೆ ಸರ್ಕಾರದ ವಿಲಕ್ಷಣ ನಡವಳಿಕೆ ಪ್ರಶ್ನೆ ಮಾಡಬಾರದೇ? ಈ ನಾತು ಅವರಿಗೆ ಈ ಅಂಕಣ ಬರೆಯುವ ಅಗತ್ಯ ಏನಿತ್ತು? ರಾಹುಲ್ ಪ್ರಧಾನಿಯೇ, ಗೃಹಮಂತ್ರಿಯೇ, ಕೃಷಿ ಸಚಿವರೇ? ಕನಿಷ್ಠ ಕಾಮನ್ ಸೆನ್ಸ್ ಬೇಡ್ವಾ!
ಈಗ ರಾಹುಲ್ ಏನು ಮಾಡಬೇಕಿತ್ತು; ಸರ್ಕಾರ ಅಗೆಯುವ ರಸ್ತೆ ಪಕ್ಕ ಕಾವಲು‌ ಕಾಯಬೇಕಿತ್ತಾ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಗೆ ಧಿಕ್ಕಾರ
ತೊಲಗಲಿ ತೊಲಗಲಿ ರಾಹುಲ್ ಗಾಂಧಿ ತೊಲಗಲಿ
ಡೌನ್ ಡೌನ್ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಕೊಡಲಿ !! ಎಂದು ವಕೀಲರಾದ ಜಗನ್ನಾಥ್ ರಾಮಸ್ವಾಮಿಯವರು ವ್ಯಂಗ್ಯವಾಡಿದ್ದಾರೆ.

ಪ್ರತಿಭಟನಾ ನಿರತ ರೈತರನ್ನು ಖಾಲಿಸ್ತಾನಿ ಉಗ್ರರು, ಅವರನ್ನು ಬೆಂಬಲಿಸುತ್ತಿರುವವರೆಲ್ಲ ದೇಶದ್ರೋಹಿ ಅರ್ಬನ್ ನಕ್ಸಲ್‌ಗಳು ಎಂದೆಲ್ಲ ಸಂಭೋದಿಸಿದ್ದು ಇದೆ ಸುವರ್ಣ ಚಾನಲ್‌ನ ಅಜಿತ್ ಹನುಮಕ್ಕ ಮತ್ತು ಪ್ರಶಾಂತ್ ನಾತು ಅಲ್ಲವೇ? ಕ್ರಿಮಿ ಕೀಟಗಳಂತೆಯೂ ಕಾಲ ಕಸದಂತೆ ಅನ್ನದಾತನ ಚಳುವಳಿಯನ್ನು ಹೀಯಾಳಿಸಿದ ಇವರ ಕಣ್ಣಿಗೆ ಇಂದು ದೆಹಲಿ ಪ್ರತಿಭಟನಾ ನಿರತರು ನೈಜ ರೈತರಾಗಿ ಕಾಣಿಸಿತ್ತಿರುವುದು ಪರಮಾಶ್ಚರ್ಯ! ಎಂದು ದೀಪಕ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

“ದೇಶದ ಅನ್ನದಾತ ರೈತರು ರಸ್ತೆಯಲ್ಲಿ.. ದೇಶದ ಪ್ರಧಾನಿ ಮೋದಿ ಅದಾನಿ-ಅಂಬಾನಿ ಮನೆ ಬಾಗಿಲಿನಲ್ಲಿ…” ಎಂದು ಕನ್ನಡಿಗ ವೀರ ಕನ್ನಡಿಗ ಎಂಬುವವರು ವ್ಯಂಗ್ಯವಾಡಿದ್ದಾರೆ.

ರೈತರು ರಸ್ತೆಗಿಳಿಯುವಂತೆ ಮಾಡಿದ್ದು ಯಾರು? ಪ್ರಧಾನಿ ಮೋದಿಯವರು. ರೈತ ವಿರೋಧಿ ಕೃಷಿ ಕಾಯ್ದೆ ತರುತ್ತಿರುವವರು ಯಾರು ? ಪ್ರಧಾನಿ ಮೋದಿಯವರು….. ಚಳಿ,ಮಳೆ,ಗಾಳಿಯನ್ನದೆ ರಸ್ತೆಯಲ್ಲಿ ಕುಳಿತು ಪ್ರತಿಭಟಿಸುತ್ತಿರುವ ರೈತರ ಜೊತೆ ಮಾತಾಡಲು ಅಂಜುವ ನರೇಂದ್ರ ಮೋದಿಯವರು ಪ್ರಧಾನಿ ನಿವಾಸದಲ್ಲಿ ಬೆಚ್ಚಗಿದ್ದಾರೆ!! ಈ ಮಾಧ್ಯಮಗಳು ಮತ್ತು ಪತ್ರಕರ್ತರು ಪ್ರಶ್ನಿಸಬೇಕಾಗಿರುವುದು ಯಾರನ್ನು? ಪ್ರಧಾನಿ ಮೋದಿಯವರನ್ನು….ಆದರೆ…..? ನಾತ ಮತ್ತು ಅಜಿತ್ ನ ಅವತಾರಗಳ ನೋಡಿದ್ಮೇಲೆ ಅರ್ಥವಾಯ್ತು….ಗುಲಾಮಿ ಸಂತತಿ ಇನ್ನೂ ಜೀವಂತವಾಗಿದೆ ಅಂತ!! ಎಂದು ಓದು ಸಿದ್ದೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರು ಜಿಯೋ ಸಿಮ್ ತಿರಸ್ಕರಿಸಲು ಕರೆ ಕೊಟ್ಟಾಗ ಅಜಿತ್ ಹನುಮಕ್ಕನವರ್ ಅಂಬಾನಿ ಪರ ಬ್ಯಾಟಿಂಗ್ ಮಾಡಿ ಟೀಕೆಗೊಳಗಾಗಿದ್ದರು. ಈ ಹಿಂದೆಯೂ ಸಹ ಪೆಟ್ರೋಲ್ ದರ ಹೆಚ್ಚಾದಾಗ ಮೋದಿ ಹೆಸರೆತ್ತದೆ ವರದಿ ಮಾಡಿದ್ದರು. ಅವರು ಸಂಪೂರ್ಣ ಬಿಜೆಪಿ ಪರವಾಗಿ ವರದಿ ಮಾಡುವುದರಿಂದ ರೊಚ್ಚಿಗೆದ್ದ ನೆಟ್ಟಿಗರು ಈ ಹಿಂದೆ ‘ಅಜಿತ್ ಬಿಜೆಪಿ ಏಜೆಂಟ್’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ರೆಂಡ್ ಮಾಡಿದ್ದರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...