Homeಮುಖಪುಟಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

"ಈ ಅಭಿಯಾನ ಕೇವಲ ಚುನಾವಣೆಗೆ ಸೀಮಿತವಾಗದೇ, ದೇಶದಲ್ಲಿ ನಡೆಯುತ್ತಿರವ ಇಡೀ ಫ್ಯಾಸಿಸ್ಟ್ ಧೋರಣೆಯ‌ ವಿರುದ್ಧ ಕಾರ್ಯನಿರ್ವಹಿಸುತ್ತದೆ"

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಯುಕ್ತ ವಿವಿಧ ಚಳುವಳಿಗಳ ಕಾರ್ಯಕರ್ತರು ಮತ್ತು ಜಾತ್ಯಾತೀತ ಪ್ರಗತಿಪರರು ಒಂದುಗೂಡಿ ವೇದಿಕೆಯೊಂದನ್ನು ಸಿದ್ದಪಡಿಸಿಕೊಂಡು, ರಾಜ್ಯದಲ್ಲಿ “ಬಿಜೆಪಿಗೆ ಮತ ನೀಡಬೇಡಿ” ಎನ್ನುವ ಫ್ಯಾಸಿಸ್ಟ್‌ ವಿರೋಧಿ ಅಭಿಯಾನವನ್ನು ಆರಂಭಿಸಿದ್ದಾರೆ.

ಕೊಲ್ಕೊತ್ತಾದಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ನ ಅಜೆಂಡಾವನ್ನು ಬಹಿರಂಗಪಡಿಸುವುದರೊಂದಿಗೆ, “ಜನರು ಸ್ವಹಿತಾಸಕ್ತಿಯಿಂದ ಪರಿಣಾಮಕಾರಿ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮತ್ತು ಈ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸುತ್ತಾರೆ. ಈ ಅಭಿಯಾನ ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗದೇ, ದೇಶದಲ್ಲಿ ನಡೆಯುತ್ತಿರುವ ಇಡೀ ಫ್ಯಾಸಿಸ್ಟ್ ಧೋರಣೆಯ‌ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ವೇದಿಕೆಯ ಮುಖಂಡರು ಹೇಳಿದರು ಎಂದು ಗೌರಿ ಲಂಕೇಶ್‌ ನ್ಯೂಸ್ ವೆಬ್‌ ಪೋರ್ಟಲ್‌ ವರದಿ ಮಾಡಿದೆ.

“ನರೇಂದ್ರ ಮೋದಿ-ಅಮಿತ್ ಶಾ ಆಡಳಿತದ ಕೋಮುವಾದಿ ಅಜೆಂಡಾವಾದ ಪೌರತ್ವ ಕಾಯ್ದೆಗಳಾದ ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್‌ ವಿರುದ್ಧ ಲಾಕ್‌ಡೌನ್‌ ಪೂರ್ವದಲ್ಲಿ ನಡೆದ ಆಂದೋಲನದಂತೆ ವಿಧಾನಸಭಾ ಚುನಾವಣೆಯಲ್ಲೂ ಫ್ಯಾಸಿಸ್ಟ್‌ ವಿರೋಧಿ ಆಂದೋಲನ ನಡೆಸಬೇಕು. ಇದು ತಡವಾಗಬಾರದು. ಬಿಜೆಪಿಯು ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಕೋಮು ಧೃವೀಕರಣದ ಆಧಾರದ ಮೇಲೆ ಮತವಿಭಜನೆಗೆ ಮುಂದಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ‘ನೀವು ಕಾಯ್ದೆ ವಾಪ್ಸಿ ಮಾಡಿದರೆ ಮಾತ್ರ ನಾವು ಘರ್ ವಾಪ್ಸಿ ಮಾಡುತ್ತೇವೆ’: ರೈತರ ಖಡಕ್…

ಇಂದಿನ (ಜ.9) ಪತ್ರಿಕಾಗೋಷ್ಠಿಗೆ ಮುಂಚಿತವಾಗಿ, ಜನವರಿ 4 ರಂದು, ಕೋಲ್ಕತಾ ಮತ್ತು ಪಶ್ಚಿಮ ಬಂಗಾಳದ ವಿವಿಧ ಜಿಲ್ಲೆಗಳ ಕಾರ್ಯಕರ್ತರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಮಧ್ಯ ಕೋಲ್ಕತ್ತಾದ ʼಭಾರತ್ ಸಭಾʼ ಸಭಾಂಗಣದಲ್ಲಿ ಸಾರ್ವಜನಿಕ ಸಮಾವೇಶವನ್ನು ನಡೆಸಿದ್ದರು. ಅಲ್ಲಿ ಈ ವೇದಿಕೆ ರಚನೆಯ ಕುರಿತು ವಿಷಯ ಪ್ರಸ್ತಾಪಿಸಿದ್ದರು.

ತಮ್ಮ ಈ ಅಭಿಯಾನವನ್ನು ರಾಜ್ಯದ ಉದ್ದಗಲಕ್ಕೂ ಹರಡುವ ಸಲುವಾಗಿ, ʼನೋ ವೋಟ್ ಟು ಬಿಜೆಪಿʼ ಎನ್ನುವ ಘೋಷಣೆಯೊಂದಿಗೆ ಫ್ಯಾಸಿಸ್ಟ್ ವಿರೋಧಿ ಜಾಲಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಇದರ ಭಾಗವಾಗಿ ಮಾರ್ಚ್ 10 ರಂದು ಕೋಲ್ಕತ್ತಾದಲ್ಲಿ ಬೃಹತ್ ರ್ಯಾಲಿ ನಡೆಯಲಿದೆ. ‌

ಜನವರಿ 13 ರಂದು ರೈತರಿಗೆ ಬೆಂಬಲ ಸೂಚಿಸಿ ಮತ್ತೊಂದು ಧರಣಿಯನ್ನು ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ನಮ್ಮೆಲ್ಲರ ಶತ್ರು ಒಬ್ಬನೇ ಎಂದರಿತು ಹೋರಾಡೋಣ: ಸುರೀಂದರ್‌ ಸಿಂಘ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...