Homeಮುಖಪುಟರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

- Advertisement -
- Advertisement -

ಕೃಷಿಯಲ್ಲಿ ಹೊಸ ಹೊಸ ಆಲೋಚನೆಗಳ ಮೂಲಕ ಹೊಸದನ್ನು ಸೃಷ್ಟಿಸುವ ಶಕ್ತಿಯಿರುವ ರೈತರು ತಮ್ಮ ಹಕ್ಕುಗಳಿಗಾಗಿ ಕಳೆದ 45 ದಿನಗಳಿಂದ ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ, ಮೂರು ಮಸೂದೆಗಳನ್ನು ವಾಪಸ್‌ ಪಡೆಯಬೇಕು ಎಂದು ಬಿಗಿ ಪಟ್ಟು ಹಿಡಿದು ದೆಹಲಿಯ ಗಡಿಗಳಲ್ಲಿ ಕುಳಿತಿರುವ ರೈತರು ಹೊಸ ನಗರಗಳ ಸೃಷ್ಟಿಗೆ ಕಾರಣವಾಗಿದ್ದಾರೆ.

ಸಿಂಘು, ಟಿಕ್ರಿ, ಗಾಝಿಯಾಪುರ್‌, ಶಹಜಹಾನ್‌ಪುರ್‌ ಗಡಿಗಳಲ್ಲಿ ಹೊಸ ನಗರಗಳೇ ರಚನೆಯಾಗಿದೆ. ಪಂಜಾಬ್‌,ಹರಿಯಾಣ, ರಾಜಸ್ಥಾನ, ಮನಾಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ರಾಜ್ಯಗಳನ್ನು ದೆಹಲಿಗೆ ಸೇರಿಸುವ ಹೆದ್ದಾರಿಗಳಾಗಿದ್ದ ಇವುಗಳ ಬಳಿ ಡಾಬಾಗಳು, ಪಂಕ್ಚರ್‌ ಶಾಪ್‌ಗಳು, ಚಹಾದ ಅಂಗಡಿಗಳು, ಕೆಲವು ಪಾನಿಯಗಳ ಅಂಗಡಿಗಳು ಪ್ರಮುಖವಾಗಿದ್ದವು.

ಪ್ರತಿಭಟನೆ ಆರಂಭವಾದಾಗಿನಿಂದ ಇಲ್ಲಿನ ಹೆದ್ದಾರಿಗಳ ಚಿತ್ರಣವೇ ಬದಲಾಗಿವೆ. ಹೆದ್ದಾರಿಯಾಗಿದ್ದ ಸ್ಥಳಗಳು ಈಗ ಹೊಸ ಬಗೆಯಲ್ಲಿ, ಹೊಸದಾದ ರೈತರ ನಗರಗಳಾಗಿ ಮಾರ್ಪಾಡಾಗಿವೆ. ಈ ನಗರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳು ಆರಂಭವಾಗಿವೆ. ಆಸ್ಪತ್ರೆಗಳು, ಹೋಟೆಲ್‌ಗಳು, ಗ್ರಂಥಾಲಯಗಳು, ಕಿಸಾನ್ ಮಾಲ್‌ಗಳು, ಬಟ್ಟೆ, ಚಪ್ಪಲಿ, ಮೊಬೈಲ್‌ ಅಂಗಡಿಗಳು, ತರಕಾರಿ ಅಂಗಡಿಗಳು, ಸಲೂನ್‌ಗಳು, ಟ್ಯಾಟೂ ಸ್ಟಾಲ್‌ಗಳು ತಮ್ಮ ತಮ್ಮ ಪುಟ್ಟ ಅಂಗಡಿಗಳ ಮೂಲಕ ವ್ಯಾಪಾರ ಆರಂಭಿಸಿವೆ.

ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಸಾವಿರಾರು ಸೇವಾ ಸಂಘಟನೆಗಳು ಸೇವೆ ಎಂದು ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡುತ್ತಿವೆ. ಸಿಂಘು ಗಡಿಯಲ್ಲಿರುವ ಕೆಎಫ್‌ಸಿ ಮಾಲ್‌ ಎನ್ನಲಾಗುವ ಮಳಿಗೆ ರೈತರ ಆಹಾರ ಪದಾರ್ಥಗಳ ದಾಸ್ತಾನು ಮಳಿಗೆಯಾಗಿ ಉಪಯೋಗಿಸಲಾಗುತ್ತಿದೆ. ಇದರ ನಡುವೆಯೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವ್ಯವಹಾರ ಚೆನ್ನಾಗಿಯೇ ನಡೆಯುತ್ತಿದೆ.

ಖಾಲ್ಸಾ ಏಡ್ ಸಂಘಟನೆ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಆರಂಭಿಸಿರುವ ಕಿಸಾನ್‌ ಮಾಲ್‌ ಎಲ್ಲರಿಗೂ ಉಚಿತವಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದೆ. ಇದರ ಹೊರತಾಗಿಯೂ ಹೊಸದಾಗಿ ಸ್ಥಳೀಯ ಜನ ನಿರ್ಮಿಸಿಕೊಂಡಿರುವ ಅಂಗಡಿಗಳಲ್ಲೂ ಪ್ರತಿಭಟನಾ ನಿರತ ರೈತರು ಮತ್ತು ರೈತ ಹೋರಾಟದ ಬೆಂಬಲಿಗರು ವಸ್ತಗಳನ್ನು ಖರೀದಿಸುತ್ತಿದ್ದಾರೆ.

“ರೈತರ ಪ್ರತಿಭಟನೆ ಆರಂಭವಾಗುವ ಮೊದಲು ನಮ್ಮ ಅಂಗಡಿಗಳು ಮಾತ್ರ ಇಲ್ಲಿ ಇದ್ದಿದ್ದು, ಈಗ ಅದೆಷ್ಟು ಅಂಗಡಿಗಳು, ಸಣ್ಣ ಸಣ್ಣ ತಳ್ಳುವ ಬಂಡಿಗಳ ವ್ಯಾಪಾರ ಶುರುವಾಗಿದೆ ಎಂದರೇ ನಮಗೆ ಇದು ಯಾವುದು ಹೊಸ ಜಾಗ ಎನ್ನಿಸುತ್ತಿದೆ. ಇಲ್ಲಿ ನಾವೇ ಹೊಸಬರಾ ಎನ್ನುವ ಭಾವನೆ ಬರಲು ಶುರುವಾಗಿದೆ” ಎನ್ನುತ್ತಾರೆ ಸಿಂಘು ಗಡಿಯ ಹೈವೆಯಲ್ಲಿ ಹಲವಾರು ವರ್ಷಗಳಿಂದ ದಿನಸಿ ಅಂಗಡಿ ನಡೆಸುತ್ತಿರುವ 40 ವರ್ಷ ವಯಸ್ಸಿನ ದಿನಸಿ ವ್ಯಾಪಾರಸ್ತ.

ದೆಹಲಿಗೆ ಭೇಟಿ ನೀಡಿ ಪ್ರತಿಭಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ನಮ್ಮ ತಂಡಕ್ಕೆ ಅನ್ನಿಸಿದ ಹಾಗೆ, ಪ್ರತಿಭಟನಾ ನಿರತ ರೈತರಿಗೆ ನಿಜಕ್ಕೂ ಯಾವುದೇ ಹೊಸ ವಸ್ತುಗಳ ಅಗತ್ಯ ಖಂಡಿತ ಇಲ್ಲ. ಇಲ್ಲಿರುವ ವ್ಯವಸ್ಥೆ ಗಮನಿಸಿದರೇ ಅದೇ ಒಂದೆರಡು ವರ್ಷಗಳವರೆಗೆ ಅವರಿಗೆ ಸಾಕಾಗಬಹುದು. ಪ್ರತಿಭಟನೆಗೆ ಬೆಂಬಲಿಸಿ ಬರುವವರಿಗೆ ರೈತ ಹೋರಾಟಗಾರರೇ ಎಲ್ಲಾ ಸೌಲಭ್ಯಗಳನ್ನು ಒದಗಿಸಬಲ್ಲವರಾಗಿದ್ದಾರೆ.

ಹೊಸ ನಗರದ ಸೃಷ್ಟಿಗೆ ಕಾರಣವಾಗಿರುವ  ರೈತ ಪ್ರತಿಭಟನೆ. ತಮ್ಮ ದಿಗ್ವಿಜಯದ ನಂತರ ತಾವು ನಿರ್ಮಿಸಿರುವ ಶೌಚಾಲಯಗಳು, ಇಲ್ಲಿಗೆ ತಂದಿರುವ ಗೀಸರ್‌ಗಳು, ವಿದ್ಯುತ್‌ ದ್ವೀಪಗಳು ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಇಲ್ಲಿಯೇ ಬಿಟ್ಟು ಹೋಗುತ್ತೇವೆ ನಮ್ಮ ಸಹೋದರ ರಾಜ್ಯಗಳಿಗೆ ಇದು ನಮ್ಮ ಕಾಣಿಕೆ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. SATYA MEVA JAYATHE, MOSA SARVNAASHA,,
    EDBHAVAM TADBHAVATHI…
    THAAYI BHARATHA MAATHEGE, YAARU SARIYADA SEVAKA ENDU AVALA AAYKE,,,
    SARVEJANO SUKINOBAVANTHU MANGALAVAAGALI SARVARIGE …
    NK AACHARYA VI

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....