Homeಅಂತರಾಷ್ಟ್ರೀಯಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್ ಎರಡನೇ ದೋಷಾರೋಪಣೆ (Impeachment) ಎದುರಿಸಬೇಕಾಗಬಹುದು ಎನ್ನಲಾಗಿದೆ. ಇದರ ಸ್ವರೂಪ ಹೇಗಿರಲಿದೆ?

- Advertisement -
- Advertisement -

ಕಾಂಗ್ರೆಸ್‌ನಲ್ಲಿನ ಡೆಮೋಕ್ರಾಟ್‌ಗಳು ಸೋಮವಾರ ಟ್ರಂಪ್ ಅವರ ದುರ್ನಡತೆ ಆರೋಪಗಳನ್ನು ಪ್ರಸ್ತಾಪಿಸಲು ಯೋಜಿಸಿದ್ದಾರೆ. ಇದು ಟ್ರಂಪ್ ಎರಡನೆ ಬಾರಿಗೆ ದೋಷಾರೋಪಣೆ ಎದುರಿಸುವ ಸಾಧ್ಯತೆಯನ್ನು ಸೂಚಿಸುತ್ತಿದೆ. ಟ್ರಂಪ್ ಅವರ ಚುನಾವಣಾ ವಂಚನೆಯ ಸುಳ್ಳು ಹೇಳಿಕೆಗಳು ಮತ್ತು ಕಾಂಗ್ರೆಸ್ ಮೇಲೆ (ಕ್ಯಾಪಿಟಲ್ ಮೇಲೆ) ದಾಳಿ ನಡೆಸಲು ಬೆಂಬಲಿಗರಿಗೆ ಪ್ರಚೋದನೆ ನೀಡಿದರು ಎಂಬ ಅಂಶಗಳ ಆಧಾರದಲ್ಲಿ ಈ ದೋಷಾರೋಪಣೆ ನಡೆಯಬಹುದು ಎನ್ನಲಾಗಿದೆ.

ದೋಷಾರೋಪಣೆ (Impeachment) ಹೇಗಿರುತ್ತದೆ?

ಇಂಪೀಚ್‌ಮೆಂಟ್ ಬಗ್ಗೆ ಇರುವ ಒಂದು ತಪ್ಪು ತಿಳುವಳಿಕೆ ಎಂದರೆ, ಅದು ಅಧ್ಯಕ್ಷ ಪದವಿಯಿಂದ ಕಿತ್ತು ಹಾಕುತ್ತದೆ ಎಂಬುದು. ಆದರೆ ಇದು ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್ ಅಂದರೆ ಕಾಂಗ್ರೆಸ್‌ನ ಕೆಳಮನೆಯು, ಗುರುತರ ಅಪರಾಧ ಅಥವಾ ದುಷ್ಕೃತ್ಯದ ಅಪಾದನೆಗಳನ್ನು ಮಾಡುವ ಪ್ರಕ್ರಿಯೆ. ಒಂಥರಾ ಕ್ರಿಮಿನಲ್ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದಂತೆ.

435 ಸದಸ್ಯರ ಕೆಳಮನೆಯು ಸರಳ ಬಹುಮತದಲ್ಲಿ ಅಪಾದನೆಗಳನ್ನು ಪ್ರಸ್ತಾಪಿಸಲು ಯಶಸ್ವಿಯಾದರೆ, ಇದು ಸೆನೆಟ್ (ಮೇಲ್ಮನೆ)ಗೆ ವರ್ಗಾಯಿಸಲ್ಪಡುತ್ತದೆ. ಸೆನೆಟ್ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ.

ಅಮೆರಿಕದ ಸಂವಿಧಾನದ ಪ್ರಕಾರ, ಅಧ್ಯಕ್ಷನನ್ನು ಶಿಕ್ಷೆಗೆ ಒಳಪಡಿಸಲು ಮತ್ತು ಹುದ್ದೆಯಿಂದ ತೆಗೆಯಲು ಸೆನೆಟ್‌ನ 2/3 (ಮೂರನೇ ಎರಡು ಭಾಗ) ಬಹುಮತ ಅಗತ್ಯ.

ಆದರೆ ಹಳೆಯ ಎರಡು ಐತಿಹಾಸಿಕ ಪ್ರಕರಣಗಳನ್ನು ಗಮನಿಸಿದರೆ, ಟ್ರಂಪ್ ಪದಚ್ಯುತಿಗೆ ಸೆನೆಟ್‌ನಲ್ಲಿ ಸರಳ ಬಹುಮತವು ಸಾಕು ಎನಿಸುತ್ತದೆ, ಇದು ಭವಿಷ್ಯದಲ್ಲಿ ಟ್ರಂಪ್ ಆ ಹುದ್ದೆ ಏರುವುದನ್ನೂ ತಡೆಗಟ್ಟಬಹುದು.

ಈ ಜನವರಿಯಲ್ಲಿ ಸೆನೆಟ್ ಮೇಲೆ ನಿಯಂತ್ರಣ ಹೊಂದಲಿರುವ ಡೆಮಾಕ್ರಟ್ಸ್, 2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸಿದಂತೆ ನಿರ್ಣಯಿಸುವ ಅವಕಾಶವನ್ನೂ ಪಡೆಯಲಿದ್ದಾರೆ.

ಆದರೆ ಇಲ್ಲಿ ಒಂದು ತೊಡಕಿದೆ. ಚುನಾವಣೆಯ ಸ್ಪರ್ಧೆಯಿಂದ ಅನರ್ಹತೆಗೊಳಿಸುವ ಮತದಾನಕ್ಕೂ ಮೊದಲು, ಶಿಕ್ಷಿಸಬೇಕು ಮತ್ತು ಪದವಿಯಿಂದ ಪದಚ್ಯುತಿಗೊಳಿಸಬೇಕೇ ಎಂಬ ವಿಷಯದ ಮೇಲೆ ಮತದಾನ ನಡೆಯಲಿದೆ. ಮೊದಲನೆಯದು ಯಶಸ್ವಿಯಾದರಷ್ಟೇ ಎರಡನೆ ಪ್ರಕ್ರಿಯೆ ನಡೆಯಲಿದೆ.

ಯುನಿವರ್ಸಿಟಿ ಆಫ್ ಕ್ಯಾಲಿರೋಡಾದ ಕಾನೂನು ಪ್ರೊಫೆಸರ್ ಪೌಲ್ ಕ್ಯಾಂಪೋಸ್, ‘ಸೆನೆಟ್‌ಗೆ ಭವಿಷ್ಯದ ಚುನಾವಣೆಯಲ್ಲಿ ಸ್ಪರ್ಧಿಸಲಾರದಂತೆ ಅನರ್ಹಗೊಳಿಸುವ ವೋಟಿಂಗ್ ಅಧಿಕಾರ ಮಾತ್ರವಿದೆ. ಜನೆವರಿ 20ರಂದು ಟ್ರಂಪ್ ನಿರ್ಗಮಿಸಲಿರುವ ದಿನದವರೆಗೂ ಇಂಪೀಚ್‌ಮೆಂಟ್ ವಿಚಾರಣೆ ಚಾಲ್ತಿಯಲ್ಲಿದ್ದರೆ ಈ ವಿದ್ಯಮಾನ ಸಂಭವಿಸಬಹುದು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿರ್ಗಮನದ ನಂತರ ಇಂಪ್ರೀಚ್‌ಮೆಂಟ್ ಸಾಧ್ಯವೇ?

ಈ ಕುರಿತು ಯಾವ ನ್ಯಾಯಾಲಯವೂ ಸ್ಪಷ್ಟವಾಗಿ ತಿಳಿಸಿಲ್ಲವಾದರೂ, ತಜ್ಞರ ಪ್ರಕಾರ, ಟ್ರಂಪ್ ನಿರ್ಗಮನದ ನಂತರವೂ ಭವಿಷ್ಯದಲ್ಲಿ ಈ ಹುದ್ದೆಗೇರದಂತೆ ಅನರ್ಹಗೊಳಿಸುವ ವಿಷಯ ಜೀವಂತವಿರುತ್ತದೆ.

ಎರಡು ಸಲ ದೋಷಾರೋಪಣೆ

ಈ ಹಿಂದಿನ ಯಾವುದಾದರೂ ಅಮೆರಿಕ ಅಧ್ಯಕ್ಷ ಎರಡು ಬಾರಿ ಇಂಪೀಚ್‌ಮೆಂಟ್ ಎದುರಿಸಿದ್ದಾರೆಯೇ? ಇಲ್ಲಿವರೆಗೆ ಇದು ಸಂಭವಿಸಿಲ್ಲ. ಈ ಕುರಿತು ಕಾಂಗ್ರೆಸ್ ಅಷ್ಟೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯ.
2019ರಲ್ಲಿ ಟ್ರಂಪ್ ವಿರುದ್ಧ ಅಧಿಕಾರ ದುರ್ಬಳಕೆಯ ಕಾರಣದಲ್ಲಿ ಇಂಪೀಚ್‌ಮೆಂಟ್ ಮಾಡಲಾಗಿತ್ತು. ಆದರೆ ಮುಂದೆ ಫೆಬ್ರುವರಿ 2020ರಲ್ಲಿ ರಿಪಬ್ಲಿಕನ್‌ಗಳೇ ಹೆಚ್ಚಿದ್ದ ಸೆನೆಟ್ ಅವರನ್ನು ಆರೋಪಮುಕ್ತ ಮಾಡಿತ್ತು.
ಟ್ರಂಪ್ ಇಂಪೀಚ್‌ಮೆಂಟ್‌ಗೆ ಜೋ ಬೈಡೆನ್ ಅಷ್ಟಾಗಿ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಆದರೆ ಸೋಮವಾರ ಕಾಂಗ್ರೆಸ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಷ್ಟೇ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...