Homeಅಂತರಾಷ್ಟ್ರೀಯಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್ ಎರಡನೇ ದೋಷಾರೋಪಣೆ (Impeachment) ಎದುರಿಸಬೇಕಾಗಬಹುದು ಎನ್ನಲಾಗಿದೆ. ಇದರ ಸ್ವರೂಪ ಹೇಗಿರಲಿದೆ?

- Advertisement -
- Advertisement -

ಕಾಂಗ್ರೆಸ್‌ನಲ್ಲಿನ ಡೆಮೋಕ್ರಾಟ್‌ಗಳು ಸೋಮವಾರ ಟ್ರಂಪ್ ಅವರ ದುರ್ನಡತೆ ಆರೋಪಗಳನ್ನು ಪ್ರಸ್ತಾಪಿಸಲು ಯೋಜಿಸಿದ್ದಾರೆ. ಇದು ಟ್ರಂಪ್ ಎರಡನೆ ಬಾರಿಗೆ ದೋಷಾರೋಪಣೆ ಎದುರಿಸುವ ಸಾಧ್ಯತೆಯನ್ನು ಸೂಚಿಸುತ್ತಿದೆ. ಟ್ರಂಪ್ ಅವರ ಚುನಾವಣಾ ವಂಚನೆಯ ಸುಳ್ಳು ಹೇಳಿಕೆಗಳು ಮತ್ತು ಕಾಂಗ್ರೆಸ್ ಮೇಲೆ (ಕ್ಯಾಪಿಟಲ್ ಮೇಲೆ) ದಾಳಿ ನಡೆಸಲು ಬೆಂಬಲಿಗರಿಗೆ ಪ್ರಚೋದನೆ ನೀಡಿದರು ಎಂಬ ಅಂಶಗಳ ಆಧಾರದಲ್ಲಿ ಈ ದೋಷಾರೋಪಣೆ ನಡೆಯಬಹುದು ಎನ್ನಲಾಗಿದೆ.

ದೋಷಾರೋಪಣೆ (Impeachment) ಹೇಗಿರುತ್ತದೆ?

ಇಂಪೀಚ್‌ಮೆಂಟ್ ಬಗ್ಗೆ ಇರುವ ಒಂದು ತಪ್ಪು ತಿಳುವಳಿಕೆ ಎಂದರೆ, ಅದು ಅಧ್ಯಕ್ಷ ಪದವಿಯಿಂದ ಕಿತ್ತು ಹಾಕುತ್ತದೆ ಎಂಬುದು. ಆದರೆ ಇದು ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್ ಅಂದರೆ ಕಾಂಗ್ರೆಸ್‌ನ ಕೆಳಮನೆಯು, ಗುರುತರ ಅಪರಾಧ ಅಥವಾ ದುಷ್ಕೃತ್ಯದ ಅಪಾದನೆಗಳನ್ನು ಮಾಡುವ ಪ್ರಕ್ರಿಯೆ. ಒಂಥರಾ ಕ್ರಿಮಿನಲ್ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದಂತೆ.

435 ಸದಸ್ಯರ ಕೆಳಮನೆಯು ಸರಳ ಬಹುಮತದಲ್ಲಿ ಅಪಾದನೆಗಳನ್ನು ಪ್ರಸ್ತಾಪಿಸಲು ಯಶಸ್ವಿಯಾದರೆ, ಇದು ಸೆನೆಟ್ (ಮೇಲ್ಮನೆ)ಗೆ ವರ್ಗಾಯಿಸಲ್ಪಡುತ್ತದೆ. ಸೆನೆಟ್ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ.

ಅಮೆರಿಕದ ಸಂವಿಧಾನದ ಪ್ರಕಾರ, ಅಧ್ಯಕ್ಷನನ್ನು ಶಿಕ್ಷೆಗೆ ಒಳಪಡಿಸಲು ಮತ್ತು ಹುದ್ದೆಯಿಂದ ತೆಗೆಯಲು ಸೆನೆಟ್‌ನ 2/3 (ಮೂರನೇ ಎರಡು ಭಾಗ) ಬಹುಮತ ಅಗತ್ಯ.

ಆದರೆ ಹಳೆಯ ಎರಡು ಐತಿಹಾಸಿಕ ಪ್ರಕರಣಗಳನ್ನು ಗಮನಿಸಿದರೆ, ಟ್ರಂಪ್ ಪದಚ್ಯುತಿಗೆ ಸೆನೆಟ್‌ನಲ್ಲಿ ಸರಳ ಬಹುಮತವು ಸಾಕು ಎನಿಸುತ್ತದೆ, ಇದು ಭವಿಷ್ಯದಲ್ಲಿ ಟ್ರಂಪ್ ಆ ಹುದ್ದೆ ಏರುವುದನ್ನೂ ತಡೆಗಟ್ಟಬಹುದು.

ಈ ಜನವರಿಯಲ್ಲಿ ಸೆನೆಟ್ ಮೇಲೆ ನಿಯಂತ್ರಣ ಹೊಂದಲಿರುವ ಡೆಮಾಕ್ರಟ್ಸ್, 2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸಿದಂತೆ ನಿರ್ಣಯಿಸುವ ಅವಕಾಶವನ್ನೂ ಪಡೆಯಲಿದ್ದಾರೆ.

ಆದರೆ ಇಲ್ಲಿ ಒಂದು ತೊಡಕಿದೆ. ಚುನಾವಣೆಯ ಸ್ಪರ್ಧೆಯಿಂದ ಅನರ್ಹತೆಗೊಳಿಸುವ ಮತದಾನಕ್ಕೂ ಮೊದಲು, ಶಿಕ್ಷಿಸಬೇಕು ಮತ್ತು ಪದವಿಯಿಂದ ಪದಚ್ಯುತಿಗೊಳಿಸಬೇಕೇ ಎಂಬ ವಿಷಯದ ಮೇಲೆ ಮತದಾನ ನಡೆಯಲಿದೆ. ಮೊದಲನೆಯದು ಯಶಸ್ವಿಯಾದರಷ್ಟೇ ಎರಡನೆ ಪ್ರಕ್ರಿಯೆ ನಡೆಯಲಿದೆ.

ಯುನಿವರ್ಸಿಟಿ ಆಫ್ ಕ್ಯಾಲಿರೋಡಾದ ಕಾನೂನು ಪ್ರೊಫೆಸರ್ ಪೌಲ್ ಕ್ಯಾಂಪೋಸ್, ‘ಸೆನೆಟ್‌ಗೆ ಭವಿಷ್ಯದ ಚುನಾವಣೆಯಲ್ಲಿ ಸ್ಪರ್ಧಿಸಲಾರದಂತೆ ಅನರ್ಹಗೊಳಿಸುವ ವೋಟಿಂಗ್ ಅಧಿಕಾರ ಮಾತ್ರವಿದೆ. ಜನೆವರಿ 20ರಂದು ಟ್ರಂಪ್ ನಿರ್ಗಮಿಸಲಿರುವ ದಿನದವರೆಗೂ ಇಂಪೀಚ್‌ಮೆಂಟ್ ವಿಚಾರಣೆ ಚಾಲ್ತಿಯಲ್ಲಿದ್ದರೆ ಈ ವಿದ್ಯಮಾನ ಸಂಭವಿಸಬಹುದು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿರ್ಗಮನದ ನಂತರ ಇಂಪ್ರೀಚ್‌ಮೆಂಟ್ ಸಾಧ್ಯವೇ?

ಈ ಕುರಿತು ಯಾವ ನ್ಯಾಯಾಲಯವೂ ಸ್ಪಷ್ಟವಾಗಿ ತಿಳಿಸಿಲ್ಲವಾದರೂ, ತಜ್ಞರ ಪ್ರಕಾರ, ಟ್ರಂಪ್ ನಿರ್ಗಮನದ ನಂತರವೂ ಭವಿಷ್ಯದಲ್ಲಿ ಈ ಹುದ್ದೆಗೇರದಂತೆ ಅನರ್ಹಗೊಳಿಸುವ ವಿಷಯ ಜೀವಂತವಿರುತ್ತದೆ.

ಎರಡು ಸಲ ದೋಷಾರೋಪಣೆ

ಈ ಹಿಂದಿನ ಯಾವುದಾದರೂ ಅಮೆರಿಕ ಅಧ್ಯಕ್ಷ ಎರಡು ಬಾರಿ ಇಂಪೀಚ್‌ಮೆಂಟ್ ಎದುರಿಸಿದ್ದಾರೆಯೇ? ಇಲ್ಲಿವರೆಗೆ ಇದು ಸಂಭವಿಸಿಲ್ಲ. ಈ ಕುರಿತು ಕಾಂಗ್ರೆಸ್ ಅಷ್ಟೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯ.
2019ರಲ್ಲಿ ಟ್ರಂಪ್ ವಿರುದ್ಧ ಅಧಿಕಾರ ದುರ್ಬಳಕೆಯ ಕಾರಣದಲ್ಲಿ ಇಂಪೀಚ್‌ಮೆಂಟ್ ಮಾಡಲಾಗಿತ್ತು. ಆದರೆ ಮುಂದೆ ಫೆಬ್ರುವರಿ 2020ರಲ್ಲಿ ರಿಪಬ್ಲಿಕನ್‌ಗಳೇ ಹೆಚ್ಚಿದ್ದ ಸೆನೆಟ್ ಅವರನ್ನು ಆರೋಪಮುಕ್ತ ಮಾಡಿತ್ತು.
ಟ್ರಂಪ್ ಇಂಪೀಚ್‌ಮೆಂಟ್‌ಗೆ ಜೋ ಬೈಡೆನ್ ಅಷ್ಟಾಗಿ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಆದರೆ ಸೋಮವಾರ ಕಾಂಗ್ರೆಸ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಷ್ಟೇ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...