Homeಮುಖಪುಟಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

- Advertisement -
- Advertisement -

ವಿವಾದಾತ್ಮಕ ಲಸಿಕೆ ಕೊವ್ಯಾಕ್ಸಿನ್‌ನ ಮೂರನೇ ಹಂತದ ಟ್ರಯಲ್‌ನಲ್ಲಿ ಲಸಿಕೆ ಪಡೆದ ವ್ಯಕ್ತಿಯೊಬ್ಬರು ಸಾವೀಗೀಡಾಗಿದ್ದಾರೆ. ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್, ವ್ಯಕ್ತಿಗೆ ವಿಷ ಸೇವನೆ ಮಾಡಿಸಿರುವ ಶಂಕೆಯಿದ್ದು, ಆ ಕಾರಣಕ್ಕೆ ಹೃದಯ ಉಸಿರಾಟ ವೈಫಲ್ಯದಿಂದ ವ್ಯಕ್ತಿ ಮೃತನಾಗಿರಬಹುದು. ಈ ಪ್ರಕರಣ ಈಗ ಪೊಲೀಸ್ ತನಿಖೆಯಲ್ಲಿದೆ ಎಂದು ವಿವರಣೆ ನೀಡಿದೆ. ಈ ಹೇಳಿಕೆಯು ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿದೆ.

‘ನಮ್ಮ ಒಬ್ಬ ಸ್ವಯಂಸೇವಕ ಡಿಸೆಂಬರ್ 21 ರಂದು ಮೃತಪಟ್ಟ. ಈ ಸಾವಿನ ಕುರಿತು ಮೃತರ ಮಗ ಪೀಪಲ್ಸ್ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ರಿಸರ್ಚ್ ಸೆಂಟರ್‌ಗೆ ವರದಿ ಮಾಡಿದರು. ಮೃತ ಸ್ವಯಂಸೇವಕ ಮೂರನೇ ಹಂತದ ಟ್ರಯಲ್‌ಗೆ ಸೇರ್ಪಡೆಯಾಗುವ ಮುನ್ನ ಎಲ್ಲ ಮಾನದಂಡಗಳಲ್ಲೂ ಅರ್ಹರಾಗಿದ್ದರು. ಆ ವ್ಯಕ್ತಿಗೆ ಡೋಸ್ ನೀಡಿದ ಹಿಂದಿನ 7 ದಿನಗಳ ಕಾಲ ಅವರು ಆರೋಗ್ಯವಂತರಾಗಿದ್ದರು ಎಂದು ನಮ್ಮ ದಾಖಲೆ ಹೇಳುತ್ತಿವೆ. ಡೋಸ್ ಪಡೆದ 9 ದಿನಗಳ ನಂತರ ಆ ವ್ಯಕ್ತಿ ಮೃತರಾಗಿದ್ದು, ಪ್ರಾಥಮಿಕ ಪರಿಶೀಲನೆಗಳ ಪ್ರಕಾರ ಸಾವು ಡೋಸಿಂಗ್ ಕಾರಣದಿಂದ ಸಂಭವಿಸಿಲ್ಲ’ ಎಂದು ಭಾರತ್ ಬಯೋಟೆಕ್ ಪ್ರಕಟಣೆ ಹೇಳುತ್ತಿದೆ.

“ಮೃತ ಸ್ವಯಂಸೇವಕ ‘ಅಧ್ಯಯನದ ಲಸಿಕೆ’ (study vaccine) ಅಥವಾ ಪ್ಲಾಸಿಬೊ ಪಡೆದಿದ್ದರೆ ಎಂಬುದನ್ನು ನಾವು ಖಚಿತವಾಗಿ ಹೇಳಲು ಆಧಾರಗಳಿಲ್ಲ” ಎಂದೂ ಹೇಳುವ ಮೂಲಕ ಭಾರತ್ ಬಯೋಟೆಕ್ ಗೊಂದಲ ಮೂಡಿಸಿದೆ.

ಭಾರತದ ಔಷಧ ನಿಯಂತ್ರಕರು ಕೊವಿಶೀಲ್ಡ್ ಮತ್ತು ಈ ವಿವಾದಾತ್ಮಕ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಿದ್ದಾರೆ. ಜನೆವರಿ 16 ರಿಂದ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ.

3ನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸಿಲ್ಲ ಮತ್ತು ಸುರಕ್ಷತಾ, ಪರಿಣಾಮಕಾರಿತ್ವದ ದತ್ತಾಂಶ-ಮಾಹಿತಿಯನ್ನು ಪ್ರಕಟಿಸಿಲ್ಲ ಎಂಬ ವಿವಾದಕ್ಕೆ ಈಡಾಗಿರುವ ಏಕೈಕ ದೇಸಿ ಲಸಿಕೆ ಕೊವ್ಯಾಕ್ಸಿನ್, ಈಗ 3ನೇ ಹಂತದ ಟ್ರಯಲ್‌ನ ಸ್ವಯಂಸೇವಕರೊಬ್ಬರ ಸಾವಿನ ನಂತರ ಇನ್ನಷ್ಟು ಆತಂಕ ಮೂಡಿಸಿದೆ.

2019ರ ‘ನ್ಯೂ ಡ್ರಗ್ಸ್ & ಕ್ಲಿನಿಕಲ್ ಟ್ರಯಲ್ ರೂಲ್ಸ್’ (NDCT) ಪ್ರಕಾರ ಈ ಪ್ರಕರಣವನ್ನು ಕಂಪನಿಯ ಸೈಟ್ ತಂಡವು, Institutional Ethics Committee, the Central Drugs Control Standards Organization (CDSCO) and the Data Safety Monitoring Board (DSMB) ಸಂಸ್ಥೆಗಳಿಗೆ ವರದಿ ಮಾಡಿದೆ.

ಸ್ವಯಂಸೇವಕರಲ್ಲಿ ಮೊದಲೇ ಸುಪ್ತವಾಗಿದ್ದ ರೋಗಗಳೂ ಸಾವಿಗೆ ಕಾರಣ ಇರಬಹುದು ಎಂಬ ಭಾರತ್ ಬಯೋಟೆಕ್ ಹೇಳಿಕೆಯನ್ನೂ ಗಮನಿಸಬೇಕು. ಆದರೆ ಯಾವುದೇ ಕಾರಣವಿರಲಿ, ಟ್ರಯಲ್ಸ್‌ನಲ್ಲಿ ಸ್ವಯಂಸೇವಕ ಸಾವೀಗೀಡಾದರೆ ಅದನ್ನು ಉನ್ನತ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು New Drugs & Clinical Trials Rules (NDCT) ಹೇಳುತ್ತದೆ.

ಈಗ ಉನ್ನತ ಸಂಸ್ಥೆಗಳ ಗಮನಕ್ಕೆ ಈ ವಿಷಯ ಬಂದಾಗಿದೆ. ಅವರು ಕ್ರಮ ಕೈಗೊಳ್ಳಬಹುದು ಎಂದು ಯಾವ ವಿಶ್ವಾಸದಿಂದ ಹೇಳುವುದು?


ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...