Homeಮುಖಪುಟರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ಹೋರಾಟ ಮಾಡುವ ಮೂಲಕ ದೇಶದಲ್ಲಿ ಪಿತೂರಿ ಮಾಡುತ್ತಿರುವವರು ಭಯೋತ್ಪಾದಕರು, ದರೋಡೆಕೋರರು, ಕಳ್ಳರು ಎಂದು ಬಿಜೆಪಿ ಶಾಸಕ ಆಧಾರ ರಹಿತ ಆರೋಪ ಮಾಡಿ ತೀವ್ರ ಟೀಕೆಗೊಳಗಾಗಿದ್ದಾರೆ.

- Advertisement -
- Advertisement -

‘ಒಂದು ಕಡೆ ತೊಟ್ಟಿಲು ತೂಗುತ್ತಾರೆ, ಮೊತ್ತೊಂದು ಕಡೆ ಮಗು ಚಿವುಟುತ್ತಾರೆ’ ಅನ್ನುವ ಕನ್ನಡ ಗಾದೆ ಈ ಬಿಜೆಪಿ ಪಕ್ಷಕ್ಕೆ ಸರಿಯಾಗಿ ಅನ್ವಯಿಸುತ್ತದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಕಳೆದ 45 ದಿನಗಳಿಂದ ದೆಹಲಿಯ ಕೊರೆಯುವ ಚಳಿಯಲ್ಲಿ, ಮಳೆಯಲ್ಲಿ ರೈತರು ಹೋರಾಡುತ್ತಿದ್ದಾರೆ. ರೈತ ಮುಖಂಡರೊಂದಿಗೆ ಒಂದು ಕಡೆ ಮಾತುಕತೆ ನಡೆಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಮತ್ತೊಂದು ಕಡೆ ರೈತರನ್ನು ಹೀಯಾಳಿಸುವ ಬುದ್ದಿ ಬಿಟ್ಟಿಲ್ಲ. ರಾಜಸ್ಥಾನದ ರಾಮ್‌ಗಂಜ್‌ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್ “ಹೋರಾಟನಿರತ ರೈತರು ಬಿರಿಯಾನಿ ತಿನ್ನುವ ಮೂಲಕ ಇಡೀ ದೇಶಕ್ಕೆ ಹಕ್ಕಿ ಜ್ವರ ಹರಡುತ್ತಿದ್ದಾರೆ” ಎನ್ನುವ ಮೂಲಕ ತಮ್ಮ ನಾಲಿಗೆ ಹರಿಯಬಿಟ್ಟಿದ್ದಾರೆ.

ಈ ರೀತಿಯ ಹೋರಾಟ ಮಾಡುವ ಮೂಲಕ ದೇಶದಲ್ಲಿ ಪಿತೂರಿ ಮಾಡುತ್ತಿರುವ ಭಯೋತ್ಪಾದಕರು, ದರೋಡೆಕೋರರು, ಕಳ್ಳರು ಎಂದು ಬಿಜೆಪಿ ಶಾಸಕ ಆಧಾರ ರಹಿತ ಆರೋಪ ಮಾಡಿದ್ದಾರೆ. ಇವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪ್ರತಿಭಟನಾ ನಿರತ ರೈತರು ದೇಶ ಅಥವಾ ದೇಶದ ರೈತರ ಬಗ್ಗೆ ಆಲೋಚನೆ ಮಾಡುತ್ತಿಲ್ಲ. ಪ್ರತಿಭಟನೆ ಅವರಿಗೆ ಕೇವಲ ಪಿಕ್ನಿಕ್ ಮಾತ್ರ. ಮುಂದಿನ ಕೆಲವು ದಿನಗಳಲ್ಲಿ ಸರ್ಕಾರವು ಮನವೊಲಿಸುವ ಮೂಲಕ ಅಥವಾ ಬಲವಂತದ ಮೂಲಕ ಅವರನ್ನು ಹಾಕದಿದ್ದರೆ, ದೇಶವು ಪಕ್ಷಿ ಜ್ವರ ಸಮಸ್ಯೆಯನ್ನು ಎದುರಿಸಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ದಿಲಾವರ್ ಹೇಳಿದ್ದಾರೆ.

ಬಿಜೆಪಿ ಶಾಸಕರ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ರಾಜಸ್ಥಾನ್ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಾಸ್ರಾ ಮಾತನಾಡಿ “ದೇಶಕ್ಕೆ ಅನ್ನ ನೀಡುವ ರೈತರು ಹಕ್ಕಿ ಜ್ವರ ಹಬ್ಬಿಸಲು ಹೇಗೆ ಕಾರಣರಾಗುತ್ತಾರೆ? ಬಿಜೆಪಿ ಶಾಸಕರ ಹೇಳಿಕೆ ರೈತರ ಕುರಿತು ಬಿಜೆಪಿ ಮನಸ್ಥಿತಿಯನ್ನು ತಿಳಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ಈ ಮುಂಚೆಯು ಸಹ ಬಿಜೆಪಿ ಮುಖಂಡರು ಹೋರಾಟನಿರತ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದೆಲ್ಲಾ ಟೀಕಿಸಿದ್ದರು. ಒಂದು ಕಡೆ ಟೀಕಿಸುವುದು, ಮತ್ತೊಂದು ಕಡೆ ರೈತರೊಡನೆ ಮಾತುಕತೆ ನಡೆಸುವುದು, ಅವರು ಕೊಟ್ಟ ಊಟ ಮಾಡುವುದು ಇದು ಬಿಜೆಪಿಯ ಇಬ್ಬಂದಿತನವಲ್ಲವೇ ಎಂಬ ತೀವ್ರ ಟೀಕೆ ವ್ಯಕ್ತವಾಗಿತ್ತು.

ಬಿಜೆಪಿ, ಕೆಲ ಮಾಧ್ಯಮಗಳು, ಕಂಗನಾ ರಾಣಾವತ್‌ರವರ ಟೀಕೆಗಳನ್ನು ಎದುರಿಸಿಯೂ ರೈತರ ಹೋರಾಟ ಅಬಾಧಿತವಾಗಿ ಮುಂದುವರೆಯುತ್ತಿದೆ. ಮೊನ್ನೆ ತಾನೇ ಟ್ರ್ಯಾಕ್ಟರ್ ರ್ಯಾಲಿ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ರೈತರು ಜನವರಿ 26ರ ಗಣರಾಜ್ಯೋತ್ಸವದಂದು ಪೂರ್ಣ ಪ್ರಮಾಣದ ಟ್ರ್ಯಾಕ್ಟರ್ ಪೆರೇಡ್ ಮಾಡಲು ಮುಂದಾಗಿದ್ದಾರೆ.


ಇದನ್ನೂ ಓದಿ; ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...