Homeಮುಖಪುಟರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ಹೋರಾಟ ಮಾಡುವ ಮೂಲಕ ದೇಶದಲ್ಲಿ ಪಿತೂರಿ ಮಾಡುತ್ತಿರುವವರು ಭಯೋತ್ಪಾದಕರು, ದರೋಡೆಕೋರರು, ಕಳ್ಳರು ಎಂದು ಬಿಜೆಪಿ ಶಾಸಕ ಆಧಾರ ರಹಿತ ಆರೋಪ ಮಾಡಿ ತೀವ್ರ ಟೀಕೆಗೊಳಗಾಗಿದ್ದಾರೆ.

- Advertisement -
- Advertisement -

‘ಒಂದು ಕಡೆ ತೊಟ್ಟಿಲು ತೂಗುತ್ತಾರೆ, ಮೊತ್ತೊಂದು ಕಡೆ ಮಗು ಚಿವುಟುತ್ತಾರೆ’ ಅನ್ನುವ ಕನ್ನಡ ಗಾದೆ ಈ ಬಿಜೆಪಿ ಪಕ್ಷಕ್ಕೆ ಸರಿಯಾಗಿ ಅನ್ವಯಿಸುತ್ತದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಕಳೆದ 45 ದಿನಗಳಿಂದ ದೆಹಲಿಯ ಕೊರೆಯುವ ಚಳಿಯಲ್ಲಿ, ಮಳೆಯಲ್ಲಿ ರೈತರು ಹೋರಾಡುತ್ತಿದ್ದಾರೆ. ರೈತ ಮುಖಂಡರೊಂದಿಗೆ ಒಂದು ಕಡೆ ಮಾತುಕತೆ ನಡೆಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಮತ್ತೊಂದು ಕಡೆ ರೈತರನ್ನು ಹೀಯಾಳಿಸುವ ಬುದ್ದಿ ಬಿಟ್ಟಿಲ್ಲ. ರಾಜಸ್ಥಾನದ ರಾಮ್‌ಗಂಜ್‌ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್ “ಹೋರಾಟನಿರತ ರೈತರು ಬಿರಿಯಾನಿ ತಿನ್ನುವ ಮೂಲಕ ಇಡೀ ದೇಶಕ್ಕೆ ಹಕ್ಕಿ ಜ್ವರ ಹರಡುತ್ತಿದ್ದಾರೆ” ಎನ್ನುವ ಮೂಲಕ ತಮ್ಮ ನಾಲಿಗೆ ಹರಿಯಬಿಟ್ಟಿದ್ದಾರೆ.

ಈ ರೀತಿಯ ಹೋರಾಟ ಮಾಡುವ ಮೂಲಕ ದೇಶದಲ್ಲಿ ಪಿತೂರಿ ಮಾಡುತ್ತಿರುವ ಭಯೋತ್ಪಾದಕರು, ದರೋಡೆಕೋರರು, ಕಳ್ಳರು ಎಂದು ಬಿಜೆಪಿ ಶಾಸಕ ಆಧಾರ ರಹಿತ ಆರೋಪ ಮಾಡಿದ್ದಾರೆ. ಇವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪ್ರತಿಭಟನಾ ನಿರತ ರೈತರು ದೇಶ ಅಥವಾ ದೇಶದ ರೈತರ ಬಗ್ಗೆ ಆಲೋಚನೆ ಮಾಡುತ್ತಿಲ್ಲ. ಪ್ರತಿಭಟನೆ ಅವರಿಗೆ ಕೇವಲ ಪಿಕ್ನಿಕ್ ಮಾತ್ರ. ಮುಂದಿನ ಕೆಲವು ದಿನಗಳಲ್ಲಿ ಸರ್ಕಾರವು ಮನವೊಲಿಸುವ ಮೂಲಕ ಅಥವಾ ಬಲವಂತದ ಮೂಲಕ ಅವರನ್ನು ಹಾಕದಿದ್ದರೆ, ದೇಶವು ಪಕ್ಷಿ ಜ್ವರ ಸಮಸ್ಯೆಯನ್ನು ಎದುರಿಸಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ದಿಲಾವರ್ ಹೇಳಿದ್ದಾರೆ.

ಬಿಜೆಪಿ ಶಾಸಕರ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ರಾಜಸ್ಥಾನ್ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಾಸ್ರಾ ಮಾತನಾಡಿ “ದೇಶಕ್ಕೆ ಅನ್ನ ನೀಡುವ ರೈತರು ಹಕ್ಕಿ ಜ್ವರ ಹಬ್ಬಿಸಲು ಹೇಗೆ ಕಾರಣರಾಗುತ್ತಾರೆ? ಬಿಜೆಪಿ ಶಾಸಕರ ಹೇಳಿಕೆ ರೈತರ ಕುರಿತು ಬಿಜೆಪಿ ಮನಸ್ಥಿತಿಯನ್ನು ತಿಳಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ಈ ಮುಂಚೆಯು ಸಹ ಬಿಜೆಪಿ ಮುಖಂಡರು ಹೋರಾಟನಿರತ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದೆಲ್ಲಾ ಟೀಕಿಸಿದ್ದರು. ಒಂದು ಕಡೆ ಟೀಕಿಸುವುದು, ಮತ್ತೊಂದು ಕಡೆ ರೈತರೊಡನೆ ಮಾತುಕತೆ ನಡೆಸುವುದು, ಅವರು ಕೊಟ್ಟ ಊಟ ಮಾಡುವುದು ಇದು ಬಿಜೆಪಿಯ ಇಬ್ಬಂದಿತನವಲ್ಲವೇ ಎಂಬ ತೀವ್ರ ಟೀಕೆ ವ್ಯಕ್ತವಾಗಿತ್ತು.

ಬಿಜೆಪಿ, ಕೆಲ ಮಾಧ್ಯಮಗಳು, ಕಂಗನಾ ರಾಣಾವತ್‌ರವರ ಟೀಕೆಗಳನ್ನು ಎದುರಿಸಿಯೂ ರೈತರ ಹೋರಾಟ ಅಬಾಧಿತವಾಗಿ ಮುಂದುವರೆಯುತ್ತಿದೆ. ಮೊನ್ನೆ ತಾನೇ ಟ್ರ್ಯಾಕ್ಟರ್ ರ್ಯಾಲಿ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ರೈತರು ಜನವರಿ 26ರ ಗಣರಾಜ್ಯೋತ್ಸವದಂದು ಪೂರ್ಣ ಪ್ರಮಾಣದ ಟ್ರ್ಯಾಕ್ಟರ್ ಪೆರೇಡ್ ಮಾಡಲು ಮುಂದಾಗಿದ್ದಾರೆ.


ಇದನ್ನೂ ಓದಿ; ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...