Homeಮುಖಪುಟಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿಯ ಸಿಂಘು ಗಡಿಯಲ್ಲಿ ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 40 ವರ್ಷದ ರೈತರೊಬ್ಬರು ಶನಿವಾರ ವಿಷ ಸೇವಿಸಿ ಪ್ರಾಣತ್ಯಾಗ ಮಾಡಿದ್ದಾರೆ.

ಅಮರಿಂದರ್ ಸಿಂಗ್ ಎಂದು ಗುರುತಿಸಲಾಗಿರುವ ರೈತ, ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಆಲಿಸುತ್ತಿಲ್ಲ. ನನ್ನ ಸಾವು ರೈತ ಆಂದೋಲನಕ್ಕೆ ಯಶಸ್ಸನ್ನು ತರುತ್ತದೆ ಎನ್ನುವ ಕಾರಣಕ್ಕೆ ಪ್ರಾಣತ್ಯಾಗ ಮಾಡುವುದಾಗಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

“ವಿಷ ಸೇವಿಸಿದ ನಂತರ ಅಮರಿಂದರ್ ಸಿಂಗ್ ಅವರನ್ನು ಸೋನಿಪತ್‌ನ ಫಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಮರಿಂದರ್ ಸಿಂಗ್ ಅವರ ಕುಟುಂಬವನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಶವವನ್ನು ಪ್ರತಿಭಟನಾ ಸ್ಥಳದಲ್ಲಿನ ಇತರ ರೈತರಿಗೆ ಹಸ್ತಾಂತರಿಸಲಾಗುತ್ತದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದು, ಟ್ವಿಟರ್ ಟ್ರೆಂಡಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೈತರ ಕರೆಗೆ ಓಗೊಟ್ಟು ಲಕ್ಷಾಂತರ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮಂದೀಪ್ ಜಸ್ಸಿ ಎಂಬುವವರು ಟ್ವೀಟ್ ಮಾಡಿ, “ಮೋದೀಜಿ, ಇದು ವಿನಯಪೂರ್ವಕ ವಿನಂತಿ. ದಯವಿಟ್ಟು ರೈತರ ಸಮಸ್ಯೆಯನ್ನು ಬಗೆಹರಿಸಿ” ಎಂದು ಬರೆದುಕೊಂಡಿದ್ದಾರೆ.

ಮೊಹಮ್ಮದ್ ಎಂಬುವವರು ಟ್ವೀಟ್ ಮಾಡಿ, “ರೈತರು ಬೀದಿಯಲ್ಲಿ ಸಾಯುತ್ತಿದ್ದರೆ, ಸಂವಿಧಾನ ಸಂಸತ್ತಿನಲ್ಲಿ ಸಾಯುತ್ತಿದೆ. ದೇಶ ಎಚ್ಚರಗೊಳ್ಳಬೇಕಿದೆ” ಎಂದು ಬರೆದುಕೊಂಡಿದ್ದಾರೆ.

ಸಿಮ್ರನ್ ಸಂಧು ಎಂಬುವವರು, “ಭಾರತ ಮತ್ತೊಮ್ಮೊ ಒಂದಾಗಬೇಕಿದೆ. ಆದರೆ ಈ ಬಾರಿ ಬ್ರಿಟಿಷರ ವಿರುದ್ಧವಲ್ಲ. ಬದಲಿಗೆ ಮೋದಿ ಸರ್ಕಾರದ ವಿರುದ್ಧ” ಎಂದು ಟ್ವೀಟ್ ಮಾಡಿದ್ದಾರೆ.

ಹೀಗೆ ಲಕ್ಷಕ್ಕೂ ಹೆಚ್ಚು ಜನ ಮೋದಿ ಸರ್ಕಾರದ ವಿರುದ್ಧ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಮೋದಿ -ಶಾ ರೇ ಜವಾಬ್ದಾರರು: ಮತ್ತೊಬ್ಬ ರೈತನ ಆತ್ಮಹತ್ಯೆ ಯತ್ನ

ಈ ತಿಂಗಳು ವರದಿಯಾದ ಎರಡನೇ ರೈತ ಸಾವು ಇದು. ಕಳೆದ ವಾರ ದೆಹಲಿ-ಗಾಜಿಯಾಬಾದ್ ಗಡಿ ಬಳಿ ಪ್ರತಿಭಟನಾ ಸ್ಥಳದಲ್ಲಿ 75 ವರ್ಷದ ರೈತ ಪ್ರಾಣತ್ಯಾಗ ಮಾಡಿದ್ದರು.

ರೈತ ಹೋರಾಟವನ್ನು ಬೆಂಬಲಿಸಿ ಡಿಸಂಬರ್‌ನಲ್ಲಿ ಸಿಖ್ ಧರ್ಮಗುರು ಬಾಬಾ ರಾಮ್ ಸಿಂಗ್ ಜಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಮ್ಮ ಆತ್ಮಹತ್ಯಾ ಬರಹದಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದುಕೊಂಡಿದ್ದರು.

ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಚಳಿಗಾಳಿ, ಅನಾರೋಗ್ಯ, ಆತ್ಮಹತ್ಯೆ ಸೇರಿದಂತೆ ಹಲವು ಕಾರಣಗಳಿಂದ 60 ಹೆಚ್ಚು ರೈತರು ಸಾವನಪ್ಪಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಡಿಸೆಂಬರ್ 20ರ ಭಾನುವಾರ ಮಡಿದವರ ನೆನಪಿನಲ್ಲಿ ಶ್ರದ್ಧಾಂಜಲಿ ದಿವಸ್ ಆಚರಿಸಲಾಗಿತ್ತು.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...