Homeಮುಖಪುಟಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ಅಮೆರಿಕದಂತೆ ಇಲ್ಲಿಯೂ ಸಾಮಾಜಿಕ ಜಾಲತಾಣಗಳು ಕಾರ್ಯನಿರ್ವಹಿಸಿದ್ದರೆ, ಇಷ್ಟೊತ್ತಿಗಾಗಲೇ ಅಮಿತ್ ಮಾಳವಿಯ, ಕಪಿಲ್ ಮಿಶ್ರಾ, ತೇಜಸ್ವಿ ಸೂರ್ಯ ಇತ್ಯಾದಿ ವಿಭಜನಾಕಾರಿ ಸಂದೇಶ ವಾಹಕರ ಖಾತೆಗಳು ಎಂದೋ ಮಣ್ಣುಪಾಲು ಆಗಬೇಕಿತ್ತು. ಆದರೆ, ಅದೇಕೆ ಆಗಲಿಲ್ಲ?

- Advertisement -
- Advertisement -

ಫೇಸ್‌ಬುಕ್, ಟ್ವೀಟರ್‌ಗಳೇನೂ ಸಂಪೂರ್ಣ ಪ್ರಜಾಪ್ರಭುತ್ವವಾದಿಯಲ್ಲ ಎಂಬುದು ಭಾರತದಲ್ಲಿ ದೃಢಪಟ್ಟಿದೆ. ಆದರೆ ಅಮೆರಿಕದಲ್ಲಿ ಅವಕ್ಕೆ ಹೆಚ್ಚಿನ ಸ್ವಾತಂತ್ರ್ಯ ಇರುವ ಕಾರಣಕ್ಕೆ ಟ್ವೀಟರ್ ಖಾಯಂ ಆಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಲು ಸಾಧ್ಯವಾಗಿದೆಯಷ್ಟೇ.
ಇದೊಳ್ಳೆ ಕತೆ. ಬಿಜೆಪಿಯ ಹಲವರು ಈಗ ಅಭಿವ್ಯಕ್ತಿ ಸ್ವಾತಂತ್ರ್ಯ, ಫ್ರೀ ಸ್ಪೀಚ್ ಮತ್ತು ಡೆಮಾಕ್ರಸಿ-ಇತ್ಯಾದಿ ಪದಪುಂಜಗಳನ್ನು ಬಳಸುತ್ತಿದಾರಷ್ಟೇ. ಶುಕ್ರವಾರ ಟ್ರಂಪ್ ಸಾಹೇಬರ ಟ್ವೀಟರ್ ಖಾತೆಯನ್ನು ಖಾಯಂ ಆಗಿ ಸ್ಥಗಿತಗೊಳಿಸಿದ ನಂತರ ಅವರು ನೀಡುತ್ತಿರುವ ಪ್ರತಿಕ್ರಿಯೆಗಳು ಅವರ ಆಷಾಢಭೂತಿತನಕ್ಕೆ ಸಾಕ್ಷಿಯಾಗಿವೆ.

ಟ್ವೀಟರ್ ಖಾತೆ ಸ್ಥಗಿತಗೊಳಿಸಲು ಕಾರಣವಾದ, ಕ್ಯಾಪಿಟಲ್ ಮೇಲೆ ದಾಳಿಯಾಗುವಂತೆ ಟ್ರಂಪ್ ಪ್ರಚೋದನಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರ ಬಗ್ಗೆ ಬಿಜೆಪಿಯ ಈ ಧ್ವನಿಗಳು ಪ್ರಸ್ತಾಪಿಸುತ್ತಿಲ್ಲ. ಅಥವಾ ಟ್ವೀಟರ್ ಖಾತೆಯೊಂದರ ರದ್ದು ಅದ್ಹೇಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂಬುದನ್ನೂ ಹೇಳುತ್ತಿಲ್ಲ.

ಈ ಧ್ವನಿಗಳ ಒಟ್ಟೂ ಸಾರಾಂಶ: ಅಮೆರಿಕದ ಅಧ್ಯಕ್ಷರ ಟ್ವೀಟರ್ ಖಾತೆಯನ್ನೇ ರದ್ದು ಮಾಡಲಾಗಿದ್ದು, ತಮ್ಮ ಖಾತೆಗಳಿಗೂ ಈ ಅಪಾಯ ಒದಗಬಹುದೆಂಬ ಆತಂಕವಷ್ಟೇ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ಸಾಮಾಜಿಕ ಜಾಲತಾಣಗಳ ನಿಯಮ ಮತ್ತು ಷರತ್ತುಗಳು ಅಮೆರಿಕ ಮತ್ತು ಭಾರತದಲ್ಲಿ ಒಂದೇ ಆಗಿಲ್ಲ. ಅಲ್ಲಿ ಅವಕ್ಕೆ ಇಲ್ಲಿಗಿಂತ ಹೆಚ್ಚಿನ ಸ್ವಾತಂತ್ರ್ಯವಿದ್ದ ಕಾರಣಕ್ಕೆ ಈ ಹಿಂದೆಯೂ ಅವು ಟ್ರಂಪ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತ ಬಂದಿದ್ದವು.
ಭಾರತದಲ್ಲಿ ಆ ನಿಯಮಗಳು ಕಠಿಣವಾಗಿಲ್ಲ ಮತ್ತು ಆಡಳಿತರೂಢ ಬಿಜೆಪಿ 8-10 ವರ್ಷಗಳಿಂದ ಜಾಲತಾಣಗಳ ಜೊತೆ ’ಗುಪ್ತ’ ಮೈತ್ರಿ ಮಾಡಿಕೊಂಡೇ ಬಂದಿರುವುದನ್ನು ಫೇಸ್‌ಬುಕ್ ತಾರತಮ್ಯದ ಪ್ರಕರಣ ತೋರಿಸುತ್ತದೆ.

ಅಮೆರಿಕದಂತೆ ಇಲ್ಲಿಯೂ ಸಾಮಾಜಿಕ ಜಾಲತಾಣಗಳು ಕಾರ್ಯನಿರ್ವಹಿಸಿದ್ದರೆ, ಇಷ್ಟೊತ್ತಿಗಾಗಲೇ ಅಮಿತ್ ಮಾಳವಿಯ, ಕಪಿಲ್ ಮಿಶ್ರಾ, ತೇಜಸ್ವಿ ಸೂರ್ಯ ಇತ್ಯಾದಿ ವಿಭಜನಾಕಾರಿ ಸಂದೇಶ ವಾಹಕರ ಖಾತೆಗಳು ಎಂದೋ ಮಣ್ಣುಪಾಲು ಆಗಬೇಕಿತ್ತು. ಆದರೆ, ಅದೇಕೆ ಆಗಲಿಲ್ಲ?

ಕೋಮುವಾದಿ ಪ್ರಚೋದನ್ಮಾತಕ ಹೇಳಿಕೆ/ಸಂದೇಶಗಳಿಗೆ ಕುಖ್ಯಾತಿ ಪಡೆದಿರುವ ಬೆಂಗಳೂರು ದಕ್ಷಿಣದ ಸಂಸದ ಮತ್ತು ರಾಷ್ಟ್ರೀಯ ಬಿಜೆಪಿ ಯುವ ಘಟಕದ ಮುಖ್ಯಸ್ಥ ತೇಜಸ್ವಿ ಸೂರ್ಯ, ಟ್ರಂಪ್ ಪರ ಟ್ವೀಟ್ ಮಾಡಿ, ಅವರ ಖಾತೆ ರದ್ದುಗೊಳಿಸಿದ್ದನ್ನು ಪ್ರಜಾಪ್ರಭುತ್ವ ದೇಶಗಳ ನಾಯಕರಿಗೆ ಕಾದಿರುವ ಅಪಾಯ ಎಂದು ’ಬಿಗ್ ಟೆಕ್’ ಕಂಪನಿಗಳ ವಿರುದ್ಧ ಹರಿಹಾಯ್ದಿದ್ದು ಈ ಉಂಡಾಂಡಿಗುಂಡ ಹುಡುಗನ ಆಷಾಢಭೂತಿತನವನ್ನು ತೋರಿಸುತ್ತದೆ.

ಇದನ್ನೂ ಓದಿ: ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

ಈತನ ಹಿಂದೆಯೇ, ಬಿಜೆಪಿಯ ದುಷ್ಟ ಟ್ರಾಲ್ ಸೇನೆಯ ಹಿಂದಿನ ಬ್ರೇನ್ ಎಂದೇ ಕುಖ್ಯಾತನಾಗಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಟ್ರಂಪ್ ಪರ ಬ್ಯಾಟಿಂಗ್ ಮಾಡಿದ್ದಾರೆ.

’ಈ ಅನಿಯಂತ್ರಿತ ದೈತ್ಯ ಟೆಕ್ ಕಂಪನಿಗಳಿಂದ ಪ್ರಜಾಪ್ರಭುತ್ವಗಳಿಗೆ ಇರುವ ಅಪಾಯವನ್ನು ಎಲ್ಲರೂ ಅರಿಯಬೇಕಿದೆ’ ಎಂದು ಪುಟಾಣಿ ತೇಜಸ್ವಿ ಸೂರ್ಯ ಡೆಮಾಕ್ರಸಿಯ ಪರ ಟ್ವೀಟ್ ಮಾಡಿದೆ!

’ಅವರು POTUS (President Of the United States) ಗೇ ಈ ರೀತಿ ಮಾಡುತ್ತಾರೆಂದರೆ, ಅವರು ಇದನ್ನು ಯಾರ ಮೇಲಾದರೂ ಪ್ರಯೋಗಿಸಬಹುದು’ ಎಂಬ ತೇಜಸ್ವಿ ಸೂರ್ಯರ ವಾಕ್ಯದಲ್ಲಿ ಸುಪ್ತವಾಗಿ ಟ್ರಂಪ್ ಆರಾಧನೆಯಿದೆ. ಅದಕ್ಕಿಂತ ಹೆಚ್ಚಾಗಿ, ’ಅಮೆರಿಕ ಅಧ್ಯಕ್ಷರಿಗೇ’ ಎಂಬುದರಲ್ಲಂತೂ ಆರಾಧನೆಯ ಭಾವವಿದೆ. ಆದರೆ ಈ ಹಿಂದೆಯೂ ಟ್ರಂಪ್ ತಮ್ಮ ಹುಚ್ಚು ಸಂದೇಶಗಳ ಕಾರಣಕ್ಕೆ ಫೇಸ್‌ಬುಕ್, ಟ್ವೀಟರ್‌ಗಳಿಂದ ತಾತ್ಕಾಲಿಕ ಖಾತೆ ನಿರ್ಬಂಧವನ್ನು ಎದುರಿಸಿದ್ದಾರೆ ಎಂಬುದನ್ನು ಈ ಪ್ರಖರ ಕೋಮುವಾದಿ ಸಂಸದ ಮರೆತಂತಿದೆ.

ಇದನ್ನೂ ಓದಿ: ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಅರಬ್ ಮಹಿಳೆಯರ ಕುರಿತಾದ ಟ್ವೀಟ್‌ಗೆ ಅರಬ್ ಆಡಳಿತದಿಂದ ತೀವ್ರ ಆಕ್ಷೇಪ ವ್ಯಕ್ತವಾದ ನಂತರ ತೇಜಸ್ವಿ ಸೂರ್ಯ ಆ ಟ್ವೀಟ್ ಡಿಲೀಟ್ ಮಾಡಿದ್ದರು. ಬಹುಷ: ಆಗಲೇ ಈತನ ಖಾತೆ ರದ್ದಾಗುವ ಸಂಭವವಿತ್ತೇನೊ? ಹೈದರಾಬಾದ್ ಸ್ಥಳೀಯ ಸಂಸ್ಥೆ ಚುನಾವಣೆ ಸಂದರ್ಭದಲ್ಲೂ ಒವೈಸಿ ಕುರಿತು ತೇಜಸ್ವಿ ನೀಡಿದ ಹೇಳಿಕೆ ಕೋಮು ಪ್ರಚೋದನಾಕಾರಿಯಾಗಿದೆ ಎಂದು ಅಲ್ಲಿನ ಪೊಲೀಸರು ಎಚ್ಚರಿಸಿದ್ದರು.

ಜೀವವಿರೋಧಿ ಸಿದ್ದಾಂತವನ್ನೆ ಮೈ-ಮನಸ್ಸುಗಳ ತುಂಬ ಹರಡಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ’ಅಮೆರಿಕದ ಅಧ್ಯಕ್ಷರನ್ನೇ ಒಂದು ವೇದಿಕೆಯಿಂದ ನಿರಾಕರಿಸುವುದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ’ ಎಂದು ಟ್ವೀಟ್ ಮಾಡಿದ್ದಾರೆ!

ಟ್ವೀಟರ್ ಕಂಪನಿಯ ಕ್ರಮವನ್ನು ಫ್ರೀ ಸ್ಪೀಚ್ ವಿರುದ್ಧದ ಕ್ರಮ ಎಂಬಂತೆ ಬಿಂಬಿಸಲು ಯತ್ನಿಸಿರುವ ಮಾಳವಿಯ, ಈ ಸಂದರ್ಭವನ್ನು ಬಿಜೆಪಿಯ ಸಿದ್ದಾಂತ ವಿರೋಧಿಸುವವರನ್ನು ಟಾರ್ಗೆಟ್ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಆಮ್ ಆದ್ಮಿ ದೆಹಲಿ ಘಟಕದ ಸಾಮಾಜಿಕ ಜಾಲತಾಣದ ಉಸ್ತುವಾರಿ ಅಂಕಿತ್ ಲಾಲ್ ಇದಕ್ಕೆ ಪ್ರತಿಕ್ರಿಯಿಸಿದ್ದು, ’ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ವತ: ಸುಳ್ ಸುದ್ದಿ ಹರಡುವ, ತಪ್ಪು ಮಾಹಿತಿ ಪ್ರಸರಿಸುವ, ಆ ಮೂಲಕ ಪರೋಕ್ಷವಾಗಿ ಹಿಂಸೆಯನ್ನು ಪ್ರಚೋದಿಸುವ ವ್ಯಕ್ತಿ ಇಂದು ಬಿಗ್ ಟೆಕ್ ಕಂಪನಿಗಳ ವಿರುದ್ಧ ಮಾತಾಡುತ್ತಿದ್ದಾರೆ. ಮಾಳವಿಯ ಅವರೆ, ಇಲ್ಲಿವರೆಗೂ ನಿಮ್ಮ ಅಕೌಂಟ್ ರದ್ದಾಗದೇ ಇರಲು ಕಾರಣ, ಫೇಸ್‌ಬುಕ್ ಮತ್ತು ಟ್ವೀಟರ್‌ಗಳು ಭಾರತ ಮತ್ತು ಅಮೆರಿಕಗಳಿಗೆ ಒಂದೇ ನಿಯಮಗಳನ್ನು ಅನ್ವಯಿಸದಿರುವುದೇ ಆಗಿದೆ’ ಎಂದಿದ್ದಾರೆ.

ಈ ಸೂರ್ಯ, ಮಾಳವಿಯಾಗಳು ಇದೇ ’ಬಿಗ್ ಟೆಕ್’ ಕಂಪನಿಗಳ ವೇದಿಕೆ ಬಳಸಿಕೊಂಡು, ಕೋಮು ಪ್ರಚೋದನಾತ್ಮಕ, ಹಿಂಸೆ ಪ್ರಚೋದನ್ಮಾತಕ ಸಂದೇಶಗಳನ್ನು ಹರಿಬಿಡುತ್ತ ಬಂದಿದ್ದಾರೆ. ಆದರೆ ಇಲ್ಲಿ ಕಠಿಣ ನಿಯಮ ಇಲ್ಲದ್ದರಿಂದ ಮತ್ತು ಈ ’ಬಿಗ್ ಟೆಕ್’ ಕಂಪನಿಗಳ ಆಯಕಟ್ಟಿನ ಸ್ಥಳಗಳಲ್ಲಿ ಹಿಂದೂತ್ವಾದಿಗಳೇ ತುಂಬಿದ ಕಾರಣಕ್ಕೆ ಇವರೆಲ್ಲರೂ ಅಕೌಂಟ್ ರದ್ದತಿಯಿಂದ ವಿನಾಯ್ತಿ ಪಡೆದಿದ್ದಾರೆ. ವಾಲ್‌ಸ್ಟ್ರೀಟ್ ಪ್ರಕಟಿಸಿದ್ದ ಫೇಸ್‌ಬುಕ್ ಪಕ್ಷಪಾತ ಕುರಿತಾದ ತನಿಖಾ ವರದಿ ಇದನ್ನೇ ಸೂಚಿಸುತ್ತದೆ.

ಟ್ರಂಪ್ ಖಾತೆ ರದ್ದಾದಾಗ ಹಲವಾರು ಟ್ವೀಟರಿಗರು ದೆಹಲಿ ಬಿಜೆಪಿ ಕಪಿಲ್ ಮಿಶ್ರಾ ಖಾತೆಯನ್ನೂ ರದ್ದು ಮಾಡಿ ಎಂದು ಒತ್ತಾಯಿಸಿದ್ದರು.
ದೆಹಲಿ ಗಲಭೆಗೆ ಪ್ರಚೋದನೆ ನೀಡಿದ ಸಂದೇಶ ಮತ್ತು ದೆಹಲಿ ಅಸೆಂಬ್ಲಿ ಚುನಾವಣೆಯನ್ನು ’ಇಂಡಿಯಾ ವರ್ಸಸ್ ಪಾಕಿಸ್ತಾನ್’ ಮ್ಯಾಚ್ ಎಂದು ಕೋಮುವಾದಿ ಸಂದೇಶ ಹಾಕಿದ್ದ ಕಪಿಲ್ ಮಿಶ್ರಾ ಮೇಲೆ ಈ ’ಬಿಗ್ ಟೆಕ್’ ಕಂಪನಿಗಳು ಕ್ರಮ ಕೈಗೊಳ್ಳಲು ಏನು ಅಡ್ಡಿಯಾಗಿದೆ ಎಂಬುದನ್ನು ಟ್ರಂಪ್ ಬೆಂಬಲಿಗ ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಲು ಸಿದ್ಧರಿಲ್ಲ.


ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...