Homeಮುಖಪುಟಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

- Advertisement -
- Advertisement -
ಈ ಚಿತ್ರ ಉಜ್ವಾಲ ಯೋಜನೆಯ ಬಗ್ಗೆ ಏನು ಹೇಳುತ್ತದೆ

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆ, ಸೀಮೆಎಣ್ಣೆ ಸ್ಟವ್‍ಗಳನ್ನೇ ಆಶ್ರಯಿಸಿವೆ. ಬಡವರ ಆದಾಯ ಹೆಚ್ಚಿಸುವ ಯಾವ ದೊಡ್ಡ ಯೋಜನೆಯನ್ನು ಜಾರಿಗೆ ತರದ ಸರ್ಕಾರ, ಬಡ ಕುಟುಂಬಗಳು 800-1000 ತೆತ್ತು ಗ್ಯಾಸ್ ರಿಫಿಲ್ ಮಾಡಬೇಕೆಂದು ಬಯಸುತ್ತಿದೆ. ಮೋದಿ ಸರ್ಕಾರದ ಮೂರ್ಖತನದ ಯೋಜನೆಗಳಿಗೆ ಈ ‘ಉಜ್ವಲಾ’ ಸ್ಕೀಮ್ ಕೂಡ ಒಂದು ಸಾಕ್ಷಿ.

ಆಗಾಗ, ಹಲವಾರು ಸಂಘಸಂಸ್ಥೆಗಳು ಇದರ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿವೆ. ಈಗ ‘ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಕಂಪಾಸಿನೇಟ್ ಎಕಾನಮಿ’ ( RICE ) ನಾಲ್ಕು ರಾಜ್ಯಗಳಲ್ಲಿ ಅಧ್ಯಯನ ಮಾಡಿದ್ದು, ‘ಉಜ್ವಲಾ’ ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆಯನ್ನೇ ಉಪಯೋಗಿಸುತ್ತಿವೆ. ಗ್ಯಾಸ್ ಸ್ಟವ್ ಕೊಟ್ಟು ಕೈ ತೊಳೆದುಕೊಂಡ ಮೋದಿ ಸರ್ಕಾರ, ಗ್ಯಾಸ್ ರಿಫಿಲ್ ಬಗ್ಗೆ ಎಂದೂ, ಇಂದಿಗೂ ಯೋಚಿಸಲೇ ಇಲ್ಲ. ಜೊತೆಗೆ ಸಿಲಿಂಡರ್ ದರದಲ್ಲೂ ಏರಿಕೆ ಮಾಡುತ್ತಲೇ ಬಂದಿತು.

ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರ್‍ಗಳಲ್ಲಿ ಈ ಅಧ್ಯಯನ ಮಾಡಲಾಗಿದ್ದು, ಬಹಳಷ್ಟು ಕುಟುಂಬಗಳು ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳುವ ಆರ್ಥಿಕ ಸಾಮಥ್ರ್ಯ ಹೊಂದಿಲ್ಲ ಎಂಬುದು ಪತ್ತೆಯಾಗಿದೆ. ದೇಶದ ಇತರ ಭಾಗಗಳಲ್ಲೂ ಇಂಥದೇ ಪರಿಸ್ಥಿತಿಯಿದೆ. ಇದರಿಂದಾಗಿ, ಒಲೆ ಮುಂದೆ ಊದುತ್ತ, ಕೆಮ್ಮುತ್ತ ಬೆಂಕಿಯ ಝಳದ ಎದುರು ಮಹಿಳೆಯರು ಹೈರಾಣಾಗುತ್ತಿದ್ದಾರೆ. ಸೌದೆ ಒಲೆ ಬಳಕೆಯಿಂದ ಸಹಜವಾಗಿ ಮನೆಯೊಳಗೆ ವಾಯುಮಾಲಿನ್ಯ ಸಂಭವಿಸುತ್ತಿದೆ. ಇದಕ್ಕೆ ನವಜಾತ ಶಿಶುಗಳು ಪ್ರಾಣವನ್ನೂ ತೆರುತ್ತಿವೆ.

2016ರಲ್ಲಿ ಮೋದಿ ಸರ್ಕಾರ ಭಾರಿ ಸದ್ದಿನೊಂದಿಗೆ ‘ಉಜ್ವಲಾ’ ಯೋಜನೆಯನ್ನು ಆರಂಭಿಸಿತು. ಒಂದು ಗ್ಯಾಸ್ ಸಿಲಿಂಡರ್, ರೆಗುಲೇಟರ್ ಮತ್ತು ಪೈಪ್‍ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲಿಗೆ ಮುಗಿಯಿತು. ಸ್ಟವ್ ಖರೀದಿಸಬೇಕು, ಮೊದಲ ಸಿಲಿಂಡರ್ ಮುಗಿದ ನಂತರ ರಿಫಿಲ್ ಮಾಡಿಸುವ ತಾಪತ್ರಯ ಶುರು. ಅಧ್ಯಯನ ಮಾಡಿದ 4 ರಾಜ್ಯಗಳಲ್ಲಿ ಎಲ್‍ಪಿಜಿ ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿದೆ ನಿಜ. ಆದರೆ ಉಜ್ವಲಾ ಯೋಜನೆಯಲ್ಲಿ ಎಲ್‍ಪಿಜಿ ಸಂಪರ್ಕ ಪಡೆದ ಶೇ. 85ರಷ್ಟು ಜನರು ಈಗಲೂ ಸೌದೆ ಒಲೆ, ಸೀಮೆ ಎಣ್ಣೆ ಸ್ಟವ್‍ಗಳನ್ನೇ ಬಳಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಆನತೆಯ ಆದಾಯ ಹೆಚ್ಚಿಸುವುದು ಇರಲಿ, ನೋಟ್‍ಬ್ಯಾನ್‍ನಂತಹ ಕ್ರಮಗಳಿಂದ ಬಡವರ ಆದಾಯವನ್ನು ತಗ್ಗಿಸಿದ ಈ ಮೂರ್ಖ ಸರ್ಕಾರ ಜನ ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳಬೇಕು ಎನ್ನುತ್ತದೆ. ಇದು ಕ್ರೂರ ಮತ್ತು ಅಮಾನವೀಯ ಅಲ್ಲವೇ ಮೋದೀಜಿ?

ಆಧಾರ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...