Homeಕರ್ನಾಟಕವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ? ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು.

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾನೂನುಗಳ ಕುರಿತು ಯಾವುದೇ ವಾಸ್ತವಿಕತೆ ಗೊತ್ತಿಲ್ಲದೆ, ಕೋತಿಯಂತೆ ಮಾತನಾಡುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, “ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ?” ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಬಡಗಲಪುರ ನಾಗೇಂದ್ರ ಮಾತನಾಡಿದರು.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

“ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವ ಭರದಲ್ಲಿ ಕೆಲವರು ರೈತರ ಹೋರಾಟದ ನೈತಿಕ ಶಕ್ತಿಯನ್ನು ಎದುರಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ಈ ಪೈಕಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಬಿಜೆಪಿ ಲೋಕಸಭಾ ಸದಸ್ಯನೂ ಒಬ್ಬ. ಹಾಗಾಗಿ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ದುಷ್ಪರಿಣಾಮ ಕುರಿತು ಜನವರಿ 16 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬಹಿರಂಗ ಸಂವಾದ ಹಮ್ಮಿಕೊಳ್ಳಲಾಗಿದ್ದು, ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವವರು ಈ ಬಹಿರಂಗ ಸಂವಾದದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಈ ಸಂವಾದದಲ್ಲಿ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಸೇರಿದಂತೆ ಪಂಜಾಬ್‌ನ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ತಮಿಳುನಾಡಿನ ತಮಿಳಗ ವ್ಯವಸಾಯಿಗಳ್ ಸಂಘದ ಅಧ್ಯಕ್ಷ ಸೆಲ್ವಮುತ್ತು ಮಾತನಾಡಿ, “ರೈತ ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಬೆಲೆ, ಸೌಕರ್ಯ ಕಲ್ಪಿಸಿ ಕೊಡುವ ಕಾನೂನು ಎಪಿಎಂಸಿಯನ್ನೇ ಬಲಿ ಪಡೆದುಕೊಳ್ಳುವ ದುರುದ್ದೇಶ ಹೊಂದಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಇಲ್ಲಿಯವರೆಗೂ ಕೃಷಿ ಉತ್ಪನ್ನ ಮಾರಾಟ ಸಮಿತಿ ಮೇಲಿನ ಎಲ್ಲ ಕಾರ್ಯಗಳನ್ನು ನಿರ್ವಹಿಸುತ್ತಿತ್ತು. ಆದರೀಗ ಕಾರ್ಪೋರೇಟ್ ಸಂಸ್ಥೆಗಳೂ ಭಾಗಿಯಾಗಿರುವುದರಿಂದ ಎಪಿಎಂಸಿಗಳು ಮುಚ್ಚುವ ಸಂಭವವಿದೆ. ಪ್ರಧಾನಿ, ಹಣಕಾಸು ಸಚಿವರು, ಕೃಷಿ ಸಚಿವರು ಒಟ್ಟಾಗಿ ಈ ಕಾನೂನಿನ ಕುರಿತು ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಿಲ್ಲ. ಈ ಕಾನೂನು ಜಾರಿಗೆ ಬಂದರೆ ಎನೆಲ್ಲಾ ಅನುಕೂಲ ಎಂದು ರೈತರಿಗೆ ತಿಳಿಸಿಲ್ಲ. ಹೇಳಿದ್ದನ್ನಷ್ಟೇ ಮತ್ತೆ ಮತ್ತೆ ಹೇಳುತ್ತಾರೆಯೇ ವಿನಃ ಬೇರೆ ಕೆಲಸ ಮಾಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ…

“ಉತ್ತರ ಭಾರತ ದಕ್ಷಿಣ ಭಾರತದ ಕೃಷಿ ಮಾರುಕಟ್ಟೆಗೂ ಬಹಳಷ್ಟು ವ್ಯತ್ಯಾಸವಿದೆ. ದಕ್ಷಿಣ ಭಾರತದಲ್ಲಿ ಗುತ್ತಿಗೆದಾರರು ತೋಟಗಳಿಗೆ ಬಂದು ಜಾಗವನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಾರೆ. ಹರಿಶಿನ, ನೆಲಗಡಲೆಯನ್ನು ಹರಾಜಿಗೆ ಬಿಟ್ಟು ವ್ಯಾಪಾರ ಮಾಡುತ್ತಾರೆ.
ಉಳಿದ ಬೆಳಗಳನ್ನು ನೇರವಾಗಿ ಮಂಡಿಗಳಲ್ಲಿ ವ್ಯಾಪಾರ ಮಾಡುತ್ತಾರೆ. ಆದರೆ, ಪಂಜಾಬ್ ಹರಿಯಾಣದಲ್ಲಿ ಎಲ್ಲವನ್ನೂ ಮಂಡಿಯಲ್ಲೇ ವ್ಯಾಪಾರ ಮಾಡಬೇಕು. ಇಂತಹ ಕಾನೂನಿನಿಂದ ಎಲ್ಲಾ ಮಂಡಿಗಳು ಅಳಿಯುತ್ತವೆ ಎಂಬ ಭಯ ಆ ಜನಗಳಲ್ಲಿವೆ. ಅಲ್ಲದೆ ಕಾರ್ಪೊರೇಟ್ ಕಂಪೆನಿಗಳಿಗಳ ಜೊತೆ ಒಪ್ಪಂದ ಮಾಡಿಕೊಂಡು ವ್ಯವಸಾಯ ಮಾಡಬೇಕಾದ ಸ್ಥಿತಿ ಬರುತ್ತದೆ ಎಂಬ ಭಯ ಅವರಲ್ಲಿದೆ. ಹಾಗಾಗಿಯೇ ಅವರಿ ಇಷ್ಟು ತೀವ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ವಿವರಿಸಿದರು.

ಈ ಸಂವಾದದಲ್ಲಿ ಆಂಧ್ರದ ರೈತ ಸ್ವರಾಜ್ಯ ವೇದಿಕೆಯ ಕಿರಣ್ ಕುಮಾರ್, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ್ ಸೇರಿದಂತೆ ಅನೇಕ ತಜ್ಞರು, ಹೋರಾಟಗಾರರು ಭಾಗವಹಿಸಿದ್ದರು.


ಇದನ್ನೂ ಓದಿ: ಬೆಂಗಳೂರು: ದಲಿತ ಮುಖಂಡ ಶ್ರೀನಿವಾಸ್ ಕೊಲೆ – ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...