Homeಕರ್ನಾಟಕವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ? ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು.

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾನೂನುಗಳ ಕುರಿತು ಯಾವುದೇ ವಾಸ್ತವಿಕತೆ ಗೊತ್ತಿಲ್ಲದೆ, ಕೋತಿಯಂತೆ ಮಾತನಾಡುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, “ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ?” ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಬಡಗಲಪುರ ನಾಗೇಂದ್ರ ಮಾತನಾಡಿದರು.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

“ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವ ಭರದಲ್ಲಿ ಕೆಲವರು ರೈತರ ಹೋರಾಟದ ನೈತಿಕ ಶಕ್ತಿಯನ್ನು ಎದುರಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ಈ ಪೈಕಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಬಿಜೆಪಿ ಲೋಕಸಭಾ ಸದಸ್ಯನೂ ಒಬ್ಬ. ಹಾಗಾಗಿ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ದುಷ್ಪರಿಣಾಮ ಕುರಿತು ಜನವರಿ 16 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬಹಿರಂಗ ಸಂವಾದ ಹಮ್ಮಿಕೊಳ್ಳಲಾಗಿದ್ದು, ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವವರು ಈ ಬಹಿರಂಗ ಸಂವಾದದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಈ ಸಂವಾದದಲ್ಲಿ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಸೇರಿದಂತೆ ಪಂಜಾಬ್‌ನ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ತಮಿಳುನಾಡಿನ ತಮಿಳಗ ವ್ಯವಸಾಯಿಗಳ್ ಸಂಘದ ಅಧ್ಯಕ್ಷ ಸೆಲ್ವಮುತ್ತು ಮಾತನಾಡಿ, “ರೈತ ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಬೆಲೆ, ಸೌಕರ್ಯ ಕಲ್ಪಿಸಿ ಕೊಡುವ ಕಾನೂನು ಎಪಿಎಂಸಿಯನ್ನೇ ಬಲಿ ಪಡೆದುಕೊಳ್ಳುವ ದುರುದ್ದೇಶ ಹೊಂದಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಇಲ್ಲಿಯವರೆಗೂ ಕೃಷಿ ಉತ್ಪನ್ನ ಮಾರಾಟ ಸಮಿತಿ ಮೇಲಿನ ಎಲ್ಲ ಕಾರ್ಯಗಳನ್ನು ನಿರ್ವಹಿಸುತ್ತಿತ್ತು. ಆದರೀಗ ಕಾರ್ಪೋರೇಟ್ ಸಂಸ್ಥೆಗಳೂ ಭಾಗಿಯಾಗಿರುವುದರಿಂದ ಎಪಿಎಂಸಿಗಳು ಮುಚ್ಚುವ ಸಂಭವವಿದೆ. ಪ್ರಧಾನಿ, ಹಣಕಾಸು ಸಚಿವರು, ಕೃಷಿ ಸಚಿವರು ಒಟ್ಟಾಗಿ ಈ ಕಾನೂನಿನ ಕುರಿತು ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಿಲ್ಲ. ಈ ಕಾನೂನು ಜಾರಿಗೆ ಬಂದರೆ ಎನೆಲ್ಲಾ ಅನುಕೂಲ ಎಂದು ರೈತರಿಗೆ ತಿಳಿಸಿಲ್ಲ. ಹೇಳಿದ್ದನ್ನಷ್ಟೇ ಮತ್ತೆ ಮತ್ತೆ ಹೇಳುತ್ತಾರೆಯೇ ವಿನಃ ಬೇರೆ ಕೆಲಸ ಮಾಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ…

“ಉತ್ತರ ಭಾರತ ದಕ್ಷಿಣ ಭಾರತದ ಕೃಷಿ ಮಾರುಕಟ್ಟೆಗೂ ಬಹಳಷ್ಟು ವ್ಯತ್ಯಾಸವಿದೆ. ದಕ್ಷಿಣ ಭಾರತದಲ್ಲಿ ಗುತ್ತಿಗೆದಾರರು ತೋಟಗಳಿಗೆ ಬಂದು ಜಾಗವನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಾರೆ. ಹರಿಶಿನ, ನೆಲಗಡಲೆಯನ್ನು ಹರಾಜಿಗೆ ಬಿಟ್ಟು ವ್ಯಾಪಾರ ಮಾಡುತ್ತಾರೆ.
ಉಳಿದ ಬೆಳಗಳನ್ನು ನೇರವಾಗಿ ಮಂಡಿಗಳಲ್ಲಿ ವ್ಯಾಪಾರ ಮಾಡುತ್ತಾರೆ. ಆದರೆ, ಪಂಜಾಬ್ ಹರಿಯಾಣದಲ್ಲಿ ಎಲ್ಲವನ್ನೂ ಮಂಡಿಯಲ್ಲೇ ವ್ಯಾಪಾರ ಮಾಡಬೇಕು. ಇಂತಹ ಕಾನೂನಿನಿಂದ ಎಲ್ಲಾ ಮಂಡಿಗಳು ಅಳಿಯುತ್ತವೆ ಎಂಬ ಭಯ ಆ ಜನಗಳಲ್ಲಿವೆ. ಅಲ್ಲದೆ ಕಾರ್ಪೊರೇಟ್ ಕಂಪೆನಿಗಳಿಗಳ ಜೊತೆ ಒಪ್ಪಂದ ಮಾಡಿಕೊಂಡು ವ್ಯವಸಾಯ ಮಾಡಬೇಕಾದ ಸ್ಥಿತಿ ಬರುತ್ತದೆ ಎಂಬ ಭಯ ಅವರಲ್ಲಿದೆ. ಹಾಗಾಗಿಯೇ ಅವರಿ ಇಷ್ಟು ತೀವ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ವಿವರಿಸಿದರು.

ಈ ಸಂವಾದದಲ್ಲಿ ಆಂಧ್ರದ ರೈತ ಸ್ವರಾಜ್ಯ ವೇದಿಕೆಯ ಕಿರಣ್ ಕುಮಾರ್, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ್ ಸೇರಿದಂತೆ ಅನೇಕ ತಜ್ಞರು, ಹೋರಾಟಗಾರರು ಭಾಗವಹಿಸಿದ್ದರು.


ಇದನ್ನೂ ಓದಿ: ಬೆಂಗಳೂರು: ದಲಿತ ಮುಖಂಡ ಶ್ರೀನಿವಾಸ್ ಕೊಲೆ – ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...