Homeಕರ್ನಾಟಕಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಈ ಹಿಂದೆಯೂ ನಾನು ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ- ಯತ್ನಾಳ್

- Advertisement -
- Advertisement -

“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ನಾನು ಸಚಿವನಾಗದಿರಲು ಆಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, “ನಾನು ಮಂತ್ರಿ ಆಗಬೇಕೆಂದು ಯಡಿಯೂರಪ್ಪ ಹೇಳುವುದಿಲ್ಲ. ಸಚಿವ ಸ್ಥಾನಕ್ಕಾಗಿ ನಾನು ಎಂದೂ ಒತ್ತಾಯಿಸುವುದಿಲ್ಲ. ಈ ಹಿಂದೆಯೂ ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ” ಎಂದು ಹೇಳಿದರು.

“ನನಗೆ ಸಚಿವ ಸ್ಥಾನ ಸಿಗದೇ ಇದ್ದರೂ ತೊಂದರೆಯಿಲ್ಲ. ಆದರೆ, ರಾಜ್ಯದ ಅಭಿವೃದ್ಧಿಯೇ ನನ್ನ ಕನಸು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಿಯಾಧ್ಯಕ್ಷ ಜೆ.ಪಿ.ನಡ್ಡಾ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

“ಕೇಂದ್ರ ಶಿಸ್ತು ಸಮಿತಿ ನನಗೆ ನೋಟಿಸ್ ಕೊಡುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನಾನು ಈವರೆಗೆ ಪಕ್ಷದ ಶಿಸ್ತನ್ನು ಮೀರಿಲ್ಲ. ಇದುವರೆಗೆ ಯಾರೂ ನನಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ” ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದರು.

“ಜನವರಿ 14 ಕ್ಕೆ ಮಕರ ಸಂಕ್ರಮಣ. ಈ ಬಾರಿ ಉತ್ತರಾಯಣ 20 ಅಥವಾ 21ಕ್ಕೆ ಇದೆ. ಉತ್ತರಾಯಣ ಬದಲಾವಣೆಯ ಪರ್ವಕಾಲ. ಹೀಗಾಗಿ, ಸಚಿವ ಸಂಪುಟದಲ್ಲಿ ಬದಲಾವಣೆಯಾಗಬಹುದು, ಪುನಾರಚನೆಯೂ ಆಗಬಹುದು” ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಹುದಿನಗಳಿಂದ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿತ್ತು. ಆದರೆ ಈಗ ಅದಕ್ಕೆ ಕಾಲ ಕೂಡಿಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅದೇ ಸಮಯದಲ್ಲಿ ಒಬ್ಬರು ಸಚಿವರನ್ನು ಸಂಪುಟದಿಂದ ಹೊರಗುಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಭಾನುವಾರ ಬಿ ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಅಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು. ಬಿಜೆಪಿ ಮುಖಂಡ ಅರುಣ್‌ ಸಿಂಗ್ ಕೂಡಾ ಇದ್ದರು.

“ಏಳು ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಇದೇ 13 ರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ. 14 ರಂದು ಸಂಕ್ರಾಂತಿ ಇರುವ ಕಾರಣ 13 ರ ಮಧ್ಯಾಹ್ನವೇ ಪ್ರಮಾಣ ವಚನ ನಡೆಯಲಿದೆ” ಎಂದು ಯಡಿಯೂರಪ್ಪ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷಕ್ಕೆ ವಲಸೆ ಬಂದವರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೆಯೇ ಸಂಪುಟದಿಂದ ಹೊರಗುಳಿಯುವ ಆ ಒಬ್ಬ ಸಚಿವರು ಯಾರೆಂಬುದು ಇನ್ನೂ ಬಹಿರಂಗವಾಗಿಲ್ಲ.


ಇದನ್ನೂ ಓದಿ: ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...