Homeಅಂತರಾಷ್ಟ್ರೀಯಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ - ಅರ್ನಾಲ್ಡ್

- Advertisement -
- Advertisement -

ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕ್ಯಾಪಿಟಲ್‌ ಮೇಲಿನ ದಾಳಿಯನ್ನು ಖ್ಯಾತ ಬಾಡಿ ಬಿಲ್ಡರ್‍, ಟರ್ಮಿನೇಟರ್‍ ಖ್ಯಾತಿಯ ಹಾಲಿವುಡ್ ನಟ ಮತ್ತು ಕ್ಯಾಲಿಫೋರ್ನಿಯದ ಮಾಜಿ ಗವರ್ನರ್ ಅರ್ನಾಲ್ಡ್ ಖಂಡಿಸಿದ್ದು, ಈ ಕೃತ್ಯವನ್ನು ಜರ್ಮನಿಯ ನಾಜಿ ದೌರ್ಜನ್ಯಕ್ಕೆ ಹೋಲಿಸಿದ್ದಾರೆ. ಜೊತೆಗೆ ಈ ಕುರಿತು ತಾವು ಮಾಡಿರುವ ವೀಡಿಯೋದಲ್ಲಿ ಐಕ್ಯತೆಗಾಗಿ ಮನವಿ ಮಾಡಿದ್ದಾರೆ.

ಈ ಕುರಿತ ವೀಡಿಯೋವನ್ನು ಅರ್ನಾಲ್ಡ್ ಟ್ವೀಟ್ ಮಾಡಿದ್ದು, “ಜಗತ್ತಿನಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಈ ವಾರ ಕ್ಯಾಪಿಟಲ್ ಮೇಲೆ ನಡೆದ ದಾಳಿಯ ಕುರಿತು ನನ್ನ ಅಮೆರಿಕದ ಪ್ರಜೆಗಳಿಗೆ ಮತ್ತು ಗೆಳೆಯರಿಗೆ ನನ್ನ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ: ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

1938 ರಲ್ಲಿ ನಾಜಿಗಳು “ಕ್ರಿಸ್ಟಲ್‌ನಚ್ ಅಥವಾ ನೈಟ್ ಆಫ್ ಬ್ರೋಕನ್ ಗ್ಲಾಸ್” ಎಂದು ಕರೆಯಲ್ಪಡುವ ದಾಳಿಯಲ್ಲಿ ಯಹೂದಿ ಒಡೆತನದ ಮಳಿಗೆಗಳ ಕಿಟಕಿಗಳನ್ನು ಒಡೆದಿದ್ದರು. ಈ ದಾಳಿಯನ್ನು ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಮೇಲೆ ಮಾಡಿದ ದಾಳಿಗೆ ಹೋಲಿಸಿದ್ದಾರೆ.

“ಬುಧವಾರ ಅಮೆರಿಕದಲ್ಲಿ ಬ್ರೋಕನ್ ಗ್ಲಾಸ್ ದಿನ” ಎಂದು ಅಮೆರಿಕ ಮತ್ತು ಕ್ಯಾಲಿಫೋರ್ನಿಯ ಧ್ವಜಗಳ ನಡುವೆ ಕುಳಿತು ವೀಡಿಯೋದಲ್ಲಿ ಹೇಳಿದ್ದಾರೆ. ಇದು ಸಾಕಷ್ಟು ವೈರಲ್ ಆಗಿತ್ತು. ಮುಂದುವರಿದು, ತನ್ನ ಬಾಲ್ಯ ಮತ್ತು ತನ್ನ ಕುಟುಂಬದ ಬಗ್ಗೆ ಮತ್ತು ತಾವು ಅನುಭವಿಸಿದ ಕಷ್ಟಗಳನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಇದು ನೋವಿನ ಸಂಗತಿಯಾದ್ದರಿಂದ ಇದುವರೆಗೂ ಸಾರ್ವಜನಿಕವಾಗಿ ಇದನ್ನು ಹಂಚಿಕೊಂಡಿರಲಿಲ್ಲ. ನನ್ನ ತಂದೆ ವಾರದಲ್ಲಿ 2-3 ಬಾರಿ ಕುಡಿದು ಬಂದು ನನ್ನನ್ನು ಮತ್ತು ನನ್ನ ತಾಯಿಯನ್ನು ಹೊಡೆಯುತ್ತಿದ್ದರು. ಹೆದರಿಸುತ್ತಿದ್ದರು. ನನ್ನ ತಂದೆ ಮತ್ತು ನಮ್ಮ ಕೆಲವು ನೆರೆಹೊರೆಯವರನ್ನು ಸುಳ್ಳಿನ ಮೂಲಕ ದಾರಿ ತಪ್ಪಿಸಲಾಗಿತ್ತು. ಇಂತಹ ಸುಳ್ಳುಗಳಿಗೆ ಯಾವಾಗಲೂ ಮುನ್ನಡೆಯಿರುತ್ತದೆ.

ಇಂತಹ ಸುಳ್ಳುಗಳಿಂದಲೇ ಟ್ರಂಪ್‌ ಕೂಡಾ ಜನರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ಆರೋಪಿಸಿದ ಅರ್ನಾಲ್ಡ್‌, “ಅಧ್ಯಕ್ಷ ಟ್ರಂಪ್, ಚುನಾವಣೆಯ ಫಲಿತಾಂಶಗಳನ್ನು ಮತ್ತು ನ್ಯಾಯಯುತವಾಗಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಪ್ರಯತ್ನಿಸಿದರು. ಸುಳ್ಳಿನಿಂದ ಜನರನ್ನು ತಪ್ಪುದಾರಿಗೆಳೆಯುವ ಮೂಲಕ ಅವರು ದೊಂಬಿಯೆಬ್ಬಿಸಲು ಬಯಸಿದರು. ಟ್ರಂಪ್ ಒಬ್ಬ ವಿಫಲ ನಾಯಕ. ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ” ಎಂದು ಹೇಳಿದ್ದಾರೆ.

“ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ. ‘ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್, ನಮ್ಮ ಅಧ್ಯಕ್ಷರಾಗಿರುವ ನಿಮ್ಮ ಯಶಸ್ಸನ್ನು ನಾವು ಬಯಸುತ್ತೇವೆ. ನೀವು ಯಶಸ್ವಿಯಾದರೆ, ನಮ್ಮ ರಾಷ್ಟ್ರವು ಯಶಸ್ವಿಯಾಗುತ್ತದೆ’ ಎಂದು ನಮ್ಮೊಂದಿಗೆ ಸೇರಿ ಹರಸಿ ಎಂದು ಅರ್ನಾಲ್ಡ್‌ ಹೇಳಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಕೊನೆಯದಾಗಿ ಅಮೆರಿಕದ ಸಂವಿಧಾನವನ್ನು ಬದಲಾಯಿಸಬೇಕು ಎಂದು ಭಾವಿಸುವವರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದು, “ನೀವು ಎಂದಿಗೂ ಗೆಲ್ಲುವುದಿಲ್ಲ” ಎಂದು ಹೇಳಿದ್ದಾರೆ.

ಅಮೆರಿಕದ ಚುನಾವಣೆ ಮುಗಿದು, ಜೋ ಬೈಡೆನ್‌ ಗೆಲುವು ಸಾಧಿಸಿದ್ದರೂ ಸಹ ಡೊನಾಲ್ಡ್‌ ಟ್ರಂಪ್‌ ತಮ್ಮ ಸೋಲನ್ನು ಒಪ್ಪಿಕೊಂಡಿಲ್ಲ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲಿನಿಂದಲೂ ಆರೋಪಿಸುತ್ತಲೇ ಇದ್ದಾರೆ. ಇದರ ಭಾಗವಾಗಿ ಟ್ರಂಪ್‌ ಬೆಂಬಲಿಗರು ಇತ್ತೀಚೆಗೆ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇಲ್ಲಿ ಭಾರತದ ಧ್ವಜವನ್ನೂ ಬಳಸಲಾಗಿತ್ತು. ಇದಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಟ್ರಂಪ್‌ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಅವರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ.


ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...