Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...