Homeಕರ್ನಾಟಕಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ - ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ...

ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

- Advertisement -
- Advertisement -

ಕರ್ನಾಟಕದಲ್ಲಿ ವಿವಾದಾತ್ಮಕ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದ ನಂತರ, ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕೆ ರಾಜ್ಯದಲ್ಲಿ ದಾಖಲಾದ ಮೊದಲ ಪ್ರಕರಣದ ಮೇಲೆ ಹಲವಾರು ಸಂಶಯಗಳೆದ್ದಿವೆ. ಹೊಸ ಕಾಯಿದೆಯ ಅನ್ವಯ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಅಲ್ಲದೆ ಜಾನುವಾರು ಸಾಗಾಟಗಾರನ ಮೇಲೆ ಶೃಂಗೇರಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದಾವಣೆಗೆರೆಯ ಆಬಿದ್ ಅಲಿ (45) ಹಲವು ವರ್ಷಗಳಿಂದ ಅಧಿಕೃತವಾಗಿ ಜಾನುವಾರು ಸಾಗಾಟ ಮಾಡುವ ವೃತ್ತಿ ಮಾಡುತ್ತಿದ್ದರು. ನೂತನ ಕಾಯ್ದೆಯ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಜನವರಿ 7ರ ಗುರುವಾರದಂದು ರಾಣಿಬೆನ್ನೂರಿನಿಂದ ಮಂಗಳೂರಿಗೆ ಕೆಲವು ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ನಡುವೆ ಶೃಂಗೇರಿಯ ತನಿಕೋಡ್ ಚೆಕ್‌ಪೋಸ್ಟ್‌ ಬಳಿ ಲಾರಿಯನ್ನು ತಡೆಗಟ್ಟಿದ ಗುಂಪೊಂದು ಆಬಿದ್ ಅಲಿಯವರಿಗೆ ಕಬ್ಭಿಣದ ರಾಡ್‌ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಲಾರಿಯಲ್ಲಿದ್ದ ಮತ್ತೊಬ್ಬ ಹಲ್ಲೆಕೋರರ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ನಂತರ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ, ಹಲ್ಲೆಗೊಳಗಾದ ಆಬಿದ್‌ ಅಲಿಯ ಮೇಲೆಯೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

ಹಲ್ಲೆಗೊಳಗಾದ ಆಬಿದ್ ಅಲಿಯನ್ನು ಪ್ರಾಥಮಿಕ ಚಿಕಿತ್ಸೆಗೆ ಶೃಂಗೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾದ ನಂತರ, ಇನ್ನೂ ಹೆಚ್ಚಿನ ಚಿಕಿತ್ಸೆಗೆ ದಾವಣೆಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರದ ಎಲ್ಲಾ ಅನುಮತಿಗಳನ್ನು ಪಡೆದೆ ತಾನು ಜಾನುವಾರು ಸಾಗಾಟ ಮಾಡಿದ್ದೇನೆ ಅಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾಡನಾಡಿದ ಆಬಿದ್ ಅಲಿ, “ನೂತನ ಕಾನೂನಿನ ಪ್ರಕಾರ ಸರ್ಕಾರದ ಪರವಾನಿಗೆ ಮತ್ತು ಪಶುವೈದ್ಯರ ಅನುಮತಿ ಪತ್ರ ಪಡೆದು ನಾನು ಜಾನುವಾರು ಸಾಗಣೆ ಮಾಡುತ್ತಿದ್ದೆ. ಹೀಗಿರುವಾಗ ನನ್ನ ಮೇಲೆಯೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್‌ ಇಲಾಖೆ ಸೂಕ್ತ ತನಿಖೆ ನಡೆಸಿ ನನ್ನ ಮೇಲೆ ಹಾಕಿರುವ ಪ್ರಕರಣವವನ್ನು ಹಿಂಪಡೆಯಬೇಕು. ಅಲ್ಲದೆ ನನ್ನ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ಆಬಿದ್ ಅಲಿಗೆ ಹಲ್ಲೆ ಮಾಡಿದ್ದಲ್ಲದೆ ಅವರ ಎರಡು ಮೊಬೈಲ್, 22 ಸಾವಿರ ರೂಗಳಷ್ಟು ಹಣವನ್ನು ದೋಚಲಾಗಿದೆ. ಜೊತೆಗೆ ವಾಹನದಲ್ಲಿದ್ದ ಅವರ ಅಣ್ಣನ ಫೋನ್ ನಂಬರ್‌ಗಳನ್ನು ಪಡೆದು ಅವರಿಗೂ ಜೀವ ಬೆದರಿಕೆ ಹಾಕಲಾಗಿದೆ. ಆಬಿದ್ ಅಲಿಯವರಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ನಾಲ್ಕು ಜನರ ಮೇಲೆ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಇದುವರೆಗೂ ಅವರನ್ನು ಬಂಧಿಸಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಗೋಹತ್ಯೆ ಕಾನೂನಿನ ಕಾರಣಕ್ಕೆ ಈ ಪ್ರಕರಣವು ಕರ್ನಾಟಕದಾದ್ಯಂತ ಸುದ್ದಿಯಾಗಿತ್ತು. ಹೊಸ ಕಾಯ್ದೆಯಡಿ ರಾಜ್ಯದಲ್ಲಿ ಹತ್ಯೆಗಾಗಿ ಗೋವು ಮಾರಾಟ, ಸಾಗಣೆಯ ಮೇಲೆ ನಿರ್ಬಂಧ ವಿಧಿಸಲಾಗಿದೆ. ಆರೋಪ ಸಾಬೀತಾದರೆ 3 ರಿಂದ 7 ವರ್ಷ ಜೈಲು ಶಿಕ್ಷೆ, ಜೊತೆಗೆ 50 ಸಾವಿರದಿಂದ 5 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಇದೆ. ಆದರೆ ವಯಸ್ಸಾದ ಜಾನುವಾರಗಳನ್ನು ಅಧಿಕೃತ ದಾಖಲೆಯೊಂದಿಗೆ ಮಾಂಸಕ್ಕೆ ಬಳಸಬಹುದಾಗಿದೆ.


ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...