Homeಮುಖಪುಟಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

ಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

'ಗೋಡ್ಸೆ ಜ್ಞಾನ ಶಾಲೆ'ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದರು ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ

- Advertisement -
- Advertisement -

ಅಖಿಲ ಭಾರತೀಯ ಹಿಂದೂ ಮಹಾಸಭಾ, ಮಹಾತ್ಮಾ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯ ಹೆಸರಿನಲ್ಲಿ ಗ್ರಂಥಾಲಯವೊಂದನ್ನು ತೆರೆದಿದ್ದು, ಇದನ್ನು ಗೋಡ್ಸೆಯ ಜೀವನ ಮತ್ತು ಸಿದ್ಧಾಂತಕ್ಕೆ ಮೀಸಲಾಗಿರಿಸಿದೆ.

‘ವಿಶ್ವ ಹಿಂದಿ ದಿವಸ್’ ದಿನದ ಅಂಗವಾಗಿ ಗ್ವಾಲಿಯರ್‌ನಲ್ಲಿ ಈ ಗ್ರಂಥಾಲಯವನ್ನು ತೆರೆಯಲಾಗಿದ್ದು, ಗೋಡ್ಸೆ ಜ್ಞಾನ ಶಾಲೆ ಎಂದು ಹೆಸರಿಡಲಾಗಿದೆ.

‘ಗೋಡ್ಸೆ ಜ್ಞಾನ ಶಾಲೆ’ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದರು ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಮಾತನಾಡಿ, “ಗೋಡ್ಸೆ ಎಂಬ ನಿಜವಾದ ರಾಷ್ಟ್ರೀಯತಾವಾದಿಯನ್ನು ಜಗತ್ತಿಗೆ ಪರಿಚಯಿಸಲು ಈ ಗ್ರಂಥಾಲಯವನ್ನು ತೆರೆಯಲಾಗಿದೆ. ಅವಿಭಜಿತ ಭಾರತಕ್ಕಾಗಿ ಅವರು ಹೋರಾಡಿ ಸತ್ತರು. ಗೋಡ್ಸೆಯ ನಿಜವಾದ ರಾಷ್ಟ್ರೀಯತೆಯನ್ನು ಇಂದಿನ ಅಜ್ಞಾನಿ ಯುವಕರಲ್ಲಿ ಹುಟ್ಟುಹಾಕುವುದು ಗ್ರಂಥಾಲಯದ ಉದ್ದೇಶ” ಎಂದು ಹೇಳಿದರು.

“ಜವಾಹರಲಾಲ್ ನೆಹರು ಮತ್ತು ಮೊಹಮ್ಮದ್ ಅಲಿ ಜಿನ್ನಾ ಅವರ ಆಕಾಂಕ್ಷೆಗಳನ್ನು ಈಡೇರಿಸಲು ಭಾರತವನ್ನು ವಿಭಜಿಸಲಾಗಿದೆ. ಇಬ್ಬರೂ ರಾಷ್ಟ್ರವನ್ನು ಆಳಲು ಬಯಸಿದ್ದರು, ಆದರೆ ಗೋಡ್ಸೆ ಅದನ್ನು ವಿರೋಧಿಸಿದರು” ಎಂದು ಭಾರದ್ವಾಜ್ ಹೇಳಿದರು.

ಇದನ್ನೂ ಓದಿ: ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

“ಗಾಂಧಿಯ ಹತ್ಯೆ ಮಾಡಲು ಇಲ್ಲಿ ಸಂಚು ರೂಪಿಸಲಾಗಿದ್ದರಿಂದ ಗ್ವಾಲಿಯರ್‌ನಲ್ಲಿ ಗೋಡ್ಸೆಗೆ ಮೀಸಲಾಗಿರುವ ಗ್ರಂಥಾಲಯದ ನಿರ್ಮಿಸಲು ನಿರ್ಧರಿಸಲಾಗಿದೆ. ಅಲ್ಲಿ ಪಿಸ್ತೂಲ್ ಸಹ ಖರೀದಿಸಿಡಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಂತ್ರಿ ಕಮಲನಾಥ್, “ಬಿಜೆಪಿಯು ಗಾಂಧಿ ಸಿದ್ಧಾಂತದೊಂದಿಗಿದೆಯೋ ಅಥವಾ ಗೋಡ್ಸೆ ಸಿದ್ಧಾಂತದೊಂದೊಗಿದೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು. ಗಾಂಧಿಯ ಹಂತಕರನ್ನು ಬಹಿರಂಗವಾಗಿ ಪೂಜಿಸಲಾಗುತ್ತಿದೆ. ವೀರರೆಂಬಂತೆ ಬಡ್ತಿ ನೀಡಲಾಗುತ್ತಿದೆ. ಆದರೆ ಬಿಜೆಪಿ ಸರ್ಕಾರ ಜಾಣ ಮೌನಕ್ಕೆ ಜಾರಿದೆ. ಇದು ನಾಚಿಕೆಗೇಡಿನ ವಿಷಯ. ಬಿಜೆಪಿ ಗಾಂಧಿಯ ಸಿದ್ಧಾಂತದೊಟ್ಟಿಗಿದ್ದರೆ, ಈ ಕೂಡಲೇ ಹಿಂದೂ ಮಹಾಸಭಾದ ಈ ಕೃತ್ಯವನ್ನು ತಡೆಗಟ್ಟಬೇಕು. ಇಲ್ಲದಿದ್ದರೆ ಬಿಜೆಪಿಯು ಗೋಡ್ಸೆ ಮತ್ತು ಅವನ ಸಿದ್ಧಾಂತವನ್ನು ಮುಕ್ತವಾಗಿ ರಕ್ಷಿಸುತ್ತಿದೆ ಎಂದು ಒಪ್ಪಿಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಮಹಾಸಭಾದ ಗ್ವಾಲಿಯರ್ ಕಚೇರಿಯಲ್ಲಿ ಗೋಡ್ಸೆಗೆ ದೇವಾಲಯವನ್ನು ಸ್ಥಾಪಿಸಲಾಗಿತ್ತು. ಕಾಂಗ್ರೆಸ್ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ ನಂತರ ಇದನ್ನು ತೆಗೆದುಹಾಕಲಾಗಿತ್ತು.


ಇದನ್ನೂ ಓದಿ: ಗೋಡ್ಸೆ ಮತ್ತು ಮೋದಿಯವರು ಒಂದೇ ಸಿದ್ಧಾಂತವನ್ನು ನಂಬುತ್ತಾರೆ : ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಾಂಧಿ ಹಂತಕನನ್ನು ಅವರು ಅಂತ ಏಕೆ ಬರೆಯುವಿರಿ ಅವನು ಅಂತ ಬರೆಯಬೇಕು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...