Homeಮುಖಪುಟಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

ಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

- Advertisement -
- Advertisement -

ಏನಾಯ್ತು ನಿಮ್ಮ ಭರವಸೆ?
ಪ್ರಧಾನಿ ಮೋದಿ, ಗಂಗಾ ನದಿ ಪುನರುಜ್ಜೀವನಗೊಳಿಸುವ ನಿಮ್ಮ ಭರವಸೆ ಏನಾಯ್ತು?
ಪ್ರಧಾನಿ ಮೋದಿ ಈಗ ಮತ್ತೆ ವಾರಣಾಸಿಯಲ್ಲಿ ಮರುಆಯ್ಕೆ ಬಯಸಿದ್ದಾರೆ. 2014ರಲ್ಲಿ ಗಂಗಾ ಸ್ವಚ್ಛಗೊಳಿಸುವ ಭರವಸೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಚುನಾವಣೆ ಪ್ರಚಾರ ಮತ್ತು ಗೆಲುವಿನ ನಂತರ ಅವರು, ‘ ವಾರಣಾಸಿಗೆ ನಾನಾಗಿಯೇ ಬರಲಿಲ್ಲ. ಗಂಗಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ’ ಎಂದು ಭಾವನಾತ್ಮಕವಾಗಿ ಮಾತಾಡಿದ್ದರು.

ಗಂಗಾ ನದಿಯ ಪುನರುಜ್ಜಿವನಕ್ಕಾಗಿ 5 ವರ್ಷಗಳ ‘ಗಂಗಾ ನಮಾಮಿ ಮಿಷನ್’ ಎಂಬ ಯೋಜನೆಯನ್ನು ಮೋದಿ ಆರಂಭಿಸಿದರು. 2014-15ರಿಂದ 2018-19ರ ಅವಧಿಗೆ ಈ ಯೋಜನೆಗೆ 20,000 ಕೋಟಿ ರೂಪಾಯಿಗಳ ಬಜೆಟ್ ಘೋಷಿಸಲಾಯಿತು. ಈಗ ಡೆಡ್‍ಲೈನ್ ಮುಗಿಯುತ್ತ ಬಂದಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು, ‘ಏನಾಯ್ತು ನಿಮ್ಮ ಭರವಸೆ?’ ಎಂದು ಪ್ರಶ್ನಿಸುತ್ತಿದ್ದಾರೆ.

ಗಂಗಾ ಉಳಿವಿಗೆ ಹೋರಾಟ ನಡೆಸಿದ್ದ ಪ್ರೊ. ಜೆ.ಬಿ, ಅಗರವಾಲ್ ಅವರ ಶಿಷ್ಯ 26 ವರ್ಷದ ಬ್ರಹ್ಮಾಚಾರ್ಯ ಆತ್ಮಬೋಧಾನಂದ ಸ್ವಾಮಿಯವರು, ಗಂಗೆಯ ನಿರ್ನಾಮದ ವಿರುದ್ಧ 155 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

‘ಮೋದಿ ಸರ್ಕಾರವು ಪನಾಮಾ-ಸೂಯೆಜ್ ಕಾಲುವೆ ಮಾದರಿಯನ್ನು ಇಲ್ಲಿ ಅಳವಡಿಸಲು ಯತ್ನಿಸುತ್ತಿದೆ. ನದಿಪಾತ್ರದಲ್ಲಿ 5 ವರ್ಷಗಳಲ್ಲಿ ಗಣಿಗಾರಿಕೆ ಗರಿಷ್ಠ ಮಟ್ಟವನ್ನು ತಲುಪಿದೆ’ ಎಂದು ಆತ್ಮಬೋಧಾನಂದ ಟೀಕಿಸುತ್ತಾರೆ.
ಇದರ ಕುರಿತಾಗಿ ‘ದಿ ಕ್ವಿಂಟ್’ ಒಂದು ವಿಡಿಯೋ ವರದಿ ಮಾಡಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು ಕಿಡಿಕಾರಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ:
ವಿಡಿಯೊ

ಗಂಗಾಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಳು ಎಂದು 5 ವರ್ಷದ ಹಿಂದೆ ಹೇಳಿದ ಮೋದಿ, ಗಂಗೆಯಿಂದ ನಾನು ಪಡೆಯುವುದೇನೂ ಇಲ್ಲ…ಕೊಡುವುದಷ್ಟೇ ಅದೆ ಇದೆ ಎನ್ನುತ್ತ ಮೋದಿ ಗಂಗಾ ಪುನಶ್ಚೇತನದ ಮಾತು ಆಡಿದ್ದರು. ಈ 5 ವರ್ಷಗಳಲ್ಲಿ ಗಂಗೆಗೆ ಈ ಹಿಂದೆ ಎಂದೂ ಆಗದಷ್ಟು ಹಿಂಸೆ, ಕಿರುಕುಳ ನೀಡಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು. ಒಂದು ಹೆಡ್ ಆದರೆ ಇನ್ನೊಂದು ಟೇಲ್. ಇವರೆಲ್ಲ ಗಂಗೆ ಹೆಸರಲ್ಲಿ ಅಧಿಕಾರ ಗಳಿಸುತ್ತಾರೆ, ನಂತರ ಗಂಗೆಯನ್ನೇ ಮಾರಲು ಶುರು ಮಾಡುತ್ತಾರೆ…
– ಬ್ರಹ್ಮಾಚಾರ್ಯ ಆತ್ಮಬೋಧಾನಂದ, ಗಂಗಾ ಆ್ಯಕ್ಟಿವಿಸ್ಟ್ ಮತ್ತು ಸ್ವಾಮೀಜಿ

ಅವರು (ಬಿಜೆಪಿ)ಹೀಗೆಲ್ಲ ಜನರ ನಂಬಿಕೆ ಜೊತೆ ಆಟವಾಡಿದರೆ ಮತ್ತೆ ಜನ ಅವರಿಗೆ ವೋಟ್ ಹಾಕಲ್ಲ. ಗಂಗಾ ಪುನಶ್ಚೇತನದ ಬಗ್ಗೆ ಸುಳ್ಳು ಭರವಸೆ ನೀಡುವ ಬದಲು, ಸೀರಿಯಸ್ ಆಗಿ ಕೆಲಸ ಮಾಡಲಿ. ಇದು ಧಾರ್ಮಿಕ ವಿಷಯ, ಜನರ ನಂಬಿಕೆಯ ಭಾವನಾತ್ಮ ವಿಷಯ….. – ರಾಮೇಶ್ವರ್ ಗೌರ್
-ಗಂಗಾ ಆ್ಯಕ್ಟಿವಿಸ್ಟ್

ಗಂಗಾನದಿಯಲ್ಲಿ ಕಲ್ಲು, ಬಂಡೆಗಳಿಗಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ನದಿಗಳ ನೈಸರ್ಗಿಕ ನಿಯಮದ ಪ್ರಕಾರ, ಯಾವುದನ್ನು ಮರುಸೃಷ್ಟಿಸಲು ಸಾಧ್ಯವೋ ಅಂಥವನ್ನಷ್ಟೇ ಗಣಿಗಾರಿಕೆ ಮಾಡಬೇಕು…ಕಲ್ಲು, ಬಂಡೆಗಳನ್ನು ಸೃಷ್ಟಿಸಲಾಗಲ್ಲ…. ನಲವತ್ತು ಅಡಿ ಆಳದ ಗುಂಡಿಗಳನ್ನು ತೆಗೆಯಲಾಗಿದೆ…ಜನ ಇಲ್ಲಿ ಮುಳುಗಿ ಸಾಯೂತ್ತಲೂ ಇದ್ದಾರೆ….
ಅವರು ಬರೀ ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ. ಅವರು ಅಭಿವೃದ್ಧಿಗಾಗಿ ಕಲ್ಲು, ಜಲ್ಲಿ, ಮರಳನ್ನು ಬೇರೆ ಎಲ್ಲಿಂದಲಾದರೂ ಪಡೆಯಬಹುದು. ಆದರೆ ಬೇರೆಲ್ಲೂ ಗಂಗಾನದಿಯನ್ನು ಪಡೆಯಲು ಸಾಧ್ಯವಿಲ್ಲ… – ಸ್ವಾಮಿ ಶಿವಾನಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...