Homeಮುಖಪುಟಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಇಂದು ಸುಪ್ರೀಂನಲ್ಲಿ ನಡೆದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಹೋರಾಟ ನಿರತ ರೈತರು, ’ನಮ್ಮನ್ನು ದೆಹಲಿಯಿಂದ ಹೊರಹಾಕುವ ಪ್ರಯತ್ನವಿದು. ಕಾನೂನು ಜಾರಿಗೆ ತಾತ್ಕಲಿಕ ತಡೆ ತರುವುದಲ್ಲ, ಕಾನೂನು ಹಿಂಪಡೆಯಬೇಕೆಂಬುದೇ ನಮ್ಮ ಆಗ್ರಹ’ ಎಂದಿದ್ದಾರೆ

- Advertisement -
- Advertisement -

ವಿವಾದಾತ್ಮಕ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತು. ಸುಪ್ರೀಂನಲ್ಲಿ ನಡೆದ ವಾದ-ವಿವಾದ ಹೀಗಿತ್ತು.

ಕೇಂದ್ರ ಸರ್ಕಾರ ರೈತ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ ಸಮಾಲೋಚನಾ ಪ್ರಕ್ರಿಯೆ ಅನುಸರಿಸಿದೆಯೋ ಗೊತ್ತಿಲ್ಲ. ಆದರೆ ಈ ಕಾನೂನಗಳ ವಿರುದ್ಧ ಹಲವು ರಾಜ್ಯಗಳ ರೈತರು ಬಂಡೆದಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಸರ್ಕಾರದ ಪರ ವಕೀಲ, ಅಟರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ಹಿಂದಿನ ಸರ್ಕಾರ ತಜ್ಞ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಕಾನೂನುಗಳನ್ನು ರೂಪಿಸಲಾಗಿದೆ. ಎಪಿಎಂಪಿ ವ್ಯವಸ್ಥೆಯಲ್ಲಿ ನಿರ್ಬಂಧಗಳನ್ನು ತೆಗೆದು ಹಾಕಲು ಮತ್ತು ನೇರ ಮಾರುಕಟ್ಟೆಗೆ ಮುಕ್ತ ಅವಕಾಶ ಕಲ್ಪಿಸುವಂತೆ ಸಮಿತಿಗಳು ಸಲಹೆ ನೀಡಿದ್ದವು ಎಂದು ಸಮಜಾಯಿಷಿ ನೀಡಿದರು.

“ನಮ್ಮ ಉದ್ದೇಶ ಸ್ಪಷ್ಟ. ಸಮಸ್ಯೆಗೆ ಸೌಹಾರ್ದಯುತವಾದ ಪರಿಹಾರ ಕಂಡುಕೊಳ್ಳಬೇಕು. ಇದೇ ಕಾರಣಕ್ಕೆ ಕಳೆದ ಬಾರಿಯೇ ಈ ಕಾನೂನುಗಳಿಗೆ ತಾತ್ಕಲಿಕವಾಗಿ ತಡೆಯಬಾರದೇಕೆ ಎಂದು ಕೇಳಿದ್ದೆವು. ಆದರೆ ನೀವು ಮತ್ತೆ ಮತ್ತೆ ಸಮಯಾವಕಾಶ ಕೇಳುತ್ತಿದ್ದೀರಿ” ಎಂದು ನ್ಯಾಯಪೀಠ ಹೇಳಿತು.

ನಿಮಗೆ ಕೊಂಚವಾದರೂ ಹೊಣೆಗಾರಿಕೆ ಪ್ರಜ್ಞೆ ಎಂಬುದಿದ್ದರೆ ಮತ್ತು ನೀವು ಕಾನೂನುಗಳ ಜಾರಿಯನ್ನು ತಡೆಯುವುದಾಗಿ ನೀವು ಹೇಳುವಿರಾದರೆ, ನಾವು ಸಮಿತಿಯೊಂದನ್ನು ಈ ವಿಷಯ ನಿರ್ಧರಿಸುವುದಕ್ಕೆ ರಚಿಸುತ್ತೇವೆ. ಈ ಕಾನೂನುಗಳು ಜಾರಿಯಾಗಲೇ ಬೇಕು ಎಂದು ಪಟ್ಟುಹಿಡಿಯುವುದಕ್ಕೆ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾಯಪೀಠ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಾವು ಪರಿಹಾರದ ಭಾಗವಾಗಿದ್ದೇವೆ. ಈ ಕಾನೂನುಗಳು ಪ್ರಗತಿಪರವಾಗಿ ಎಂದು ಹೇಳುವ ಹಲವು ರೈತ ಸಂಘಟನೆಗಳಿವೆ ಎಂದು ಸರ್ಕಾರದ ಪರ ವಕಾಲತ್ತು ನೀಡಿದರು.

‘ಆದರೆ ಇದುವರೆಗೂ ಈ ಕಾನೂನುಗಳು ಉತ್ತಮವಾಗಿವೆ ಎಂದು ಸಮರ್ಥಿಸುವ ಒಂದೇ ಒಂದು ಪಿಟಿಷನ್‌ ಬಂದಿಲ್ಲ’ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ತಿರುಗೇಟು ನೀಡಿತು.

ವಾದ ಮುಂದುವರೆಸಿದ ಸಾಲಿಸಿಟರ್‌ ಜನರಲ್‌, ಕೆಲವು ಗುಂಪುಗಳು ಪ್ರತಿಭಟಿಸಿದವು ಎಂಬ ಕಾರಣಕ್ಕೆ ನಮಗೆ ಲಾಭದಾಯಕವಾಗಿದ್ದ ಕಾನೂನುಗಳನ್ನು ಯಾಕೆ ತಡೆದಿರಿ ಎಂದು ಕೇಳಿದರೆ ಏನು ಮಾಡುವುದು ಎಂಬ ತಕರಾರನ್ನು ನ್ಯಾಯಪೀಠದ ಮುಂದೆ ಇಟ್ಟರು.

ನ್ಯಾಯಪೀಠ, ನಾವು ಇದರಲ್ಲಿ ಭಾಗಿಯಾಗಬಯಸುವುದಿಲ್ಲ. ಇದನ್ನು ಸಮಿತಿ ಚರ್ಚಿಸಲಿ ಎಂದು ಉತ್ತರಿಸಿ, ಕೇಂದ್ರ ಸರ್ಕಾರಕ್ಕೆ ಸಮಿತಿ ನೇಮಿಸಲಾಗದಿದ್ದರೆ, ನಾವೇ ನೇಮಿಸುವುದಾಗಿ ಖಾರವಾಗಿ ಉತ್ತರಿಸಿತು.

ಜನ ಚಳಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಕುರಿತು ನೀವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಬಿದ್ದು ಹೋಗುತ್ತಿವೆ. ಸರ್ಕಾರ ಅನುಚ್ಛೇದಗಳ ಮೇಲೆ ಚರ್ಚೆ ನಡೆಸಲು ಬಯಸುತ್ತಿದೆ. ಆದರೆ ರೈತರು ಕಾಯ್ದೆ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಮಿತಿ ನಿರ್ಣಯದವರೆಗೆ ಕಾಯ್ದೆಗಳ ಜಾರಿಯನ್ನು ತಡೆಯಲು ಸೂಚಿಸುತ್ತೇವೆ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ಹೇಳಿತು.

‘ಆದರೆ, ಒಂದು ವೇಳೆ ಕಾಯ್ದೆ ಜಾರಿಯಾಗುವುದನ್ನು ತಡೆ ಹಿಡಿದರೆ, ಪ್ರತಿಭಟನೆಯನ್ನು ಸ್ಥಳಾಂತರಿಸಬಹುದೆ? ಯಾರಾದರೂ ಈ ಶಾಂತಿ ಕದಡುವ ಪ್ರಯತ್ನ ಮಾಡಬಹುದು ಎಂಬ ಆತಂಕವಿದೆ. ಹಾಗೇನಾದರೂ ಆದರೆ ನಾವೆಲ್ಲರೂ ಅದಕ್ಕೆ ಹೊಣೆಗಾರರಾಗಿರುತ್ತೇವೆ. ನಮ್ಮ ಕೈಗಳಿಗೆ ರಕ್ತ, ಗಾಯಗಳು ಅಂಟಿಕೊಳ್ಳುವುದು ಬೇಡ” ಎಂದು ನ್ಯಾಯಪೀಠ ಹೇಳಿತು.

ಎರಡೂ ಗಂಟೆಗಳ ಕಾಲ ವಾದ ವಿವಾದ ಬಳಿಕ ಸಮಿತಿ ರಚನೆಗೆ ಸೂಚಿಸಿದ್ದು, ಸಮಿತಿ ನಿರ್ಧಾರಗಳ ಆಧಾರದ ಮೇಲೆ ತೀರ್ಪು ತೆಗೆದುಕೊಳ್ಳಲಾಗುವುದು ಎಂದು ಬೋಬ್ಡೆ, ಎ ಎಸ್‌ ಬೋಪಣ್ಣ ಮತ್ತು ವಿ ರಾಮಾಸುಬ್ರಮಣ್ಯನ್‌ ಒಳಗೊಂಡ ಪೀಠ ತಿಳಿಸಿತು.

ಇನ್ನೊಂದೆಡೆ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೆಹಲಿಯಲ್ಲಿನ ಧರಣಿ ನಿರತ ರೈತರು ಕಾಯ್ದೆಗಳಿಗೆ ತಾತ್ಕಾಲಿಕ ತಡೆ ತಂದಿದ್ದಾರೆ. ಆದರೆ ಕರಾಳ ಕೃಷಿ ಕಾಯ್ದೆಗಳು ಸಂಪೂರ್ಣ ವಾಪಸ್ ಆಗಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ತಾತ್ಕಾಲಿಕ ತಡೆಯ ಮುಖಾಂತರ ರೈತರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಹುನ್ನಾರವಿದೆಯೆಂಬ ಅನುಮಾನವಿದೆ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಹೋರಾಟ ಮುಂದುವರೆಸುತ್ತೇವೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...