Homeಮುಖಪುಟಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಇಂದು ಸುಪ್ರೀಂನಲ್ಲಿ ನಡೆದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಹೋರಾಟ ನಿರತ ರೈತರು, ’ನಮ್ಮನ್ನು ದೆಹಲಿಯಿಂದ ಹೊರಹಾಕುವ ಪ್ರಯತ್ನವಿದು. ಕಾನೂನು ಜಾರಿಗೆ ತಾತ್ಕಲಿಕ ತಡೆ ತರುವುದಲ್ಲ, ಕಾನೂನು ಹಿಂಪಡೆಯಬೇಕೆಂಬುದೇ ನಮ್ಮ ಆಗ್ರಹ’ ಎಂದಿದ್ದಾರೆ

- Advertisement -
- Advertisement -

ವಿವಾದಾತ್ಮಕ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತು. ಸುಪ್ರೀಂನಲ್ಲಿ ನಡೆದ ವಾದ-ವಿವಾದ ಹೀಗಿತ್ತು.

ಕೇಂದ್ರ ಸರ್ಕಾರ ರೈತ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ ಸಮಾಲೋಚನಾ ಪ್ರಕ್ರಿಯೆ ಅನುಸರಿಸಿದೆಯೋ ಗೊತ್ತಿಲ್ಲ. ಆದರೆ ಈ ಕಾನೂನಗಳ ವಿರುದ್ಧ ಹಲವು ರಾಜ್ಯಗಳ ರೈತರು ಬಂಡೆದಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಸರ್ಕಾರದ ಪರ ವಕೀಲ, ಅಟರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ಹಿಂದಿನ ಸರ್ಕಾರ ತಜ್ಞ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಕಾನೂನುಗಳನ್ನು ರೂಪಿಸಲಾಗಿದೆ. ಎಪಿಎಂಪಿ ವ್ಯವಸ್ಥೆಯಲ್ಲಿ ನಿರ್ಬಂಧಗಳನ್ನು ತೆಗೆದು ಹಾಕಲು ಮತ್ತು ನೇರ ಮಾರುಕಟ್ಟೆಗೆ ಮುಕ್ತ ಅವಕಾಶ ಕಲ್ಪಿಸುವಂತೆ ಸಮಿತಿಗಳು ಸಲಹೆ ನೀಡಿದ್ದವು ಎಂದು ಸಮಜಾಯಿಷಿ ನೀಡಿದರು.

“ನಮ್ಮ ಉದ್ದೇಶ ಸ್ಪಷ್ಟ. ಸಮಸ್ಯೆಗೆ ಸೌಹಾರ್ದಯುತವಾದ ಪರಿಹಾರ ಕಂಡುಕೊಳ್ಳಬೇಕು. ಇದೇ ಕಾರಣಕ್ಕೆ ಕಳೆದ ಬಾರಿಯೇ ಈ ಕಾನೂನುಗಳಿಗೆ ತಾತ್ಕಲಿಕವಾಗಿ ತಡೆಯಬಾರದೇಕೆ ಎಂದು ಕೇಳಿದ್ದೆವು. ಆದರೆ ನೀವು ಮತ್ತೆ ಮತ್ತೆ ಸಮಯಾವಕಾಶ ಕೇಳುತ್ತಿದ್ದೀರಿ” ಎಂದು ನ್ಯಾಯಪೀಠ ಹೇಳಿತು.

ನಿಮಗೆ ಕೊಂಚವಾದರೂ ಹೊಣೆಗಾರಿಕೆ ಪ್ರಜ್ಞೆ ಎಂಬುದಿದ್ದರೆ ಮತ್ತು ನೀವು ಕಾನೂನುಗಳ ಜಾರಿಯನ್ನು ತಡೆಯುವುದಾಗಿ ನೀವು ಹೇಳುವಿರಾದರೆ, ನಾವು ಸಮಿತಿಯೊಂದನ್ನು ಈ ವಿಷಯ ನಿರ್ಧರಿಸುವುದಕ್ಕೆ ರಚಿಸುತ್ತೇವೆ. ಈ ಕಾನೂನುಗಳು ಜಾರಿಯಾಗಲೇ ಬೇಕು ಎಂದು ಪಟ್ಟುಹಿಡಿಯುವುದಕ್ಕೆ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾಯಪೀಠ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಾವು ಪರಿಹಾರದ ಭಾಗವಾಗಿದ್ದೇವೆ. ಈ ಕಾನೂನುಗಳು ಪ್ರಗತಿಪರವಾಗಿ ಎಂದು ಹೇಳುವ ಹಲವು ರೈತ ಸಂಘಟನೆಗಳಿವೆ ಎಂದು ಸರ್ಕಾರದ ಪರ ವಕಾಲತ್ತು ನೀಡಿದರು.

‘ಆದರೆ ಇದುವರೆಗೂ ಈ ಕಾನೂನುಗಳು ಉತ್ತಮವಾಗಿವೆ ಎಂದು ಸಮರ್ಥಿಸುವ ಒಂದೇ ಒಂದು ಪಿಟಿಷನ್‌ ಬಂದಿಲ್ಲ’ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ತಿರುಗೇಟು ನೀಡಿತು.

ವಾದ ಮುಂದುವರೆಸಿದ ಸಾಲಿಸಿಟರ್‌ ಜನರಲ್‌, ಕೆಲವು ಗುಂಪುಗಳು ಪ್ರತಿಭಟಿಸಿದವು ಎಂಬ ಕಾರಣಕ್ಕೆ ನಮಗೆ ಲಾಭದಾಯಕವಾಗಿದ್ದ ಕಾನೂನುಗಳನ್ನು ಯಾಕೆ ತಡೆದಿರಿ ಎಂದು ಕೇಳಿದರೆ ಏನು ಮಾಡುವುದು ಎಂಬ ತಕರಾರನ್ನು ನ್ಯಾಯಪೀಠದ ಮುಂದೆ ಇಟ್ಟರು.

ನ್ಯಾಯಪೀಠ, ನಾವು ಇದರಲ್ಲಿ ಭಾಗಿಯಾಗಬಯಸುವುದಿಲ್ಲ. ಇದನ್ನು ಸಮಿತಿ ಚರ್ಚಿಸಲಿ ಎಂದು ಉತ್ತರಿಸಿ, ಕೇಂದ್ರ ಸರ್ಕಾರಕ್ಕೆ ಸಮಿತಿ ನೇಮಿಸಲಾಗದಿದ್ದರೆ, ನಾವೇ ನೇಮಿಸುವುದಾಗಿ ಖಾರವಾಗಿ ಉತ್ತರಿಸಿತು.

ಜನ ಚಳಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಕುರಿತು ನೀವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಬಿದ್ದು ಹೋಗುತ್ತಿವೆ. ಸರ್ಕಾರ ಅನುಚ್ಛೇದಗಳ ಮೇಲೆ ಚರ್ಚೆ ನಡೆಸಲು ಬಯಸುತ್ತಿದೆ. ಆದರೆ ರೈತರು ಕಾಯ್ದೆ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಮಿತಿ ನಿರ್ಣಯದವರೆಗೆ ಕಾಯ್ದೆಗಳ ಜಾರಿಯನ್ನು ತಡೆಯಲು ಸೂಚಿಸುತ್ತೇವೆ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ಹೇಳಿತು.

‘ಆದರೆ, ಒಂದು ವೇಳೆ ಕಾಯ್ದೆ ಜಾರಿಯಾಗುವುದನ್ನು ತಡೆ ಹಿಡಿದರೆ, ಪ್ರತಿಭಟನೆಯನ್ನು ಸ್ಥಳಾಂತರಿಸಬಹುದೆ? ಯಾರಾದರೂ ಈ ಶಾಂತಿ ಕದಡುವ ಪ್ರಯತ್ನ ಮಾಡಬಹುದು ಎಂಬ ಆತಂಕವಿದೆ. ಹಾಗೇನಾದರೂ ಆದರೆ ನಾವೆಲ್ಲರೂ ಅದಕ್ಕೆ ಹೊಣೆಗಾರರಾಗಿರುತ್ತೇವೆ. ನಮ್ಮ ಕೈಗಳಿಗೆ ರಕ್ತ, ಗಾಯಗಳು ಅಂಟಿಕೊಳ್ಳುವುದು ಬೇಡ” ಎಂದು ನ್ಯಾಯಪೀಠ ಹೇಳಿತು.

ಎರಡೂ ಗಂಟೆಗಳ ಕಾಲ ವಾದ ವಿವಾದ ಬಳಿಕ ಸಮಿತಿ ರಚನೆಗೆ ಸೂಚಿಸಿದ್ದು, ಸಮಿತಿ ನಿರ್ಧಾರಗಳ ಆಧಾರದ ಮೇಲೆ ತೀರ್ಪು ತೆಗೆದುಕೊಳ್ಳಲಾಗುವುದು ಎಂದು ಬೋಬ್ಡೆ, ಎ ಎಸ್‌ ಬೋಪಣ್ಣ ಮತ್ತು ವಿ ರಾಮಾಸುಬ್ರಮಣ್ಯನ್‌ ಒಳಗೊಂಡ ಪೀಠ ತಿಳಿಸಿತು.

ಇನ್ನೊಂದೆಡೆ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೆಹಲಿಯಲ್ಲಿನ ಧರಣಿ ನಿರತ ರೈತರು ಕಾಯ್ದೆಗಳಿಗೆ ತಾತ್ಕಾಲಿಕ ತಡೆ ತಂದಿದ್ದಾರೆ. ಆದರೆ ಕರಾಳ ಕೃಷಿ ಕಾಯ್ದೆಗಳು ಸಂಪೂರ್ಣ ವಾಪಸ್ ಆಗಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ತಾತ್ಕಾಲಿಕ ತಡೆಯ ಮುಖಾಂತರ ರೈತರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಹುನ್ನಾರವಿದೆಯೆಂಬ ಅನುಮಾನವಿದೆ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಹೋರಾಟ ಮುಂದುವರೆಸುತ್ತೇವೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...