Homeಮುಖಪುಟಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಡಿ 20.48 ಲಕ್ಷ ಅನರ್ಹ ಫಲಾನುಭವಿಗಳಿಗೆ 1,364 ಕೋಟಿ ರೂಪಾಯಿಗಳನ್ನು ಪಾವತಿ ಮಾಡಿದೆ ಎಂದು ಮಾಹಿತಿ ಹಕ್ಕು ಅರ್ಜಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಕೃಷಿ ಸಚಿವಾಲಯ ಉತ್ತರಿಸಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ಐದು ಎಕರೆಯೊಳಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ನೀಡುತ್ತಾ ಬರಲಾಗುತ್ತಿದೆ.

ಆರ್.ಟಿ.ಐ ಅರ್ಜಿಗೆ ಉತ್ತರಿಸಿರುವ ಕೇಂದ್ರ ಕೃಷಿ ಸಚಿವಾಲಯವು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಅನರ್ಹ ರೈತರು ಮತ್ತು ಆದಾಯ ತೆರಿಗೆ ಪಾವತಿಸುವವ ರೈತರಿಗೆ ಪ್ರೋತ್ಸಾಹಧನವನ್ನು ನೀಡಿದ್ದು ಇವರು ಎರಡು ವರ್ಗದ ಅನರ್ಹ ಫಲಾನುಭವಿಗಳು ಎಂಬುದನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಸರ್ಕಾರದಿಂದ ಮಾಹಿತಿ ಪಡೆದಿರುವ ಕಾಮನ್ವೆಲ್ತ್ ಮಾನವ ಹಕ್ಕುಗಳ ಉಪಕ್ರಮದ ಆರ್.ಟಿ.ಐ. ಅರ್ಜಿದಾರ ವೆಂಕಟೇಶ್ ನಾಯಕ್ “ಈ ಅನರ್ಹ ರೈತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಆದಾಯ ತೆರಿಗೆ ಪಾವತಿದಾರರ ವರ್ಗಕ್ಕೆ ಸೇರಿದವರು. ಉಳಿದ 44.41ರಷ್ಟು ರೈತರು ಅನರ್ಹ ರೈತ ವರ್ಗಕ್ಕೆ ಸೇರಿದವರು ಎಂದು ಹೇಳಿದ್ದಾರೆಂದು ವರದಿ ತಿಳಿಸಿದೆ.

ಮಾಧ್ಯಮ ವರದಿಗಳ ಪ್ರಕಾರ ಅನರ್ಹ ರೈತರಿಗೆ ವರ್ಗಾಯಿಸಲಾದ ಇಷ್ಟೊಂದು ಪ್ರಮಾಣದ ಹಣವನ್ನು ವಾಪಸ್ ಪಡೆಯಲು ಕ್ರಮಗಳನ್ನು ಆರಂಭಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ ಎಂದು ದಿವೈರ್.ಇನ್ ವರದಿಯಲ್ಲಿ ಉಲ್ಲೇಖಿಸಿದೆ.

ಆರ್.ಟಿ.ಐ ಕಾಯ್ದೆ 2005ರ ಅಡಿಯಲ್ಲಿ ದತ್ತಾಂಶ ಪಡೆದಿದ್ದು 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ ಆರಂಭಗೊಂಡಾಗಿನಿಂದ ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ. ಸರ್ಕಾರ ನೀಡಿದ ದತ್ತಾಂಶದಿಂದ ಹಣ ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ ಎಂಬ ಅಂಶ ಬೆಳಕಿಗೆ ಬರುತ್ತದೆ.

ಪಂಜಾಬ್, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಅನರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದುನ್ನು ವರದಿ ಬೊಟ್ಟು ಮಾಡಿದೆ. ದೇಶಾದ್ಯಂತ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಶೇ.23.16ರಷ್ಟು (4.74ಲಕ್ಷ) ಪಂಜಾಬ್ ರಾಜ್ಯದ ಅನರ್ಹ ರೈತರು ಹಣ ಪಡೆದಿದ್ದು ಮೊದಲ ಸ್ಥಾನದಲ್ಲಿದೆ. ಅಸ್ಸಾಂ 16.87ರಷ್ಟು (3.45) ಮಂದಿ, ಮಹಾರಾಷ್ಟ್ರ ಶೇ.13.99ರಷ್ಟು ಅನರ್ಹ ವ್ಯಕ್ತಿಗಳು ಹಣ ಪಡೆದಿದ್ದಾರೆ ಎಂದು ಆರ್.ಟಿ.ಐ. ಅರ್ಜಿಯಿಂದ ಬಹಿರಂಗಗೊಂಡಿದೆ. ಈ ಮೂರು ರಾಜ್ಯಗಳು ಅರ್ಧಕ್ಕಿಂತ ಹೆಚ್ಚು ಅಂದರೆ ಶೇ.54.03ರಷ್ಟು ಪಾಲನ್ನು ಪಡೆದಿವೆ. ಗುಜರಾತ್ ಶೇ.8.05ರಷ್ಟು ಅಂದರೆ 1.64 ಲಕ್ಷ, ಉತ್ತರಪ್ರದೇಶ ಶೇ.8.01ರಷ್ಟು ಅಂದರೆ 1.64 ಲಕ್ಷ ಅನರ್ಹ ಫಲಾನುಭವಿಗಳು ಹಣವನ್ನು ಪಡೆದಿದ್ದು ನಾಲ್ಕು ಮತ್ತು ಐದನೇ ಸ್ಥಾನವನ್ನು ಪಡೆದಿವೆ.

ಇದನ್ನೂ ಓದಿ: ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ಸಿಕ್ಕಿಂ ರಾಜ್ಯದಲ್ಲಿ ಕೇವಲ ಒಂದು ಶೇಕಡ ಅನರ್ಹ ಫಲಾನುಭವಿ ಹಣ ಪಡೆದಿದ್ದಾರೆ. ಈ ರಾಜ್ಯಗಳಲ್ಲಿ 1,364.13 ಕೋಟಿ ರೂಗಳನ್ನು 68.20 ಲಕ್ಷ ಕಂತುಗಳಲ್ಲಿ ಪಾವತಿಸಲಾಗಿದೆ. ಇದರಲ್ಲಿ 49.25 ಲಕ್ಷ ಕಂತುಗಳನ್ನು ಆದಾಯ ತೆರಿಗೆ ಪಾವತಿಸುವ ರೈತರಿಗೆ ನೀಡಿದ್ದರೆ, ದೇಶಾದ್ಯಂತ ಅನರ್ಹ ರೈತರಿಗೆ 18.95 ಲಕ್ಷ ಕಂತುಗಳನ್ನು ಪಾವತಿಸಲಾಗಿದೆ ಎಂದು ಆರ್.ಟಿ.ಐ ಅಂಕಿಅಂಶಗಳನ್ನು ಉಲ್ಲೇಖಿಸಿ ತಿಳಿಸಿದೆ.

ಈ ಯೋಜನೆಯಡಿಯಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ 2 ಸಾವಿರ ರೂಗಳನ್ನು ಮೂರು ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದು ಅಧಿಕ ಆದಾಯವನ್ನು ಹೊಂದಿರುವವರನ್ನು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಲಾಗಿದೆ.

ಸ್ಥಾಂಸ್ಥಿಕ ಭೂಮಾಲಿಕರು ಮಾತ್ರವಲ್ಲದೆ, ಒಂದು ಅಥವಾ ಹೆಚ್ಚಿನ ಸದಸ್ಯರು ಫಲಾನುಭವಿಗಳಲ್ಲಿರುವ ರೈತ ಕುಟುಂಬಗಳು, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು, ಮಾಜಿ ಮತ್ತು ಪ್ರಸ್ತುತ ಸಚಿವರು, ಸಂಸದರು, ಶಾಸಕರು, ಎಂಎಲ್‌ಸಿಗಳು, ಮೇಯರ್‌‌ಗಳು, ಮತ್ತು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಹಾಲಿ ಮತ್ತು ನಿವೃತ್ತ ಸರ್ಕಾರಿ ನೌಕರರು ಆದಾಯ ತೆರಿಗೆ ಪಾವತಿದಾರರು, ವೈದ್ಯರು, ಇಂಜಿನಿಯರ್‌ಗಳು ಸೇರಿದಂತೆ ಹಲವಾರು ವರ್ಗದ ರೈತರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...