Homeಮುಖಪುಟಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಡಿ 20.48 ಲಕ್ಷ ಅನರ್ಹ ಫಲಾನುಭವಿಗಳಿಗೆ 1,364 ಕೋಟಿ ರೂಪಾಯಿಗಳನ್ನು ಪಾವತಿ ಮಾಡಿದೆ ಎಂದು ಮಾಹಿತಿ ಹಕ್ಕು ಅರ್ಜಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಕೃಷಿ ಸಚಿವಾಲಯ ಉತ್ತರಿಸಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ಐದು ಎಕರೆಯೊಳಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ನೀಡುತ್ತಾ ಬರಲಾಗುತ್ತಿದೆ.

ಆರ್.ಟಿ.ಐ ಅರ್ಜಿಗೆ ಉತ್ತರಿಸಿರುವ ಕೇಂದ್ರ ಕೃಷಿ ಸಚಿವಾಲಯವು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಅನರ್ಹ ರೈತರು ಮತ್ತು ಆದಾಯ ತೆರಿಗೆ ಪಾವತಿಸುವವ ರೈತರಿಗೆ ಪ್ರೋತ್ಸಾಹಧನವನ್ನು ನೀಡಿದ್ದು ಇವರು ಎರಡು ವರ್ಗದ ಅನರ್ಹ ಫಲಾನುಭವಿಗಳು ಎಂಬುದನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಸರ್ಕಾರದಿಂದ ಮಾಹಿತಿ ಪಡೆದಿರುವ ಕಾಮನ್ವೆಲ್ತ್ ಮಾನವ ಹಕ್ಕುಗಳ ಉಪಕ್ರಮದ ಆರ್.ಟಿ.ಐ. ಅರ್ಜಿದಾರ ವೆಂಕಟೇಶ್ ನಾಯಕ್ “ಈ ಅನರ್ಹ ರೈತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಆದಾಯ ತೆರಿಗೆ ಪಾವತಿದಾರರ ವರ್ಗಕ್ಕೆ ಸೇರಿದವರು. ಉಳಿದ 44.41ರಷ್ಟು ರೈತರು ಅನರ್ಹ ರೈತ ವರ್ಗಕ್ಕೆ ಸೇರಿದವರು ಎಂದು ಹೇಳಿದ್ದಾರೆಂದು ವರದಿ ತಿಳಿಸಿದೆ.

ಮಾಧ್ಯಮ ವರದಿಗಳ ಪ್ರಕಾರ ಅನರ್ಹ ರೈತರಿಗೆ ವರ್ಗಾಯಿಸಲಾದ ಇಷ್ಟೊಂದು ಪ್ರಮಾಣದ ಹಣವನ್ನು ವಾಪಸ್ ಪಡೆಯಲು ಕ್ರಮಗಳನ್ನು ಆರಂಭಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ ಎಂದು ದಿವೈರ್.ಇನ್ ವರದಿಯಲ್ಲಿ ಉಲ್ಲೇಖಿಸಿದೆ.

ಆರ್.ಟಿ.ಐ ಕಾಯ್ದೆ 2005ರ ಅಡಿಯಲ್ಲಿ ದತ್ತಾಂಶ ಪಡೆದಿದ್ದು 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ ಆರಂಭಗೊಂಡಾಗಿನಿಂದ ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ. ಸರ್ಕಾರ ನೀಡಿದ ದತ್ತಾಂಶದಿಂದ ಹಣ ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ ಎಂಬ ಅಂಶ ಬೆಳಕಿಗೆ ಬರುತ್ತದೆ.

ಪಂಜಾಬ್, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಅನರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದುನ್ನು ವರದಿ ಬೊಟ್ಟು ಮಾಡಿದೆ. ದೇಶಾದ್ಯಂತ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಶೇ.23.16ರಷ್ಟು (4.74ಲಕ್ಷ) ಪಂಜಾಬ್ ರಾಜ್ಯದ ಅನರ್ಹ ರೈತರು ಹಣ ಪಡೆದಿದ್ದು ಮೊದಲ ಸ್ಥಾನದಲ್ಲಿದೆ. ಅಸ್ಸಾಂ 16.87ರಷ್ಟು (3.45) ಮಂದಿ, ಮಹಾರಾಷ್ಟ್ರ ಶೇ.13.99ರಷ್ಟು ಅನರ್ಹ ವ್ಯಕ್ತಿಗಳು ಹಣ ಪಡೆದಿದ್ದಾರೆ ಎಂದು ಆರ್.ಟಿ.ಐ. ಅರ್ಜಿಯಿಂದ ಬಹಿರಂಗಗೊಂಡಿದೆ. ಈ ಮೂರು ರಾಜ್ಯಗಳು ಅರ್ಧಕ್ಕಿಂತ ಹೆಚ್ಚು ಅಂದರೆ ಶೇ.54.03ರಷ್ಟು ಪಾಲನ್ನು ಪಡೆದಿವೆ. ಗುಜರಾತ್ ಶೇ.8.05ರಷ್ಟು ಅಂದರೆ 1.64 ಲಕ್ಷ, ಉತ್ತರಪ್ರದೇಶ ಶೇ.8.01ರಷ್ಟು ಅಂದರೆ 1.64 ಲಕ್ಷ ಅನರ್ಹ ಫಲಾನುಭವಿಗಳು ಹಣವನ್ನು ಪಡೆದಿದ್ದು ನಾಲ್ಕು ಮತ್ತು ಐದನೇ ಸ್ಥಾನವನ್ನು ಪಡೆದಿವೆ.

ಇದನ್ನೂ ಓದಿ: ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ಸಿಕ್ಕಿಂ ರಾಜ್ಯದಲ್ಲಿ ಕೇವಲ ಒಂದು ಶೇಕಡ ಅನರ್ಹ ಫಲಾನುಭವಿ ಹಣ ಪಡೆದಿದ್ದಾರೆ. ಈ ರಾಜ್ಯಗಳಲ್ಲಿ 1,364.13 ಕೋಟಿ ರೂಗಳನ್ನು 68.20 ಲಕ್ಷ ಕಂತುಗಳಲ್ಲಿ ಪಾವತಿಸಲಾಗಿದೆ. ಇದರಲ್ಲಿ 49.25 ಲಕ್ಷ ಕಂತುಗಳನ್ನು ಆದಾಯ ತೆರಿಗೆ ಪಾವತಿಸುವ ರೈತರಿಗೆ ನೀಡಿದ್ದರೆ, ದೇಶಾದ್ಯಂತ ಅನರ್ಹ ರೈತರಿಗೆ 18.95 ಲಕ್ಷ ಕಂತುಗಳನ್ನು ಪಾವತಿಸಲಾಗಿದೆ ಎಂದು ಆರ್.ಟಿ.ಐ ಅಂಕಿಅಂಶಗಳನ್ನು ಉಲ್ಲೇಖಿಸಿ ತಿಳಿಸಿದೆ.

ಈ ಯೋಜನೆಯಡಿಯಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ 2 ಸಾವಿರ ರೂಗಳನ್ನು ಮೂರು ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದು ಅಧಿಕ ಆದಾಯವನ್ನು ಹೊಂದಿರುವವರನ್ನು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಲಾಗಿದೆ.

ಸ್ಥಾಂಸ್ಥಿಕ ಭೂಮಾಲಿಕರು ಮಾತ್ರವಲ್ಲದೆ, ಒಂದು ಅಥವಾ ಹೆಚ್ಚಿನ ಸದಸ್ಯರು ಫಲಾನುಭವಿಗಳಲ್ಲಿರುವ ರೈತ ಕುಟುಂಬಗಳು, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು, ಮಾಜಿ ಮತ್ತು ಪ್ರಸ್ತುತ ಸಚಿವರು, ಸಂಸದರು, ಶಾಸಕರು, ಎಂಎಲ್‌ಸಿಗಳು, ಮೇಯರ್‌‌ಗಳು, ಮತ್ತು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಹಾಲಿ ಮತ್ತು ನಿವೃತ್ತ ಸರ್ಕಾರಿ ನೌಕರರು ಆದಾಯ ತೆರಿಗೆ ಪಾವತಿದಾರರು, ವೈದ್ಯರು, ಇಂಜಿನಿಯರ್‌ಗಳು ಸೇರಿದಂತೆ ಹಲವಾರು ವರ್ಗದ ರೈತರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...